ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಗೆಲುವು; ರಮೇಶ್ ಕತ್ತಿ ಬಣಕ್ಕೆ ಶಾಕ್!

ಗೋಕಾಕ್ ನಿಂದ ರಮೇಶ್ ಜಾರಕಿಹೊಳಿ ಪುತ್ರ ಅಮರನಾಥ್, ಬೆಳಗಾವಿಯಿಂದ ಸತೀಶ್ ಜಾರಕಿಹೊಳಿ ಪುತ್ರ ರಾಹುಲ್ ಜಾರಕಿಹೊಳಿ ಅವಿರೋಧ ಆಯ್ಕೆಯಾಗಿದ್ದಾರೆ.
ರಮೇಶ್ ಜಾರಕಿಹೊಳಿ-ಸತೀಶ್ ಜಾರಕಿಹೊಳಿ
ರಮೇಶ್ ಜಾರಕಿಹೊಳಿ-ಸತೀಶ್ ಜಾರಕಿಹೊಳಿ
Updated on

ಬೆಳಗಾವಿ: ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ರಮೇಶ್ ಕತ್ತಿ ಬಣಕ್ಕೆ ಬಿಗ್ ಶಾಕ್ ಆಗಿದೆ. ಬಿಜೆಪಿಯ ರಮೇಶ್ ಜಾರಕಿಹೊಳಿ ಮತ್ತು ಕಾಂಗ್ರೆಸ್ ನ ಸತೀಶ್ ಜಾರಕಿಹೊಳಿ ಚುನಾವಣೆಗಾಗಿ ಒಂದಾದ ಹಿನ್ನೆಲೆಯಲ್ಲಿ ಜಾರಕಿಹೊಳಿ ಬಣದ 6 ಮಂದಿ ನಿರ್ದೇಶಕರಾಗಿ ಅವರೋಧವಾಗಿ ಆಯ್ಕೆಯಾಗಿದ್ದಾರೆ. ಡಿಸಿಸಿ ಬ್ಯಾಂಕ್ ನ 16 ನಿರ್ದೇಶಕ ಸ್ಥಾನಗಳ ಪೈಕಿ 6 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ. ಚಿಕ್ಕೋಡಿಯಿಂದ ಗಣೇಶ್ ಹುಕ್ಕೇರಿ, ಯರಗಟ್ಟಿಯಿಂದ ವಿಶ್ವಾಸ ವೈದ್ಯ, ಮೂಡಲಗಿಯಿಂದ ನೀಲಕಂಠ, ಸವದತ್ತಿಯಿಂದ ವಿರೂಪಾಕ್ಷ ಮಾಮನಿ, ಗೋಕಾಕ್ ನಿಂದ ರಮೇಶ್ ಜಾರಕಿಹೊಳಿ ಪುತ್ರ ಅಮರನಾಥ್, ಬೆಳಗಾವಿಯಿಂದ ಸತೀಶ್ ಜಾರಕಿಹೊಳಿ ಪುತ್ರ ರಾಹುಲ್ ಜಾರಕಿಹೊಳಿ ಅವಿರೋಧ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಅಕ್ಟೋಬರ್ 13ರಂದು ಚುನಾವಣಾ ಅಧಿಕಾರಿ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.

ರಮೇಶ್ ಜಾರಕಿಹೊಳಿ-ಸತೀಶ್ ಜಾರಕಿಹೊಳಿ
ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com