ಕೊಲೆ ಯತ್ನ ಆರೋಪ: BJP ಮುಖಂಡ ಮಣಿಕಂಠ ರಾಠೋಡ್​ ಬಂಧನ..!

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದಲ್ಲಿ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸರು ತಡರಾತ್ರಿ ಮಣಿಕಂಠ ರಾಠೋಡ್​ ಅವರನ್ನು ಬಂಧಿಸಿದ್ದಾರೆ.
BJP leader Manikanta Rathod has been arrested by the Nelogi Police
ಬಿಜೆಪಿ ನಾಯಕ ಮಣಿಕಂಠ ರಾಥೋಡ್ ಅವರನ್ನು ನೆಲೋಗಿ ಪೊಲೀಸರು ಬಂಧಿಸಿದ್ದಾರೆ.
Updated on

ಕಲಬುರಗಿ: ಕೊಲೆ ಯತ್ನ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರನ್ನು ಪೊಲೀಸರು ಶನಿವಾರ ಬಂಧಕ್ಕೊಳಪಡಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದಲ್ಲಿ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸರು ತಡರಾತ್ರಿ ಮಣಿಕಂಠ ರಾಠೋಡ್​ ಅವರನ್ನು ಬಂಧಿಸಿದ್ದಾರೆ. ಸದ್ಯ ಮಣಿಕಂಠ ರಾಠೋಡ್​ನನ್ನು ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಜೇವರ್ಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಾಟಿ ಔಷಧಿ ಕೊಡುತ್ತಿದ್ದ ರಶೀದ್ ಮತ್ಯಾ ಎಂಬಾತನ ಬಂಧನಕ್ಕೆ ಆಗ್ರಹಿಸಿ ಮಣಿಕಂಠ ಜೇವರ್ಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ರಶೀದ್ ಬೆಂಬಲಿಗರೊಂದಿಗೆ ವಾಗ್ವಾದ ನಡೆಸಿ ಹೈಡ್ರಾಮಾ ಕ್ರಿಯೇಟ್ ಮಾಡಿದ್ದ.

ಈ ವೇಳೆ ರಶೀದ್ ಮತ್ಯಾ ಕಾರು ಚಾಲಕನ ತಲೆಗೆ ಕಲ್ಲೇಟು ಬಿದ್ದಿತ್ತು. ಸದ್ಯ ರಶೀದ್ ಮತ್ಯಾ ಚಾಲಕನ ದೂರಿನ ಮೇರೆಗೆ ಕೊಲೆ ಯತ್ನ ಆರೋಪದಲ್ಲಿ ಮಣಿಕಂಠ ರಾಠೋಡ್​​ನನ್ನು ಬಂಧಿಸಲಾಗಿದೆ.

BJP leader Manikanta Rathod has been arrested by the Nelogi Police
ಮಣಿಕಂಠ ರಾಥೋಡ್ ಬಹಿರಂಗ ಬೆದರಿಕೆ! ಬಿಜೆಪಿ ನಾಯಕರಿಗೆ ಪ್ರಿಯಾಂಕ್ ಖರ್ಗೆ ಸವಾಲು!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com