ಲಕ್ಕುಂಡಿಗೆ UNESCO ಸ್ಥಾನಮಾನ: ಸಚಿವ ಎಚ್‌.ಕೆ ಪಾಟೀಲ್

ಕಳೆದ ಎರಡು ವರ್ಷಗಳಲ್ಲಿ ರಾಜ್ಯ ಸರ್ಕಾರವು ಸವದತ್ತಿ ಯಲ್ಲಮ್ಮ ಬೆಟ್ಟ, ಅಂಜನಾದ್ರಿ ಬೆಟ್ಟಗಳು ಮತ್ತು ಬೆಂಗಳೂರಿನ ರೋರಿಚ್ ಎಸ್ಟೇಟ್‌ಗಳ ಸಮಗ್ರ ಅಭಿವೃದ್ಧಿಯನ್ನು ಕೈಗೊಂಡಿದೆ.
 H K Patil
ಎಚ್‌ಕೆ ಪಾಟೀಲ್
Updated on

ಬೆಂಗಳೂರು: ಗದಗ ಜಿಲ್ಲೆಯ ಲಕ್ಕುಂಡಿಗೆ ಯುನೆಸ್ಕೋ ಜಾಗತಿಕ ಪಾರಂಪರಿಕ ತಾಣದ ಸ್ಥಾನಮಾನವನ್ನು ದೊರಕಿಸಲು ರಾಜ್ಯ ಸರ್ಕಾರ ಶ್ರಮಿಸುತ್ತಿದೆ ಎಂದು ಕಾನೂನು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್‌.ಕೆ ಪಾಟೀಲ್ ಅವರ ಮಂಗಳವಾರ ಹೇಳಿದರು.

ಅಕ್ಟೋಬರ್ 14 ಮತ್ತು 15 ರಂದು ಉದಯಪುರದಲ್ಲಿ ನಡೆದ ಪ್ರವಾಸೋದ್ಯಮದಲ್ಲಿನ ಹೊಸ ಉಪಕ್ರಮಗಳ ಕುರಿತು ರಾಜ್ಯ ಪ್ರವಾಸೋದ್ಯಮ ಸಚಿವರ ಸಮ್ಮೇಳನದಲ್ಲಿ ಎಚ್‌.ಕೆ ಪಾಟೀಲ್ ಅವರು ಮಾತನಾಡಿದರು.

ಕಳೆದ ಎರಡು ವರ್ಷಗಳಲ್ಲಿ ರಾಜ್ಯ ಸರ್ಕಾರವು ಸವದತ್ತಿ ಯಲ್ಲಮ್ಮ ಬೆಟ್ಟ, ಅಂಜನಾದ್ರಿ ಬೆಟ್ಟಗಳು ಮತ್ತು ಬೆಂಗಳೂರಿನ ರೋರಿಚ್ ಎಸ್ಟೇಟ್‌ಗಳ ಸಮಗ್ರ ಅಭಿವೃದ್ಧಿಯನ್ನು ಕೈಗೊಂಡಿದೆ. ಈ ಯೋಜನೆಗಳನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಲು ಸರ್ಕಾರ ಶ್ರಮಿಸುತ್ತಿದೆ ಎಂದು ಹೇಳಿದರು.

343 ಕಿ.ಮೀ ಉದ್ದದ ಕರಾವಳಿಯನ್ನು ಕೇಂದ್ರೀಕರಿಸಿ ಅಭಿವೃದ್ಧಿಪಡಿಸಲು ಮತ್ತು ಅದನ್ನು ಉನ್ನತ ಮಟ್ಟದ ಪ್ರವಾಸೋದ್ಯಮ ತಾಣವನ್ನಾಗಿ ಪರಿವರ್ತಿಸಲು ಪ್ರತ್ಯೇಕ ಕರಾವಳಿ ಪ್ರವಾಸೋದ್ಯಮ ನೀತಿಯನ್ನು ಸಹ ಸಿದ್ಧಪಡಿಸಲಾಗುತ್ತಿದೆ. ಗದಗ ಜಿಲ್ಲೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಕೇವಲ 40 ನಿಮಿಷಗಳ ಡ್ರೈವ್ ದೂರದಲ್ಲಿದೆ. ಗದಗದಿಂದ 8 ಕಿ.ಮೀ ದೂರದಲ್ಲಿರುವ ಲಕ್ಕುಂಡಿಯನ್ನು ಚಾಲುಕ್ಯ ಶಿಲ್ಪಕಲೆಯ ಮುಕ್ತ ವಸ್ತುಸಂಗ್ರಹಾಲಯ ಎಂದು ಕರೆಯಲಾಗುತ್ತದೆ. ಇದು 100 ಸಂಕೀರ್ಣವಾಗಿ ಕೆತ್ತಿದ ದೇವಾಲಯಗಳು, ಆಳವಾದ ಬಾವಿಗಳು, ಜೈನ ಬಸದಿಗಳು ಮತ್ತು ಪ್ರಾಚೀನ ಶಿಲ್ಪಕಲೆಯನ್ನು ಪ್ರತಿಬಿಂಬಿಸುವ ಶಾಸನಗಳನ್ನು ಹೊಂದಿದೆ.

