ಹೊರಗುತ್ತಿಗೆ ಅನ್ಯಾಯ ಸರಿಪಡಿಸಲು ರಾಜ್ಯಸರ್ಕಾರ ಬದ್ಧ: ಸಚಿವ ಎಚ್.ಕೆ ಪಾಟೀಲ್

ಕೇಂದ್ರ, ರಾಜ್ಯ ಸರ್ಕಾರಿ ಉದ್ಯೋಗಗಳಿಗೆ ಅರ್ಹತೆ ಮತ್ತು ಮೀಸಲು ಮಾನದಂಡಗಳನ್ನು ನಿರ್ಲಕ್ಷಿಸಿ ಹೊರಗುತ್ತಿಗೆ ಮೂಲಕನೇಮಕಮಾಡುವ ಪದ್ಧತಿ ಸರಿಯಲ್ಲ, ದಶಕಗಳಿಂದ ಸಂವಿಧಾನದ ಆಶಯಗಳಿಗೆ ವ್ಯತಿರಿಕ್ತವಾಗಿ ಇಂತಹ ಅಪಚಾರ ನಡೆಯುತ್ತಿದ್ದು, ಶೀಘ್ರವೇ ಇದನ್ನು ಕೊನೆಗಾಣಿಸಲು ಪ್ರಯತ್ನ ನಡೆಸುತ್ತಿದೆ.
HK. Patil
ಎಚ್.ಕೆ ಪಾಟೀಲ್
Updated on

ಬೆಂಗಳೂರು: ರಾಜ್ಯ ಸರ್ಕಾರ ಉದ್ಯೋಗ ಮತ್ತು ಮೀಸಲಾತಿಯಲ್ಲಿ ಹೊರಗುತ್ತಿಗೆ ಮೂಲಕ ಆಗುತ್ತಿರುವ ಅನ್ಯಾಯ ಸರಿಪಡಿಸಲು ಬದ್ಧವಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಮ ಎಚ್.ಕೆ. ಪಾಟೀಲ್‌ ಅವರು ಬುಧವಾರ ಹೇಳಿದರು.

ಡಾ.ಮನಮೋಹನ ಸಿಂಗ್ ಬೆಂಗಳೂರು ನಗರ ವಿವಿ ಡಾ.ಅಂಬೇಡ್ಕರ್‌ ಅಧ್ಯಯನ ಕೇಂದ್ರ, ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆಯ ಆಶ್ರಯದಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ, ಸಂವಿಧಾನ ಸೈನಿಕರ ಸಮಾವೇಶ ಉದ್ಘಾಟಿಸಿ ಸಚಿವರುಮಾತನಾಡಿದರು.

ಕೇಂದ್ರ, ರಾಜ್ಯ ಸರ್ಕಾರಿ ಉದ್ಯೋಗಗಳಿಗೆ ಅರ್ಹತೆ ಮತ್ತು ಮೀಸಲು ಮಾನದಂಡಗಳನ್ನು ನಿರ್ಲಕ್ಷಿಸಿ ಹೊರಗುತ್ತಿಗೆ ಮೂಲಕನೇಮಕಮಾಡುವ ಪದ್ಧತಿ ಸರಿಯಲ್ಲ, ದಶಕಗಳಿಂದ ಸಂವಿಧಾನದ ಆಶಯಗಳಿಗೆ ವ್ಯತಿರಿಕ್ತವಾಗಿ ಇಂತಹ ಅಪಚಾರ ನಡೆಯುತ್ತಿದ್ದು, ಶೀಘ್ರವೇ ಇದನ್ನು ಕೊನೆಗಾಣಿಸಲು ಪ್ರಯತ್ನ ನಡೆಸುತ್ತಿದೆ ಎಂದು ಹೇಳಿದರು.

ಇದೇ ವೇಳೆ ಕನ್ನಡ ಮತ್ತು ಇಂಗ್ಲಿಷ್ ಎರಡರಲ್ಲೂ ಇರುವ ಭಾರತದ ಸಂವಿಧಾನದ 4 ನೇ ದ್ವಿಭಾಷಾ ಆವೃತ್ತಿಯನ್ನು ಲೋಕಾರ್ಪಣೆ ಮಾಡಿದರು.

HK. Patil
ಜಲವಿವಾದ ಸಮಸ್ಯೆ ಪರಿಹಾರಕ್ಕೆ ಪ್ರಧಾನಿ ಮಧ್ಯಸ್ಥಿಕೆ ಅಗತ್ಯ: ಹೆಚ್.ಕೆ.ಪಾಟೀಲ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com