ಸಾಕಿದ ಹಸು ತಿಂದಿದೆ ಎಂದು ಹುಲಿಗಳಿಗೆ ವಿಷ ಹಾಕಿದರೆ ಸಹಿಸಲ್ಲ, ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ಯಾರೇ ಅರಣ್ಯ ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲಲು ಮುಂದಾದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅವರು ಎಷ್ಟೇ ದೊಡ್ಡವರಾಗಿದ್ದರೂ ಮುಲಾಜು ನೋಡದೆ ಕಾನೂನು ಕ್ರಮ ಕೈಗೊಳ್ಳಲಾಗುವುದು.
CM Siddaramaiah
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ಸಾಕಿದ ಹಸುವನ್ನು ಹುಲಿ ತಿಂದಿದೆ ಎನ್ನುವ ಕಾರಣಕ್ಕೆ ಹುಲಿಗಳಿಗೆ ವಿಷ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ. ಯಾರೇ ಅರಣ್ಯ ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲಲು ಮುಂದಾದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪರಿಸರ, ಅರಣ್ಯ ಸಂರಕ್ಷಕರಿಗೆ ಮುಖ್ಯಮಂತ್ರಿಗಳ ಪದಕ ವಿತರಿಸಿ ಮಾತನಾಡಿದ ಅವರು, ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಹೇಳಿದರು.

ಸಾಕಿದ ಹಸುವನ್ನು ಹುಲಿ ತಿಂದಿದೆ ಎನ್ನುವ ಕಾರಣಕ್ಕೆ ಹುಲಿಗಳಿಗೆ ವಿಷ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ. ಯಾರೇ ಅರಣ್ಯ ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲಲು ಮುಂದಾದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅವರು ಎಷ್ಟೇ ದೊಡ್ಡವರಾಗಿದ್ದರೂ ಮುಲಾಜು ನೋಡದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಮಾನವ-ವನ್ಯಜೀವಿ ಸಹಬಾಳ್ವೆಯ ಪರಿಸರ ಪೂರಕವಾದ ಆಶಯಕ್ಕಾಗಿ ವನ್ಯಜೀವಿ ಸಪ್ತಾಹವನ್ನು ಆಚರಿಸಲಾಗುತ್ತಿದೆ. ಅರಣ್ಯ ಪರಿಸರ ಆರೋಗ್ಯಕರವಾಗಿ ವಿಸ್ತರಣೆ ಆದಷ್ಟೂ ಮನುಷ್ಯ ಪರಿಸರ ಹೆಚ್ಚು ಆರೋಗ್ಯಕರವಾಗಿರುತ್ತದೆ. ಅರಣ್ಯದ ಉಳಿವು ಭೂಮಿಯ ಉಳಿವು ಎನ್ನುವುದನ್ನು ಮರೆಯಬಾರದು.

CM Siddaramaiah
MM Hills ನಲ್ಲಿ ಮತ್ತೆ ಹುಲಿ ಬೇಟೆ; ಹುಲಿಯ ಅರ್ಧ ಮೃತದೇಹ ಪತ್ತೆ!

ಆನೆ ಮತ್ತು ಹುಲಿ ಸಂಪತ್ತಿನಲ್ಲಿ ನಮ್ಮ ರಾಜ್ಯ ಮೊದಲ ಮತ್ತು ಎರಡನೇ ಸ್ಥಾನದಲ್ಲಿದೆ. ಇದರ ಜೊತೆಗೆ ಪ್ರಾಣಿ ಮತ್ತು ಮನುಷ್ಯರ ಸಂಘರ್ಷ ತಪ್ಪಿ ಸಹಬಾಳ್ವೆ ಏರ್ಪಡಬೇಕು. ಇದಕ್ಕಾಗಿ ಪ್ರಾಣಿಗಳು ಕಾಡು ಬಿಟ್ಟು ಹೊರಗೆ ಏಕೆ ಬರುತ್ತಿವೆ ಎನ್ನುವ ಬಗ್ಗೆ ಅಧ್ಯಯನಗಳು ನಡೆದು ವೈಜ್ಞಾನಿಕ ಪರಿಹಾರಗಳನ್ನು ಕಂಡುಕೊಳ್ಳಬೇಕಿದೆ.

ಹುಲಿ, ಆನೆಗಳ ಹತ್ಯೆ ಅತ್ಯಂತ ಗಂಭೀರ ಅಪರಾಧಗಳು. ಅರಣ್ಯಾಧಿಕಾರಿಗಳು ಹೆಚ್ಚು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಹುಲಿ ಹತ್ಯೆ ಮಾಡಿದವರು ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ. ದಿನೇ ದಿನೇ ಅರಣ್ಯ ಪ್ರದೇಶ ಕಡಿಮೆ ಆಗುತ್ತಿದ್ದರೆ ಮನುಷ್ಯ ಕುಲ ಉಳಿಯಲು ಸಾಧ್ಯವಿಲ್ಲ. ಆದ್ದರಿಂದ ಅರಣ್ಯದ ಉಳಿವು ಮನುಷ್ಯನ ಉಳಿವು ಎನ್ನುವುದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com