ವಿಕಲಚೇತನರಿಗೆ ಕೌಶಲ್ಯ ತರಬೇತಿ ನೀಡಲು ರಾಜ್ಯದಲ್ಲಿ ಶೀಘ್ರದಲ್ಲೇ ಇನ್ಕ್ಯುಬೇಷನ್ ಸೆಂಟರ್ ಸ್ಥಾಪನೆ..!

ವಿಕಲಚೇತನರಿಗೆ ಕೌಶಲ್ಯ ತರಬೇತಿ ನೀಡುವುದು ಬಹಳ ಮುಖ್ಯವಾಗಿದ್ದು, ಇದಕ್ಕಾಗಿ ಐಟಿ, ಬಿಟಿ, ಕೌಶಲ್ಯ ಅಭಿವೃದ್ಧಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು ಒಟ್ಟಾಗಿ ಇನ್ಕ್ಯುಬೇಷನ್ ಸೆಂಟರ್ ಸ್ಥಾಪನೆಗೆ ಕೆಲಸ ಮಾಡುತ್ತವೆ.
file photo
ಸಂಗ್ರಹ ಚಿತ್ರ
Updated on

ಬೆಂಗಳೂರು: ವಿಕಲಚೇತನರಿಗೆ ಕೌಶಲ್ಯ ತರಬೇತಿ ನೀಡುವ ಮೂಲಕ ಅವರನ್ನು ಉದ್ಯೋಗಕ್ಕೆ ಅರ್ಹರನ್ನಾಗಿ ಮಾಡಲು ಹಾಗೂ ಉದ್ಯೋಗ ಕ್ಷೇತ್ರದಲ್ಲಿ ಒಳಗೊಳ್ಳುವಂತೆ ಮಾಡಲು ರಾಜ್ಯ ಸರ್ಕಾರ ಶೀಘ್ರದಲ್ಲೇ ಇನ್ಕ್ಯುಬೇಷನ್ ಸೆಂಟರ್ ಅನ್ನು ಪ್ರಾರಂಭಿಸಲಿದೆ.

ಬೆಂಗಳೂರಿನ ಲಲಿತ್ ಅಶೋಕ್ ಹೋಟೆಲ್‌ನಲ್ಲಿ ನಡೆಯುತ್ತಿರುವ ಮೂರು ದಿನಗಳ ‘ಬೆಂಗಳೂರು ಕೌಶಲ್ಯ ಶೃಂಗಸಭೆ–2025’ದಲ್ಲಿ ‘2032ರ ವೇಳೆಗೆ ಟ್ರಿಲಿಯನ್ ಡಾಲರ್ ಆರ್ಥಿಕತೆಗಾಗಿ ಶಿಕ್ಷಣ, ಕೌಶಲ್ಯ ಮತ್ತು ಕೈಗಾರಿಕೆಯ ಸಂಯೋಜನೆ” ವಿಷಯವಾಗಿ ನಡೆದ ಕಾರ್ಯಾಗಾರದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾತನಾಡಿದರು.

ವಿಕಲಚೇತನರಿಗೆ ಕೌಶಲ್ಯ ತರಬೇತಿ ನೀಡುವುದು ಬಹಳ ಮುಖ್ಯವಾಗಿದ್ದು, ಇದಕ್ಕಾಗಿ ಐಟಿ, ಬಿಟಿ, ಕೌಶಲ್ಯ ಅಭಿವೃದ್ಧಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು ಒಟ್ಟಾಗಿ ಇನ್ಕ್ಯುಬೇಷನ್ ಸೆಂಟರ್ ಸ್ಥಾಪನೆಗೆ ಕೆಲಸ ಮಾಡುತ್ತವೆ ಎಂದು ಹೇಳಿದರು.

ಈ ಪ್ರಸ್ತಾವನೆಯನ್ನು ನವೆಂಬರ್ 15 ರಂದು ಇಲಾಖೆಗಳಿಗೆ ಸಲ್ಲಿಸಲಾಗುವುದು. ಬೆಂಗಳೂರು ಟೆಕ್ ಶೃಂಗಸಭೆ 2025 ರ ಸಂದರ್ಭದಲ್ಲಿ ಪ್ರಕಟಿಸುತ್ತೇವೆಂದು ತಿಳಿಸಿದರು.

file photo
ಚಿತ್ತಾಪುರ ಪಥಸಂಚಲನವನ್ನು RSS ಪ್ರತಿಷ್ಠೆಯ ವಿಷಯವಾಗಿ ಪರಿಗಣಿಸಿದೆ: ಸಚಿವ ಪ್ರಿಯಾಂಕ್ ಖರ್ಗೆ

