
ಬೆಂಗಳೂರು: ಬೆಂಗಳೂರಿಗರ ಜೀವನಾಡಿ ಆಗಿರುವ ನಮ್ಮ ಮೆಟ್ರೋಗೆ 'ಬಸವ ಮೆಟ್ರೋ' ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದ ಗೇಟ್ ಸಂಖ್ಯೆ 4ರ ಗಾಯತ್ರಿ ವಿಹಾರದಲ್ಲಿ ನಡೆದ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಬಣ್ಣಿಸಿದರು. ಬಸವ ತತ್ವಗಳು ಸಂವಿಧಾನದ ಆಶಯಗಳೊಂದಿಗೆ ಹೊಂದಿಕೊಂಡಿವೆ. ಮುಂದಿನ ವರ್ಷ ವಚನ ವಿಶ್ವವಿದ್ಯಾಲಯ ಸ್ಥಾಪಿಸುವುದಾಗಿಯೂ ಭರವಸೆ ನೀಡಿದರು.
Advertisement