

ದಾವಣಗೆರೆ: ಭದ್ರಾ ಕಾಲುವೆಗೆ ಕಾರು ಬಿದ್ದು ಇಬ್ಬರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಹೊಸೂರು ಗ್ರಾಮದಲ್ಲಿ ಸಂಭವಿಸಿದೆ.
ಕಾರಿನಲ್ಲಿದ್ದ ಮಲ್ಲಿಕಾರ್ಜುನ(29ವ) ಹಾಗೂ ಸಿದ್ದೇಶ್(38ವ) ಮೃತ ದುರ್ದೈವಿಗಳಾಗಿದ್ದಾರೆ. ದಾವಣಗೆರೆ ಮೂಲದ ಆರು ಜನ ಮಂಗಳೂರು ಕಡೆ ಪ್ರವಾಸಕ್ಕೆ ಹೋಗಿದ್ದು, ವಾಪಸ್ ಬರುವಾಗ ನಿದ್ದೆ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಭದ್ರಾ ಕಾಲುವೆಗೆ ಕಾರು ಬಿದ್ದಿದೆ.
ಈ ವೇಳೆ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟು ನಾಲ್ವರು ಈಜಿ ದಡ ಸೇರಿ ಪ್ರಾಣ ಕಾಪಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಸಂತೇಬೆನ್ನೂರು ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Advertisement