ಅಸಿಸ್ಟೆಕ್ ಫೌಂಡೇಶನ್‌ನ ಸಂಸ್ಥಾಪಕ ಪ್ರತೀಕ್ ಮಾಧವ್ ಅವರು ಮಾತನಾಡಿಈ ಹಿಂದೆ, ಕಾಗದ ಮತ್ತು ಪೆನ್ನು ಬಳಸಿ ವಿನ್ಯಾಸಗಳನ್ನು ರಚಿಸಲಾಗುತ್ತಿತ್ತು, ಈಗ ವಿನ್ಯಾಸಗಳನ್ನು ರಚಿಸಲು ನಮ್ಮಲ್ಲಿ ಅಡೋಬ್‌ನಂತಹ ಸಾಧನಗಳಿವೆ. ಇದನ್ನು ವಿಕಲಚೇತನರಿಗೆ ತಂತ್ರಜ್ಞಾನ ಮತ್ತು ಕೌಶಲ್ಯಗಳನ್ನು ಬಳಸಲು ತರಬೇತಿ ನೀಡಬೇಕು, ಉದಾಹರಣೆಗೆ, ದೃಷ್ಟಿಹೀನ ವ್ಯಕ್ತಿ ವಿಶ್ಲೇಷಣೆ ಮಾಡವು ಸಾಧ್ಯವಾಗಲಿಲ್ಲ. ಆದಾಗ್ಯೂ, ನಾವು ಆ ವ್ಯಕ್ತಿಗೆ ಡೇಟಾದಲ್ಲಿ ವಿಶ್ಲೇಷಣೆ ಮಾಡಲು ತರಬೇತಿ ನೀಡಿದ್ದೇವೆ. ಇದೀಗ ಅವರು ಬಹುರಾಷ್ಟ್ರೀಯ ಕಂಪನಿಯಲ್ಲಿ ಉದ್ಯೋಗಿಯಾಗಿದ್ದಾರೆಂದು ಹೇಳಿದರು.

ಸರ್ಕಾರವು ವಿಶ್ವದಾದ್ಯಂದ ಮೂರು ಮಿಲಿಯನ್ ಜನರನ್ನು ಉದ್ಯೋಗಕ್ಕೆ ಅರ್ಹರನ್ನಾಗಿ ಮಾಡಲು ಸುಮಾರು 3,000 ಕೋಟಿ ರೂ.ಗಳನ್ನು ಖರ್ಚು ಮಾಡಿದೆ. ಯುವಕರ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಮರು ಕೌಶಲ್ಯಕ್ಕೆ ಅರ್ಹರನ್ನಾಗಿ ಮಾಡಲು ಬೇರೆ ಯಾವುದೇ ರಾಜ್ಯವು ಇಷ್ಟೊಂದು ಹಣವನ್ನು ಖರ್ಚು ಮಾಡುತ್ತಿರಲಿಲ್ಲ. ನಾವು ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನು ಸಾಧಿಸುವ ಗುರಿಯನ್ನು ಹೊಂದಿದ್ದೇವೆ. ಎಲ್ಲಾ ಯುವಕರಿಗೆ ಉದ್ಯೋಗವನ್ನು ಭರವಸೆ ನೀಡಲು ಸಾಧ್ಯವಿಲ್ಲ. ಆದರೆ, ಅವರನ್ನು ಉದ್ಯೋಗಕ್ಕೆ ಅರ್ಹರನ್ನಾಗಿ ಮಾಡಬಹುದು ಎಂದು ತಿಳಿಸಿದರು.

ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಅವರು ಮಾತನಾಡಿ, ಸರ್ಕಾರಿ ಪರಿಕರ ಕೊಠಡಿ ಮತ್ತು ತರಬೇತಿ ಕೇಂದ್ರವು ಉದ್ಯೋಗ ನಿಯೋಜನೆಯಲ್ಲಿ ಶೇ.100ರಷ್ಟು ಗುರಿ ಸಾಧಿಸಿದೆ ಎಂದು ಹೇಳಿದರು.

ಜಿಟಿಟಿಸಿಗಳಲ್ಲಿ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶವನ್ನು ಕಳೆದ ವರ್ಷ 2,500 ರಿಂದ 2025 ರಲ್ಲಿ 6,000 ಕ್ಕೆ ಹೆಚ್ಚಿಸಲಾಗಿದೆ. ಪಠ್ಯಕ್ರಮವನ್ನು ಶೇಕಡಾ 70 ರಷ್ಟು ಪ್ರಾಯೋಗಿಕ ಮತ್ತು ಶೇಕಡಾ 30 ರಷ್ಟು ಥಿಯೇರಿಯೊಂದಿಗೆ ವಿನ್ಯಾಸಗೊಳಿಸಲಾಗಿದೆ. ಆದ್ದರಿಂದ, ಕೈಗಾರಿಕೆಗಳು ಅವರನ್ನು ಕೌಶಲ್ಯಪೂರ್ಣ ಮತ್ತು ಉದ್ಯಮಕ್ಕೆ ಸಿದ್ಧವೆಂದು ಕಂಡುಕೊಳ್ಳುವುದರಿಂದ ಶೇಕಡಾ 100 ರಷ್ಟು ಉದ್ಯೋಗಾವಕಾಶವಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com