CJI ಮೇಲಿನ ದಾಳಿ ನಾಚಿಕೆಗೇಡಿತನ: AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಖಂಡನೆ

ಇಂತಹ ಬುದ್ದಿಹೀನ ಕೃತ್ಯವು ದ್ವೇಷ, ಮತಾಂಧತೆ ಮತ್ತು ಧರ್ಮಾಂಧತೆ ನಮ್ಮ ಸಮಾಜವನ್ನು ಹೇಗೆ ಆವರಿಸಿದೆ ಎಂಬುದನ್ನು ತೋರಿಸುತ್ತದೆ. ನಮ್ಮ ನ್ಯಾಯಾಂಗದ ಸುರಕ್ಷತೆ ಮತ್ತು ಭದ್ರತೆ ಅತ್ಯಂತ ಮುಖ್ಯ. ಬೆದರಿಕೆಯಲ್ಲದೆ, ನ್ಯಾಯ ಮತ್ತು ವಿವೇಚನೆ ಮೇಲುಗೈ ಸಾಧಿಸಲಿ.
Mallikarjun Kharge
ಮಲ್ಲಿಕಾರ್ಜುನ ಖರ್ಗೆ
Updated on

ಬೆಂಗಳೂರು: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲೆ ನಡೆದಿರುವ ಶೂ ದಾಳಿಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ತೀವ್ರವಾಗಿ ಖಂಡಿಸಿದ್ದು, ದಾಳಿ ನಾಚಿಕೆಗೇಡಿತನ ಹಾಗೂ ಅಸಹ್ಯಕರ ಎಂದು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಇದು ನಮ್ಮ ನ್ಯಾಯಾಂಗದ ಘನತೆ ಮತ್ತು ಕಾನೂನಿನ ಆಡಳಿತದ ಮೇಲಿನ ದಾಳಿಯಾಗಿದೆ ಎಂದು ಹೇಳಿದ್ದಾರೆ.

ಅರ್ಹತೆ, ಸಮಗ್ರತೆ ಮತ್ತು ಪರಿಶ್ರಮದ ಮೂಲಕ ದೇಶದ ಅತ್ಯುನ್ನತ ನ್ಯಾಯಾಂಗ ಹುದ್ದೆಗೆ ಏರಿದ ಹಾಲಿ ಮುಖ್ಯ ನ್ಯಾಯಮೂರ್ತಿಯನ್ನು ಈ ರೀತಿ ಗುರಿಯಾಗಿಸಿಕೊಂಡಿದ್ದು, ಕೆಟ್ಟ ಸಂದೇಶವನ್ನು ರವಾನಿಸುತ್ತದೆ. ಸಂವಿಧಾನವನ್ನು ಎತ್ತಿಹಿಡಿಯಲು ಸಾಮಾಜಿಕ ಅಡೆತಡೆಗಳನ್ನು ಮುರಿದ ವ್ಯಕ್ತಿಯನ್ನು ಬೆದರಿಸುವ ಮತ್ತು ಅವಮಾನಿಸುವ ಪ್ರಯತ್ನವನ್ನು ಇದು ಪ್ರತಿಬಿಂಬಿಸುತ್ತದೆ ಎಂದು ತಿಳಿಸಿದ್ದಾರೆ.

ಇಂತಹ ಬುದ್ದಿಹೀನ ಕೃತ್ಯವು ದ್ವೇಷ, ಮತಾಂಧತೆ ಮತ್ತು ಧರ್ಮಾಂಧತೆ ನಮ್ಮ ಸಮಾಜವನ್ನು ಹೇಗೆ ಆವರಿಸಿದೆ ಎಂಬುದನ್ನು ತೋರಿಸುತ್ತದೆ. ನಮ್ಮ ನ್ಯಾಯಾಂಗದ ಸುರಕ್ಷತೆ ಮತ್ತು ಭದ್ರತೆ ಅತ್ಯಂತ ಮುಖ್ಯ. ಬೆದರಿಕೆಯಲ್ಲದೆ, ನ್ಯಾಯ ಮತ್ತು ವಿವೇಚನೆ ಮೇಲುಗೈ ಸಾಧಿಸಲಿ ಎಂದು ಹೇಳಿದ್ದಾರೆ.

Mallikarjun Kharge
CJI ಮೇಲೆ 'ಶೂ' ಎಸೆತ: ಯಾವುದೇ ಪಶ್ಚಾತ್ತಾಪವಿಲ್ಲ, ನಾನು ಮಾಡಿದ್ದು ಸರಿಯಿದೆ ಎಂದ ವಕೀಲ ರಾಕೇಶ್ ಕಿಶೋರ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com