ಬಾಗಲಕೋಟೆ: ರೈತರ ಟ್ರ್ಯಾಕ್ಟರ್​ಗಳಿಗೆ ಬೆಂಕಿ ಹಚ್ಚುತ್ತಿರುವ Video ವೈರಲ್; ಮೂರು FIR ದಾಖಲು

ಬಾಗಲಕೋಟೆಯ ಮುಧೋಳದಲ್ಲಿ ಬೆಂಬಲ ಬೆಲೆಗಾಗಿ ಕಬ್ಬು ಬೆಳಗಾರರು ಮಾಡಿದ್ದ ಪ್ರತಿಭಟನೆ ವೇಳೆ ಟ್ರ್ಯಾಕ್ಟರ್​ಗಳಿಗೆ ಬೆಂಕಿ, ಕಲ್ಲು ತೂರಾಟ ಮಾಡಿದ್ದ ಪ್ರಕರಣದ ಸಂಬಂಧ ಮೂರು ಪ್ರತ್ಯೇಕ ಎಫ್‌ಐಆರ್ ದಾಖಲಾಗಿವೆ.
Video screengrab
ರೈತರ ಟ್ರ್ಯಾಕ್ಟರ್​ಗಳಿಗೆ ಬೆಂಕಿ ಹಚ್ಚುತ್ತಿರುವ Video ದೃಶ್ಯ
Updated on

ಬಾಗಲಕೋಟೆಯ ಮುಧೋಳದಲ್ಲಿ ಬೆಂಬಲ ಬೆಲೆಗಾಗಿ ಕಬ್ಬು ಬೆಳಗಾರರು ಮಾಡಿದ್ದ ಪ್ರತಿಭಟನೆ ವೇಳೆ ಟ್ರ್ಯಾಕ್ಟರ್​ಗಳಿಗೆ ಬೆಂಕಿ, ಕಲ್ಲು ತೂರಾಟ ಮಾಡಿದ್ದ ಪ್ರಕರಣದ ಸಂಬಂಧ ಮೂರು ಪ್ರತ್ಯೇಕ ಎಫ್‌ಐಆರ್ ದಾಖಲಾಗಿವೆ. ಪ್ರತಿಭಟನೆ ವೇಳೆ ಉದ್ರಿಕ್ತ ಪ್ರತಿಭಟನಾಕರರು ಸಂಗಾನಟ್ಟಿ ಬಳಿ ಎರಡು ಟ್ರೇಲರ್​ನ ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿದ್ದರು. ನಂತರ‌ ಗೋದಾವರಿ ಕಾರ್ಖಾನೆ ಆವರಣದಲ್ಲಿನ 20ಕ್ಕೂ ಅಧಿಕ ಟ್ರ್ಯಾಕ್ಟರ್​​ಗಳಿಗೆ ಬೆಂಕಿ ಹಚ್ಚಲಾಗಿತ್ತು. ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚುತ್ತಿರುವ ವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋ ಆಧರಿಸಿ ಮೂವರು ಪ್ರತ್ಯೇಕ ಎಫ್ಐಆರ್ ದಾಖಲಿಸಲಾಗಿದೆ. ಅಲ್ಲದೆ ಇದೇ ವೇಳೆ ಎಎಸ್​ಪಿ ಮಹಾಂತೇಶ್ವರ ಜಿದ್ದಿ ಅವರ ಕಾಲು‌ ಮುರಿದಿತ್ತು. ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಕಲ್ಲು ತೂರಾಟ, ಪೊಲೀಸರಿಗೆ ಗಾಯ, ಪೊಲೀಸ್ ವಾಹನ ಜಖಂಗೊಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಭಟನಾಕರರ ಗುಂಪಿನ 10 ಜನರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ.

Video screengrab
ಬೆಂಗಳೂರು: ಕಸ ಸುಡುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು BSWML ಮುಂದು..!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com