ಶಬರಿಮಲೆಗೆ ತೆರಳುತ್ತಿದ್ದ ಮಂಡ್ಯದ ಅಯ್ಯಪ್ಪ ಮಾಲಾಧಾರಿಗಳ ಬಸ್‌ ಪಲ್ಟಿ; ಪವಾಡಸದೃಶ 33 ಮಂದಿ ಪಾರು; Video

ಯಾಲದಹಳ್ಳಿ‌ಕೊಪ್ಪಲು ಗ್ರಾಮದ 33 ಮಂದಿ ಅಯ್ಯಪ್ಪನ ಮಾಲೆ ಧರಿಸಿ ಸ್ವಾಮಿ ದರ್ಶನಕ್ಕೆ ಶಬರಿಮಲೆಗೆ ತೆರಳುತ್ತಿದ್ದರು.
Bus overturned
ಪಲ್ಟಿ ಹೊಡೆದ ಬಸ್
Updated on

ಮಂಡ್ಯ: ಶಬರಿಮಲೆಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದ್ದು, ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಯಾಲದಹಳ್ಳಿ ಕೊಪ್ಪಲು ಗ್ರಾಮದ 33 ಮಾಲಾಧಾರಿಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೇರಳದ ಕೊಟ್ಟಾಯಂ ಜಿಲ್ಲೆಯ ಎರುಮೇಲಿ ಬಳಿ ಅಪಘಾತ ಸಂಭವಿಸಿದೆ.

Bus overturned
ಅಂಕೋಲಾ ಬಳಿ ಟ್ಯಾಂಕರ್‌ ಪಲ್ಟಿ; ಮೀಥೇನ್ ಅನಿಲ ಸೋರಿಕೆ, ಸ್ಥಳದಲ್ಲಿ ನಿಷೇಧಾಜ್ಞೆ ಜಾರಿ!

ಯಾಲದಹಳ್ಳಿ‌ಕೊಪ್ಪಲು ಗ್ರಾಮದ 33 ಮಂದಿ ಅಯ್ಯಪ್ಪನ ಮಾಲೆ ಧರಿಸಿ ಸ್ವಾಮಿ ದರ್ಶನಕ್ಕೆ ಶಬರಿಮಲೆಗೆ ತೆರಳುತ್ತಿದ್ದರು. ಈ ವೇಳೆ ಕೇರಳದ ಏರಿಮಲೈ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಅದೃಷ್ಟವಶಾತ್‌ ಯಾವುದೇ ಅನಾಹುತವಿಲ್ಲದೇ ಬಸ್‌ನಲ್ಲಿದ್ದವರು ಪಾರಾಗಿದ್ದಾರೆ.

ಕೆಲ ಮಾಲಾಧಾರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಏರಿಮಲೈ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com