ಉಡುಪಿ: ಪ್ರಧಾನಿ ಮೋದಿಗೆ "ಭಾರತ ಭಾಗ್ಯ ವಿಧಾತ" ಬಿರುದು ನೀಡಿ ಸನ್ಮಾನ

ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಭಾರತ ಭಾಗ್ಯ ವಿಧಾತ ಬಿರುದು ನೀಡಿ, ಸನ್ಮಾನಿಸಿದರು.
PM modi
ವಿಶ್ವ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ
Updated on

ಉಡುಪಿ: ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಹಮ್ಮಿಕೊಂಡಿರುವ ಲಕ್ಷಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಭಾಗಿಯಾದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಭಾರತ ಭಾಗ್ಯ ವಿಧಾತ ಬಿರುದು ನೀಡಿ ಸನ್ಮಾನಿಸಲಾಯಿತು.

ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು, ಬಿರುದು ನೀಡಿ ಸನ್ಮಾನಿಸಿದರು. ಬಳಿಕ ಕಾಶಿ ಕಾರಿಡಾರ್‌ ರೀತಿಯಲ್ಲಿ ಉಡುಪಿ ಕಾರಿಡಾರ್‌ ಅಭಿವೃದ್ಧಿ ಪಡಿಸುವಂತೆ ಅವರು ಮನವಿ ಮಾಡಿದರು.

ಲಕ್ಷ ಕಂಠ ಗೀತಾ ಕಾರ್ಯಕ್ರಮದ ಅಂಗವಾಗಿ ಭಗವದ್ಗೀತೆಯ 15ನೇ ಅಧ್ಯಾಯದ ಕೊನೆಯ ಕೆಲವು ಶ್ಲೋಕಗಳನ್ನು ಸಾಮೂಹಿಕವಾಗಿ ಪಠಣ ಮಾಡಲಾಯಿತು.

ಬಳಿಕ ಮೋದಿ ಅವರು, ’ಎಲ್ಲರಿಗೂ ನಮಸ್ಕಾರ..‘ ಎಂದು ಕನ್ನಡದಲ್ಲಿ ಮಾತು ಆರಂಭಿಸಿ, ಕನಕದಾಸರಿಗೆ ನಮಿಸುವ ಪುಣ್ಯ ನನಗೆ ಸಿಕ್ಕಿದೆ. ನನ್ನಂತ ಎಲ್ಲಾ ಭಕ್ತರಿಗೂ ಕಿಂಡಿಯ ಮೂಲಕ ಕೃಷ್ಣ ದರ್ಶನ ಆಗುವಂತೆ ಮಾಡಿದ್ದು ಕನಕದಾಸರು. ಭಗವಾನ್ ಕೃಷ್ಣನ ಪ್ರೇರಣೆಯಿಂದಲೇ ಕೆಲವೊಂದು ಯೋಜನೆಗಳನ್ನ ಮಾಡಲಾಗಿದೆ ಎಂದು ಹೇಳಿದರು.

PM modi
ಉಡುಪಿಯ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪ್ರಧಾನಿ ಭಾಗಿ: ಭಗವದ್ಗೀತೆಯ 15ನೇ ಅಧ್ಯಾಯ ಪಠಿಸಿದ ಮೋದಿ, ಸ್ವರ್ಣಲೇಪಿತ ಕನಕನ ಕಿಂಡಿ ಅನಾವರಣ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com