ರಾಜ್ಯದ ಐದು ಕಡೆಗಳಲ್ಲಿ ವಿಶ್ವ ದರ್ಜೆಯ ಏರೋಸ್ಪೇಸ್, ಡಿಫೆನ್ಸ್ ಪಾರ್ಕ್ ಸ್ಥಾಪನೆ: ಡಿಸಿಎಂ ಡಿ.ಕೆ ಶಿವಕುಮಾರ್

ಈ ಮೂಲಕ ಅತ್ಯಾಧುನಿಕ ತಂತ್ರಜ್ಞಾನ ಸಾಮರ್ಥ್ಯವನ್ನು ಬಲಪಡಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಹೇಳಿದ್ದಾರೆ.
DCM DK Shivakumar
ಡಿಸಿಎಂ ಡಿಕೆ ಶಿವಕುಮಾರ್
Updated on

ಬೆಂಗಳೂರು: ರಾಜ್ಯದ ಐದು ಕಡೆಗಳಲ್ಲಿ ವಿಶ್ವ ದರ್ಜೆ ಗುಣಮಟ್ಟದ ಏರೋಸ್ಪೆಸ್ ಹಾಗೂ ರಕ್ಷಣಾ ಪಾರ್ಕ್ ಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಮುಂದಾಗಿದೆ.

ಈ ಮೂಲಕ ಅತ್ಯಾಧುನಿಕ ತಂತ್ರಜ್ಞಾನ ಸಾಮರ್ಥ್ಯವನ್ನು ಬಲಪಡಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಡಿಕೆ ಶಿವಕುಮಾರ್, ಕೌಶಲಯುಕ್ತ ಪ್ರತಿಭಾವಂತರಿಗೆ ಹೊಸ ಅವಕಾಶ ಸೃಷಿಸುವ ಮೂಲಕ ಏರೋಸ್ಪೆಸ್ ಹಾಗೂ ರಕ್ಷಣಾ ಸರಕುಗಳ ಉತ್ಪಾದನೆಯಲ್ಲಿ ರಾಜ್ಯದ ಮುಂಚೂಣಿಯನ್ನು ಬಲಪಡಿಸುವ ಗುರಿ ಹೊಂದಲಾಗಿದೆ ಎಂದಿದ್ದಾರೆ.

ಬೆಂಗಳೂರು, ಮೈಸೂರು, ಬೆಳಗಾವಿ, ತುಮಕೂರು ಮತ್ತು ಚಾಮರಾಜನಗರದಲ್ಲಿ ಇವುಗಳನ್ನು ಅಭಿವೃದ್ಧಿಪಡಿಸುತ್ತಿದ್ದು, 60,000 ಕೌಶಲ್ಯಯುಕ್ತ ಉದ್ಯೋಗದ ಸೃಷ್ಟಿ ಹಾಗೂ ರೂ.45,000 ಕೋಟಿ ಹೂಡಿಕೆಯನ್ನು ಆಕರ್ಷಿಸುವ ಉದ್ದೇಶ ಹೊಂದಿರುವುದಾಗಿ ಅವರು ತಿಳಿಸಿದ್ದಾರೆ.

DCM DK Shivakumar
ರಾಜ್ಯದ ಐದು ಕಡೆ ವಿಶ್ವದರ್ಜೆ ಏರೋಸ್ಪೇಸ್‌ ಪಾರ್ಕ್ ಸ್ಥಾಪನೆ:‌ ಸಿಎಂ ಸಿದ್ದರಾಮಯ್ಯ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com