ಮಹಾರಾಷ್ಟ್ರ ಸರ್ಕಾರ 50 ಟಿಎಂಸಿ ಅಡಿ ನೀರನ್ನು ಅಕ್ರಮವಾಗಿ ಸಂಗ್ರಹಿಸಿದೆ: ಸಚಿವ ಎಂಬಿ ಪಾಟೀಲ್

'ನಮ್ಮ ರಾಜ್ಯಕ್ಕೆ ನ್ಯಾಯ ದೊರಕಿಸಿಕೊಡಲು ಈ ವಿಷಯವನ್ನು ಕೇಂದ್ರ ಸರ್ಕಾರ ಮತ್ತು ಕೇಂದ್ರ ಜಲ ಆಯೋಗಕ್ಕೆ ತಿಳಿಸುವ ಸಾಧ್ಯತೆಗಳನ್ನು ನಾವು ನೋಡುತ್ತೇವೆ' ಎಂದು ಅವರು ಹೇಳಿದರು.
Minister MB Patil
ಸಚಿವ ಎಂಬಿ ಪಾಟೀಲ್
Updated on

ವಿಜಯಪುರ: ಬಚಾವತ್ ಅವಾರ್ಡ್ ಅಡಿ ಹಂಚಿಕೆ ಮಾಡಿದ್ದಕ್ಕಿಂತ ಸುಮಾರು 50 ಟಿಎಂಸಿ ಅಡಿ ಹೆಚ್ಚುವರಿ ನೀರನ್ನು ಅಕ್ರಮವಾಗಿ ಸಂಗ್ರಹಿಸಲಾಗಿದೆ ಎಂದು ಕರ್ನಾಟಕ ಬೃಹತ್ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

'ಒಟ್ಟು ನೀರಿನ ಸಂಗ್ರಹದ ಬಗ್ಗೆ ನಮಗೆ ಸ್ಪಷ್ಟ ಮಾಹಿತಿ ಇಲ್ಲದ ಕಾರಣ ಇದು ನಮ್ಮ ಅಂದಾಜು ಮಾತ್ರ. ಮಹಾರಾಷ್ಟ್ರವು 50 ಟಿಎಂಸಿ ಅಡಿಗಿಂತ ಹೆಚ್ಚು ನೀರನ್ನು ಸಂಗ್ರಹಿಸಿದೆ ಎಂದು ನಾವು ಭಾವಿಸುತ್ತೇವೆ' ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಪಾಟೀಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

'ಮಹಾರಾಷ್ಟ್ರ ಸರ್ಕಾರವು ತನ್ನ ಅಣೆಕಟ್ಟುಗಳ ಎತ್ತರವನ್ನು ಹೆಚ್ಚಿಸುವ ಮೂಲಕ ಅಥವಾ ನೀರನ್ನು ಸಂಗ್ರಹಿಸಲು ಸಣ್ಣ ಜಲಾಶಯಗಳನ್ನು ನಿರ್ಮಿಸುವ ಮೂಲಕ ಹೆಚ್ಚಿನ ನೀರನ್ನು ಸಂಗ್ರಹಿಸಿದೆ. ಅಂತರರಾಜ್ಯ ನೀರು ಹಂಚಿಕೆ ಸಮಸ್ಯೆಗಳನ್ನು ಮೇಲ್ವಿಚಾರಣೆ ಮಾಡುವ ಕೇಂದ್ರ ಜಲ ಆಯೋಗಕ್ಕೂ ಮಹಾರಾಷ್ಟ್ರ ಸರ್ಕಾರ ಈ ಬಗ್ಗೆ ತಿಳಿಸಿಲ್ಲ' ಎಂದು ಅವರು ಹೇಳಿದರು.

ಕರ್ನಾಟಕ ನೀರಾವರಿ ನಿಗಮ ಲಿಮಿಟೆಡ್ ಅಧಿಕಾರಿಗಳು ಹೆಚ್ಚಿನ ನೀರನ್ನು ಸಂಗ್ರಹಿಸುತ್ತಿರುವ ಬಗ್ಗೆ ಪರಿಶೀಲಿಸಲು ಹೋಗಿದ್ದಾಗ ಮಹಾರಾಷ್ಟ್ರ ಸರ್ಕಾರ ಅವರೊಂದಿಗೆ ಸಹಕರಿಸಲಿಲ್ಲ. ಕರ್ನಾಟಕ ಈ ಬಗ್ಗೆ ತಕರಾರು ಎತ್ತುವ ಸಾಧ್ಯತೆಗಳನ್ನು ಅನ್ವೇಷಿಸುವ ಕುರಿತು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುವುದಾಗಿ ಹೇಳಿದರು.

Minister MB Patil
ಪ್ರವಾಹಕ್ಕೆ ಕಲಬುರಗಿ ತತ್ತರ: ಮನೆಗಳಿಗೆ ನುಗ್ಗಿದ ನೀರು, ಹಸುಗೂಸು ಹೊತ್ತು ಮೇಲ್ಚಾವಣಿಯಲ್ಲಿ ಬಾಣಂತಿ ಆಶ್ರಯ!

'ನಮ್ಮ ರಾಜ್ಯಕ್ಕೆ ನ್ಯಾಯ ದೊರಕಿಸಿಕೊಡಲು ಈ ವಿಷಯವನ್ನು ಕೇಂದ್ರ ಸರ್ಕಾರ ಮತ್ತು ಕೇಂದ್ರ ಜಲ ಆಯೋಗಕ್ಕೆ ತಿಳಿಸುವ ಸಾಧ್ಯತೆಗಳನ್ನು ನಾವು ನೋಡುತ್ತೇವೆ' ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com