Representational image
ಸಾಂದರ್ಭಿಕ ಚಿತ್ರ

ಯಾದಗಿರಿ: ದೈಹಿಕ ಸಂಪರ್ಕ ನಿರಾಕರಿಸಿದ ಪತ್ನಿಯನ್ನು ಕೊಚ್ಚಿ ಕೊಂದ ಪತಿ

ಮರೆಮ್ಮ (35) ಮೃತ ಪತ್ನಿ. ಸಂಗಪ್ಪ ಕೊಲೆ ಮಾಡಿದ ಪತಿ. ಸದ್ಯ ಘಟನಾ ಸ್ಥಳಕ್ಕೆ ಸುರಪುರ ಠಾಣೆಯ ಪೊಲೀಸರು ಭೇಟಿ ನೀಡಿ ಸ್ಥಳ ಮಹಜರು ನಡೆಸಿದ್ದು, ಪ್ರಕರಣ ದಾಖಲಿಸಿದ್ದಾರೆ. ಸಂಗಪ್ಪನನ್ನು ಬಂಧಿಸಲಾಗಿದೆ.
Published on

ಯಾದಗಿರಿ: ದೈಹಿಕ ಸಂಪರ್ಕಕ್ಕೆ ಒಪ್ಪದ ಕಾರಣಕ್ಕೆ ವ್ಯಕ್ತಿಯೊಬ್ಬ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ದಾರುಣ ಘಟನೆ ಯಾದಗಿರಿ ಜಿಲ್ಲೆಯ ಸುರಪುರದ ನಗರದ ಡೊಣ್ಣಿಗೇರ ಬಡಾವಣೆಯಲ್ಲಿ ನಡೆದಿದೆ.

ಮರೆಮ್ಮ (35) ಮೃತ ಪತ್ನಿ. ಸಂಗಪ್ಪ ಕೊಲೆ ಮಾಡಿದ ಪತಿ. ಸದ್ಯ ಘಟನಾ ಸ್ಥಳಕ್ಕೆ ಸುರಪುರ ಠಾಣೆಯ ಪೊಲೀಸರು ಭೇಟಿ ನೀಡಿ ಸ್ಥಳ ಮಹಜರು ನಡೆಸಿದ್ದು, ಪ್ರಕರಣ ದಾಖಲಿಸಿದ್ದಾರೆ. ಸಂಗಪ್ಪನನ್ನು ಬಂಧಿಸಲಾಗಿದೆ.

ಗಂಡ ಹೆಂಡತಿ ಮಧ್ಯೆ ಭಾನುವಾರ ರಾತ್ರಿ ದೈಹಿಕ ಸಂಪರ್ಕ ವಿಚಾರವಾಗಿ ಜಗಳವಾಗಿತ್ತು. ಪತ್ನಿ ದೈಹಿಕ ಸಂಪರ್ಕಕ್ಕೆ ಒಪ್ಪಿರಲಿಲ್ಲ. ಈ ವೇಳೆ, ಜಗಳ ವಿಕೋಪಕ್ಕೆ ತಿರುಗಿದ್ದು, ಕೊಲೆಯಲ್ಲಿ ಅಂತ್ಯವಾಗಿದೆ.

ಕೊಲೆಗಾರ ಸಂಗಪ್ಪ ಕಳೆದ ಎರಡು ದಿನಗಳ ಹಿಂದ ತನ್ನ ಊರಾದ ಕಕ್ಕೇರದಿಂದ ಸುರಪುರಕ್ಕೆ ಬಂದಿದ್ದ. ಗಂಡ ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂದು ಒಂದು ವರ್ಷದಿಂದ ಮರೆಮ್ಮ ತವರು ಮನೆಯಲ್ಲಿದ್ದರು.

Representational image
ಬೆಂಗಳೂರು: ಲೋಕಾಯುಕ್ತ DYSpಯಂತೆ ನಟಿಸಿ ಅಧಿಕಾರಿಗಳಿಂದ ಸುಲಿಗೆ; ವಜಾಗೊಂಡಿದ್ದ ಪೊಲೀಸ್ ಪೇದೆ ಬಂಧನ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com