"ಹೊಸ ಮನೆ ಗೃಹಪ್ರವೇಶಕ್ಕೆ ಯಾರಿಗೂ ಆಹ್ವಾನವಿಲ್ಲ; ನನ್ನ ಅದೃಷ್ಟದ ಮನೆ ಬೇರೆಯದ್ದೇ ಇದೆ.., 2 ಬಾರಿ ಸಿಎಂ ಆಗಲು ಅದೇ ಕಾರಣ": Siddaramaiah

ಸಿಎಂ ಸಿದ್ದರಾಮಯ್ಯ ಹೊಸ ಮನೆ ನಿರ್ಮಿಸಿದರೂ ಈಗ ವಾಸವಿರುವ ಮರಿಸ್ವಾಮಿ ಮನೆಯನ್ನು ಹಾಗೆಯೇ ಉಳಿಸಿಕೊಳ್ಳುವ ಆಸಕ್ತಿ ತೋರಿದ್ದಾರೆ.
Siddaramaiah
ಸಿಎಂ ಸಿದ್ದರಾಮಯ್ಯ online desk
Updated on

ಮೈಸೂರು: ಮೈಸೂರಿನಲ್ಲಿ ತಮ್ಮ ನೂತನ ಮನೆಯ ಗೃಹ ಪ್ರವೇಶದ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಗೃಹಪ್ರವೇಶ ಕಾರ್ಯಕ್ರಮಕ್ಕೆ ಯಾರಿಗೂ ಆಹ್ವಾನವಿಲ್ಲ. ಇದು ಕೇವಲ ಕೌಟುಂಬಿಕ ಸಮಾರಂಭವಾಗಿರಲಿದೆ ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಹೊಸ ಮನೆ ನಿರ್ಮಿಸಿದರೂ ಈಗ ವಾಸವಿರುವ ಮರಿಸ್ವಾಮಿ ಮನೆಯನ್ನು ಹಾಗೆಯೇ ಉಳಿಸಿಕೊಳ್ಳುವ ಆಸಕ್ತಿ ತೋರಿದ್ದಾರೆ. 'ನಾನು ಈಗ ಇರುವ ಮನೆ ನನ್ನದಲ್ಲ, ಮರಿಸ್ವಾಮಿ ಅವರದ್ದು. ಮರಿಸ್ವಾಮಿಯೇ ನನಗೆ ಹಾಗೂ ನನ್ನ ಮಗನಿಗೆ ಅನ್ನದಾತ. ಹೊಸ ಮನೆಗೆ ಸ್ಥಳಾಂತರಗೊಂಡ ನಂತರವೂ, ಮರಿಸ್ವಾಮಿ ಅವರು ಈ ಮನೆಯನ್ನು ಖಾಲಿ ಇಟ್ಟರೆ, ಅದನ್ನು ಸಾರ್ವಜನಿಕರ ಭೇಟಿಗಾಗಿ ಬಳಸಿಕೊಳ್ಳುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Siddaramaiah
ರಾಹುಲ್ ಒಬ್ಬಂಟಿ ಅಲ್ಲ, ಅವರೊಂದಿಗೆ ಕೋಟ್ಯಾಂತರ ಕಾರ್ಯಕರ್ತರಿದ್ದಾರೆಂಬುದನ್ನು ಕೊಲೆಗಡುಕ ಮನಸ್ಸುಗಳಿಗೆ ತಿಳಿದಿರಲಿ: BJPಗೆ ಸಿಎಂ ಸಿದ್ದರಾಮಯ್ಯ

ಡಿಸೆಂಬರ್‌ನಲ್ಲಿ ಸಿಎಂ ಸಿದ್ದರಾಮಯ್ಯ ನೂತನ ಮನೆಯ ಗೃಹಪ್ರವೇಶ ನಡೆಯುವ ಸಾಧ್ಯತೆ ಇದೆ. ಮೈಸೂರಿಗೆ ಬಂದರೆ ತಾವು ಮರಿಸ್ವಾಮಿ ಎಂಬುವವರ ಮನೆಯಲ್ಲಿ ಉಳಿದುಕೊಳ್ಳುತ್ತಿದ್ದೆ. ಇದು ನನ್ನ ಅದೃಷ್ಟದ ಮನೆ. ಎರಡು ಬಾರಿ ಮುಖ್ಯಮಂತ್ರಿ ಸ್ಥಾನ ಅಲಂಕರಿಸುವ ಅದೃಷ್ಟ ಒದಗಿ ಬಂದಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com