ಪಂಚಭೂತಗಳಲ್ಲಿ ಹಿರಿಯ ಪತ್ರಕರ್ತ ಟಿಜೆಎಸ್ ಜಾರ್ಜ್ ಲೀನ; ಸಕಲ ಸರ್ಕಾರಿ ಗೌರವಗಳೊಂದಿಗೆ 'ಅಕ್ಷರ ಮಾಂತ್ರಿಕ'ನ ಅಂತ್ಯಕ್ರಿಯೆ

ಪೊಲೀಸ್ ಬ್ಯಾಂಡ್ ಮೂಲಕ ರಾಷ್ಟ್ರಗೀತೆ ನುಡಿಸಿ ಪೊಲೀ ಸರಿಂದ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸುವ ಮೂಲಕ ಮೃತರಿಗೆ ಸರ್ಕಾರಿ ಗೌರವ ಸಲ್ಲಿಸಲಾಯಿತು.
Last rites of veteran journalist TJS George
ಸಕಲ ಸರ್ಕಾರಿ ಗೌರವಗಳೊಂದಿಗೆ ಟಿಜೆಎಸ್ ಜಾರ್ಜ್ ಅಂತ್ಯಕ್ರಿಯೆ.
Updated on

ಬೆಂಗಳೂರು: ಹಿರಿಯ ಪತ್ರಕರ್ತ, ಬರಹಗಾರ ಮತ್ತು ಅಂಕಣಕಾರ ಟಿಜೆಎಸ್ ಜಾರ್ಜ್ ಅವರ ಅಂತ್ಯಕ್ರಿಯೆ ಭಾನುವಾರ ಬೆಂಗಳೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು,

ಹೆಬ್ಬಾಳದ ಚಿತಾಗಾರದಲ್ಲಿ ಮಧ್ಯಾಹ್ನ 1.30 ರಿಂದ 2.30 ರವರೆಗೆ ಟಿಜೆಎಸ್ ಜಾರ್ಜ್ ಅವರ ಪಾರ್ಥೀವ ಶರೀರವನ್ನು ಸಾರ್ವಜನಿಕ ಗೌರವಕ್ಕಾಗಿ ಇರಿಸಲಾಗಿತ್ತು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ರಾಜಕೀಯ, ಪತ್ರಿಕೋದ್ಯಮ, ಸಾಹಿತ್ಯ, ವಿವಿಧ ಕ್ಷೇತ್ರಗಳ ಹಲವು ಗಣ್ಯರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಅಗಲಿದ ಅಕರ ಮಾಂತ್ರಿಕನಿಗೆ ವಿದಾಯ ಹೇಳಿದರು.

ನಂತರ ಟಿಜೆಎಸ್ ಜಾರ್ಜ್ ಅವರ ಪುತ್ರ ಜೀತ್ ಫೈಲ್, ಪುತ್ರಿ ಶೇಬಾ ಥೈಲ್ ಸೇರಿ ಕುಟುಂಬಸ್ಥರು ದೇವ ರಲ್ಲಿ ಪ್ರಾರ್ಥನೆ ಸಲ್ಲಿಸಿ ಮಧ್ಯಾಹ್ನ 3ಕ್ಕೆ ಚಿತಾಗಾರದಲ್ಲಿ ಅಗ್ನಿಸ್ಪರ್ಶ ನೆರವೇರಿಸಿದರು.

ಇದಕ್ಕೂ ಮುನ್ನ ಪೊಲೀಸ್ ಬ್ಯಾಂಡ್ ಮೂಲಕ ರಾಷ್ಟ್ರಗೀತೆ ನುಡಿಸಿ ಪೊಲೀ ಸರಿಂದ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸುವ ಮೂಲಕ ಮೃತರಿಗೆ ಸರ್ಕಾರಿ ಗೌರವ ಸಲ್ಲಿಸಲಾಯಿತು. ಬಳಿಕ ಅಧಿಕಾರಿಗಳು ಮೃತದೇಹದ ಮೇಲೆ ಹೊದಿಸಿದ್ದ ರಾಷ್ಟ್ರಧ್ವಜ ವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದರು.

ಜಾರ್ಜ್ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದು, 2 ತಿಂಗಳಿನಿಂದ ಆರೋಗ್ಯ ಮತ್ತಷ್ಟು ಕ್ಷೀಣಿಸಿತ್ತು. ಕಳೆದ ವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಸಣ್ಣ ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಕೊನೆಯುಸಿರೆಳೆದಿದ್ದರು.

Last rites of veteran journalist TJS George
Watch | ಖ್ಯಾತ ಪತ್ರಕರ್ತ, ಲೇಖಕ ಟಿಜೆಎಸ್ ಜಾರ್ಜ್ ನಿಧನ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com