ಸೆಲ್ಫೀ ತೆಗೆಯಲು ಹೋಗಿ ಸಮುದ್ರಪಾಲಾದ ಪ್ರವಾಸಿಗ..!

ಮೃತದೇಹವನ್ನು ಗೋಕರ್ಣದ ಪೊಲೀಸರು ಹಾಗೂ ಲೈಫ್ ಗಾರ್ಡ ಸಿಬ್ಬಂದಿ ಸಮುದ್ರದ ಮೇಲೆ ತಂದಿದ್ದು, ಶವವನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನೆ ಮಾಡಿದ್ದಾರೆ.
File photo
ಸಂಗ್ರಹ ಚಿತ್ರ
Updated on

ಕಾರವಾರ: ಸೆಲ್ಫೀ ತೆಗೆಯಲು ಹೋಗಿ ಸಮುದ್ರದಲ್ಲಿ ಮುಳುಗಿ ಶಿವಮೊಗ್ಗ ಮೂಲದ ಪ್ರವಾಸಿಗ ದಾರುಣ ಸಾವನ್ನಪಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಓಂ ಕಡಲ ತೀರದಲ್ಲಿ ನಡೆದಿದೆ.

ಶಿವಮೊಗ್ಗ ಮೂಲದ ಅಸ್ಲಾಂ (45) ಮೃತ ವ್ಯಕ್ತಿ. ಅಸ್ಲಾಂ ಶಿವಮೊಗ್ಗ ದಿಂದ 10ಜನರ ಜೊತೆಯಲ್ಲಿ ಗೋಕರ್ಣಕ್ಕೆ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಓಂ ಬೀಚ್ ನಲ್ಲಿ ಕಲ್ಲುಬಂಡೆಯ ಮೇಲೆ ಸೆಲ್ಫೀ ತೆಗೆಯುವಾಗ ಕಾಲುಜಾರಿ ಬಿದ್ದು ಸಮುದ್ರಪಾಲಾಗಿದ್ದಾರೆ.

ಮೃತದೇಹವನ್ನು ಗೋಕರ್ಣದ ಪೊಲೀಸರು ಹಾಗೂ ಲೈಫ್ ಗಾರ್ಡ ಸಿಬ್ಬಂದಿ ಸಮುದ್ರದ ಮೇಲೆ ತಂದಿದ್ದು, ಶವವನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನೆ ಮಾಡಿದ್ದಾರೆ. ಘಟನೆ ಸಂಬಂಧ ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

File photo
ಬೆಳಗಾವಿ: ದಸರಾ ರಜೆಗೆ ಹೋಗಿದ್ದ ಮೂವರು ಮಹಾರಾಷ್ಟ್ರ ಸಮುದ್ರದಲ್ಲಿ ಮುಳುಗಿ ಸಾವು- ನಾಲ್ವರು ನಾಪತ್ತೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com