 H K Patil
2ನೇ ಬಾರಿಗೆ ಲಕ್ಕುಂಡಿಯಲ್ಲಿ ಉತ್ಖನನ: ರಾಷ್ಟ್ರಕೂಟರು, ಕಲ್ಯಾಣಿ ಚಾಲುಕ್ಯರು ಕುರುಹುಗಳ ಪತ್ತೆ ಸಾಧ್ಯತೆ

ತ್ರಿಕೂಟೇಶ್ವರ ದೇವಸ್ಥಾನ, ಸರಸ್ವತಿ ದೇವಸ್ಥಾನ, ವೀರನಾರಾಯಣ ದೇವಸ್ಥಾನ, ದೊಡ್ಡಬಸಪ್ಪ ದೇವಸ್ಥಾನ ಮತ್ತು ಡಂಬಳದ ಪ್ರಾಚೀನ ಕೋಟೆಗಳು ಭಾರತೀಯ ಶಿಲ್ಪಕಲೆಯನ್ನು ಶ್ರೀಮಂತಗೊಳಿಸಿದ ರಾಜವಂಶಗಳ ಕಥೆಗಳನ್ನು ಹೇಳುತ್ತವೆ. ದಿವಂಗತ ಭಾರತ ರತ್ನ ಪಂಡಿತ್ ಭೀಮಸೇನ ಜೋಶಿ ಅವರು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮನ್ನಣೆಗೆ ಉತ್ತಮ ಕೊಡುಗೆ ನೀಡಿದ್ದಾರೆ ಮತ್ತು ಕರ್ನಾಟಕದ ಶ್ರೀಮಂತ ಸಂಗೀತ ಪರಂಪರೆಯನ್ನು ಪ್ರಪಂಚದಾದ್ಯಂತ ಪ್ರಸಿದ್ಧಿಪಡಿಸಿದ್ದಾರೆ.ಭಾರತವನ್ನು ಜಾಗತಿಕ ಪ್ರವಾಸೋದ್ಯಮ ತಾಣವಾಗಿ ಪರಿವರ್ತಿಸಲು ಕರ್ನಾಟಕ ಬದ್ಧವಾಗಿದೆ. ಕರ್ನಾಟಕವು ಕೇಂದ್ರ ಮತ್ತು ಇತರ ರಾಜ್ಯಗಳೊಂದಿಗೆ ಸಮನ್ವಯದಿಂದ ಜಾಗತಿಕ ಪ್ರವಾಸೋದ್ಯಮದ ಶಕ್ತಿ ಕೇಂದ್ರವನ್ನಾಗಿ ಮಾಡಲು ತನ್ನೆಲ್ಲ ಶಕ್ತಿಯನ್ನು ವ್ಯಯಿಸಲಿದೆ ಎಂದು ವಿವರಿಸಿದರು.

ಇದೇ ವೇಳೆ 50 ಜಾಗತಿಕವಾಗಿ ಸ್ಪರ್ಧಾತ್ಮಕ ಪ್ರವಾಸೋದ್ಯಮ ತಾಣಗಳನ್ನು ಅಭಿವೃದ್ಧಿಪಡಿಸುವ ರಾಷ್ಟ್ರೀಯ ಧ್ಯೇಯದಡಿಯಲ್ಲಿ ಗದಗ, ಹಂಪಿ, ಮೈಸೂರು ಮತ್ತು ಉಡುಪಿಯನ್ನು ಜಾಗತಿಕ ತಾಣಗಳಾಗಿ ಪರಿಗಣಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com