

ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಲ(KMF) ಜಿಎಸ್ ಟಿ ಬೆಲೆ ಇಳಿಕೆಯ ಬೆನ್ನಲ್ಲೇ ನಂದಿನಿ ತುಪ್ಪದ ಬೆಲೆಯನ್ನು 610 ರೂಪಾಯಿಗಳಿಂದ 700ರೂಪಾಯಿಗೆ ಹೆಚ್ಚಳ ಮಾಡಿದೆ. ಈ ನಿರ್ಧಾರವನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ.
ಇದರಿಂದ ಹಾಲು ಉತ್ಪಾದಕರಿಗೆ ಹೆಚ್ಚಿನ ಅನುಕೂಲವಾಗುತ್ತದೆ ಎಂದು ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ನಂದಿನಿ ತುಪ್ಪದ ಬೆಲೆ ಏಕೆ ಏಕಾಏಕಿ 90 ರೂಪಾಯಿ ಹೆಚ್ಚಾಗಿದೆ ಎಂದು ಇಂದು ಮಾಧ್ಯಮ ಪ್ರತಿನಿಧಿಗಳು ದೆಹಲಿಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಪ್ರಶ್ನೆ ಮಾಡಿದರು.
ಅದಕ್ಕೆ ಉತ್ತರಿಸಿದ ಡಿ ಕೆ ಶಿವಕುಮಾರ್, ಇದರಿಂದ ರೈತರಿಗೆ ಒಳ್ಳೆದಾಗಲಿದೆ. ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಕೆಎಂಎಫ್ನ ಪ್ರಮುಖ ಉತ್ಪನ್ನವಾದ ನಂದಿನಿ ತುಪ್ಪದ ದರ ಹೆಚ್ಚಳವು ಹಾಲು ಉತ್ಪಾದಕರು ನ್ಯಾಯಯುತ ಬೆಲೆಯನ್ನು ಪಡೆಯಲು ಸಹಾಯ ಮಾಡುತ್ತದೆ ಎಂಬುದು ಅವರ ವಾದವಾಗಿದೆ.
Advertisement