PUC ವಿದ್ಯಾರ್ಥಿಗಳಿಗೂ ಬಿಸಿಯೂಟ ಯೋಜನೆ ವಿಸ್ತರಣೆ..?

ಮುಂದಿನ ಶೈಕ್ಷಣಿಕ ವರ್ಷದಿಂದ, ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್‌ ಶಾಲೆಯ ಪಿಯುಸಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟವನ್ನು ಒದಗಿಸುತ್ತೇವೆ.
ಶಾಲಾ ಬಿಸಿಯೂಟ ಯೋಜನೆಯಲ್ಲಿ ವಿದ್ಯಾರ್ಥಿಗಳು (ಸಂಗ್ರಹ ಚಿತ್ರ)
ಶಾಲಾ ಬಿಸಿಯೂಟ ಯೋಜನೆಯಲ್ಲಿ ವಿದ್ಯಾರ್ಥಿಗಳು (ಸಂಗ್ರಹ ಚಿತ್ರ)
Updated on

ಬೆಂಗಳೂರು: ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಪಿಯುಸಿ ವಿದ್ಯಾರ್ಥಿಗಳಿಗೂ ವಿಸ್ತರಿಸುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶುಕ್ರವಾರ ಭರವಸೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಶುಕ್ರವಾರ ಆಯೋಜಿಸಿದ್ದ ರಾಜ್ಯಮಟ್ಟದ ಮಕ್ಕಳ ದಿನಾಚರಣೆ ಹಾಗೂ ಪೋಷಕ–ಶಿಕ್ಷಕರ ಸಭೆಯಲ್ಲಿ ನಡೆದ ಸಂವಾದದಲ್ಲಿ ಬೆಳಗಾವಿ ಜಿಲ್ಲೆ ಬೈಲಹೊಂಗಲದ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿ ರಾಕೇಶ್‌ ಪ್ರಶ್ನೆಗೆ ಉತ್ತರಿಸಿದ ಅವರು, ಪಿಯು ಕಾಲೇಜುಗಳಿಗೂ ಮಧ್ಯಾಹ್ನದ ಬಿಸಿಯೂಟ ಒದಗಿಸಬೇಕಿದ್ದರೆ ಬಜೆಟ್‌ನಲ್ಲೇ ಘೊಷಣೆ ಮಾಡಬೇಕು. ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.

ಮುಂದಿನ ಶೈಕ್ಷಣಿಕ ವರ್ಷದಿಂದ, ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್‌ ಶಾಲೆಯ ಪಿಯುಸಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟವನ್ನು ಒದಗಿಸುತ್ತೇವೆ. ಆದಾಗ್ಯೂ, ಎಲ್ಲಾ ಸರ್ಕಾರಿ ಕಾಲೇಜುಗಳಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟವನ್ನು ಒದಗಿಸುವ ಬಗ್ಗೆ ನಾವು ಇನ್ನೂ ನಿರ್ಧರಿಸಿಲ್ಲ. ಈ ಬಗ್ಗೆ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗುವುದು. ಅನುಮೋದನೆ ಸಿಕ್ಕಿದ್ದೇ ಆದರೆ, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಯೋಜನೆ ವಿಸ್ತರಿಸಲಾಗುವುದು ಎಂದು ತಿಳಿಸಿದರು.

ಈ ಹಿಂದೆ, ಮಧ್ಯಾಹ್ನದ ಊಟವನ್ನು 8 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿತ್ತು. ಈಗ ಅದನ್ನು 10ನೇ ತರಗತಿಯವರೆಗೆ ವಿಸ್ತರಿಸಲಾಗಿದೆ. ಇದಲ್ಲದೆ, ವಾರಕ್ಕೆ ಎರಡು ಬಾರಿ ಮೊಟ್ಟೆ ಮತ್ತು ಬಾಳೆಹಣ್ಣನ್ನು ನೀಡಲಾಗುತ್ತಿದೆ ಎಂದರು.

ಶಾಲಾ ಬಿಸಿಯೂಟ ಯೋಜನೆಯಲ್ಲಿ ವಿದ್ಯಾರ್ಥಿಗಳು (ಸಂಗ್ರಹ ಚಿತ್ರ)
ರಾಜ್ಯ ಬಜೆಟ್ 2025: ಅತಿಥಿ ಶಿಕ್ಷಕರು, ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಎಂ ಸಿಹಿ ಸುದ್ದಿ!

ಇದೇ ವೇಳೆ ಮೊಟ್ಟೆ/ಬಾಳೆಹಣ್ಣು ವಿಸ್ತರಣೆಗಾಗಿ 1,500 ಕೋಟಿ ರೂ. ಅನುದಾನವನ್ನು ಒದಗಿಸಿದ್ದಕ್ಕಾಗಿ ಅಜೀಂ ಪ್ರೇಮ್‌ಜಿ ಫೌಂಡೇಶನ್‌ಗೆ ಧನ್ಯವಾದ ಅರ್ಪಿಸಿದರು.

ಪಿಯು ಉಪನ್ಯಾಸಕರ ಸಂಘದ ಅಧ್ಯಕ್ಷ ನಿಂಗೇಗೌಡ ಎ.ಎಚ್. ಅವರು ಮಾತನಾಡಿ, ಪ್ರಸ್ತುತ, ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಸುಮಾರು 45 ಲಕ್ಷ ವಿದ್ಯಾರ್ಥಿಗಳು ಮಧ್ಯಾಹ್ನದ ಊಟದ ಪ್ರಯೋಜನ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಸುಮಾರು 2,000 ಸರ್ಕಾರಿ ಮತ್ತು ಅನುದಾನಿತ ಪದವಿ ಪೂರ್ವ ಕಾಲೇಜುಗಳಿದ್ದು, ಸುಮಾರು ಮೂರೂವರೆ ಲಕ್ಷ ವಿದ್ಯಾರ್ಥಿಗಳು ಅಲ್ಲಿ ಓದುತ್ತಿದ್ದಾರೆ. ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಮತ್ತಷ್ಟು ವಿದ್ಯಾರ್ಥಿಗಳಿಗೆ ವಿಸ್ತರಿಸಲು ಸುಮಾರು 195 ಕೋಟಿ ರೂ.ಗಳು ಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸುವ ಕಾರಣ ಈ ಯೋಜನೆ ಸಹಾಯಕವಾಗಿರುತ್ತದೆ ಎಂದು ಹೇಳಿದ್ದಾರೆ.

ಬಹುತೇಕ ಸರ್ಕಾರಿ ಪದವಿ ಪೂರ್ವ ಕಾಲೇಜು ಕ್ಯಾಂಪಸ್‌ಗಳು ಸರ್ಕಾರಿ ಪ್ರೌಢಶಾಲೆಗಳು ಮತ್ತು ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಅಥವಾ ಅವುಗಳ ಆವರಣದ ಹತ್ತಿರದಲ್ಲಿಯೇ ಇವೆ. ಈಗಾಗಲೇ ಅಡುಗೆಮನೆಯ ವ್ಯವಸ್ಥೆ ಇದೆ, ಆದ್ದರಿಂದ ಇದಕ್ಕಾಗಿ ಹೆಚ್ಚುವರಿ ಮೂಲಸೌಕರ್ಯಗಳನ್ನು ಒದಗಿಸುವ ಅಗತ್ಯವಿಲ್ಲ. ಆದ್ದರಿಂದ, ಯೋಜನೆಯನ್ನು ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ವಿಸ್ತರಿಸುವುದು ಕಷ್ಟಕರವಾಗುವುದಿಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com