ಬೆಂಗಳೂರಿನಲ್ಲಿ ಮುಂದಿನ ಜೂನ್ ನಲ್ಲಿ ರಾಜಕೀಯ ಪದವಿ ಕಾಲೇಜು ಆರಂಭ: ಬಸವರಾಜ ಹೊರಟ್ಟಿ

ಪಠ್ಯಕ್ರಮವನ್ನು ಸಿದ್ಧಪಡಿಸುವಾಗ ನಿವೃತ್ತ ಪ್ರಾಧ್ಯಾಪಕರು, ಹಿರಿಯ ರಾಜಕಾರಣಿಗಳು ಮತ್ತು ರಾಜಕೀಯದ ಬಗ್ಗೆ ಜ್ಞಾನವಿರುವ ಸಾರ್ವಜನಿಕರನ್ನು ಸಂಪರ್ಕಿಸಲಾಗುವುದು ಎಂದು ಹೊರಟ್ಟಿ ಹೇಳಿದರು.
basavaraja horatti
ಬಸವರಾಜ ಹೊರಟ್ಟಿ
Updated on

ಮಂಗಳೂರು: ವಿಧಾನ ಮಂಡಲದಿಂದ ಬರುವ ಜೂನ್‌ನಿಂದ ಬೆಂಗಳೂರಿನಲ್ಲಿ ರಾಜಕೀಯ ಪದವಿ ಕಾಲೇಜು ಪ್ರಾರಂಭಿಸಲು ಯೋಚಿಸಲಾಗಿದೆ ಎಂದು ಮೇಲ್ಮನೆ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ‘ಮೂರು ವರ್ಷದ ಕೋರ್ಸ್‌ಗೆ ರಾಜಕೀಯ ಸಂಹಿತೆ ಒಳಗೊಂಡ ಪಠ್ಯಕ್ರಮ ರೂಪಿಸಲು ತಜ್ಞರನ್ನು ಸಂಪರ್ಕಿಸಲಾಗಿದೆ’ ಎಂದರು.

ಪಠ್ಯಕ್ರಮವನ್ನು ಸಿದ್ಧಪಡಿಸುವಾಗ ನಿವೃತ್ತ ಪ್ರಾಧ್ಯಾಪಕರು, ಹಿರಿಯ ರಾಜಕಾರಣಿಗಳು ಮತ್ತು ರಾಜಕೀಯದ ಬಗ್ಗೆ ಜ್ಞಾನವಿರುವ ಸಾರ್ವಜನಿಕರನ್ನು ಸಂಪರ್ಕಿಸಲಾಗುವುದು ಎಂದು ಹೊರಟ್ಟಿ ಹೇಳಿದರು. ಒಂದು ತಿಂಗಳಲ್ಲಿ ಸ್ಪಷ್ಟ ಚಿತ್ರಣ ಹೊರಬರಲಿದೆ ಎಂದು ಅವರು ಹೇಳಿದರು. ಈ ಸಂಬಂಧ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಅವರೊಂದಿಗೆ ಚರ್ಚೆ ನಡೆಸಲಾಗಿದ್ದು, ಈ ವಿಷಯವನ್ನು ಮುಖ್ಯಮಂತ್ರಿಗಳ ಮುಂದೆ ಇಡಲಾಗಿದೆ, ಅವರು ಅನುದಾನ ನೀಡುವ ಭರವಸೆ ನೀಡಿದ್ದಾರೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ 29,000 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಮತ್ತು 1,900 ಪ್ರಾಥಮಿಕ ಶಾಲೆಗಳಲ್ಲಿ 10 ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿದ್ದಾರೆ ಎಂದು ಅವರು ಹೇಳಿದರು. ಅಧಿಕಾರದಲ್ಲಿರುವವರ ನಿರ್ಧಾರಗಳಿಂದಾಗಿ ಕನ್ನಡ ಮಾಧ್ಯಮ ಶಾಲೆಗಳು ದುರ್ಬಲವಾಗುತ್ತಿವೆ, ಎಲ್ಲರೂ ತಮ್ಮ ಮಕ್ಕಳನ್ನು ಇಂಗ್ಲಿಷ್‌ ಮಾಧ್ಯಮ ಶಾಲೆಗಳಿಗೆ ಕಳುಹಿಸಲು ಉತ್ಸುಕತೆ ತೋರುತ್ತಾರೆ. ಶಿಕ್ಷಣ ಸಂಸ್ಥೆಗಳನ್ನು ನಡೆಸುವ ರಾಜಕಾರಣಿಗಳು ತಮ್ಮ ಶಾಲೆಗಳ ಸುಧಾರಣೆ ಬಗ್ಗೆ ಯೋಚಿಸುತ್ತಾರೆ. ಕೆಲವರು ಮಾತ್ರ ಇದಕ್ಕೆ ಹೊರತಾಗಿರಬಹುದು ಎಂದು ಹೊರಟ್ಟಿ ಬೇಸರ ವ್ಯಕ್ತ ಪಡಿಸಿದ್ದಾರೆ.

basavaraja horatti
ರಾಜಕೀಯದಲ್ಲಿ ಹಣವೇ ಪ್ರಧಾನ, ಶಿಕ್ಷಕರ ಕ್ಷೇತ್ರವೂ ಹೊರತಲ್ಲ; ರಾಜ್ಯ ತ್ರಿಭಾಷಾ ನೀತಿ ಅಳವಡಿಸಬೇಕು: ಬಸವರಾಜ ಹೊರಟ್ಟಿ ಸಂದರ್ಶನ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com