ಸ್ಪೀಕರ್ ಯು.ಟಿ ಖಾದರ್ ಸೇರಿ ಮೂವರಿಗೆ ಬೆಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್

ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಸೆಂಟ್ರಲ್ ಕಾಲೇಜು ಆವರಣದಲ್ಲಿ ಬುಧವಾರ ಜರುಗುವ ಘಟಿಕೋತ್ಸವದಲ್ಲಿ ಈ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುವುದು
Speaker UT Khader to Be Conferred Honorary Doctorate by Bengaluru University
ಯುಟಿ ಖಾದರ್
Updated on

ಬೆಂಗಳೂರು: ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಸೇರಿದಂತೆ ಮೂವರಿಗೆ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲು ನಿರ್ಧರಿಸಿದೆ.

ಅಕ್ಟೋಬರ್ 8 ರಂದು ನಡೆಯುವ ವಿವಿಯ 60ನೇ ವಾರ್ಷಿಕ ಘಟಿಕೋತ್ಸವದಲ್ಲಿ ಯುಟಿ ಖಾದರ ಅವರ ಜೊತೆಗೆ ವಿಧಾನ ಪರಿಷತ್ ಮಾಜಿ ಸದಸ್ಯ ಡಿ. ಮಾದೇಗೌಡ ಮತ್ತು ಜೆ.ಪಿ. ಅಗ್ರಿ ಜೆನೆಟಿಕ್ಸ್ ಪ್ರೈವೇಟ್ ಲಿಮಿಟೆಡ್ ನ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿರುವ ಡಾ.ಟಿ.ಬಿ.ಪ್ರಸನ್ನ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ.

ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಸೆಂಟ್ರಲ್ ಕಾಲೇಜು ಆವರಣದಲ್ಲಿ ಬುಧವಾರ ಜರುಗುವ ಘಟಿಕೋತ್ಸವದಲ್ಲಿ ಈ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುವುದು ಎಂದು ಬೆಂಗಳೂರು ವಿವಿ ಕುಲಪತಿ ಎಸ್.ಎಂ.ಜಯಕರ್ ಅವರು ತಿಳಿಸಿದ್ದಾರೆ.

Speaker UT Khader to Be Conferred Honorary Doctorate by Bengaluru University
ಬೋಳಿಯಾರ್ ಪ್ರಕರಣದಲ್ಲಿ ಹೊರಗಿನವರು ಮೂಗು ತೂರಿಸುವುದು ಬೇಡ: ಸ್ಪೀಕರ್ ಯು.ಟಿ.ಖಾದರ್

ಬೆಂಗಳೂರು ವಿಶ್ವವಿದ್ಯಾಲಯದ ಕುಲಾಧಿಪತಿಯಾಗಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಯಾಗಿ ಭಾಗವಹಿಸುವ ಡಿ.ಆರ್.ಡಿ.ಎಲ್.ನ ನಿವೃತ್ತ ನಿರ್ದೇಶಕ, ಪದ್ಮಶ್ರೀ ಪುರಸ್ಕೃತ ಡಾ.ಪ್ರಹ್ಲಾದ ರಾಮರಾವ್ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಸಹ ಉಪಸ್ಥಿತರಿರುವರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com