ಮಹೇಶ್ ವಾಳ್ವೇಕರ್ ಸೇರಿ ಮೂವರು ರಾಜ್ಯ ಮಾಹಿತಿ ಆಯುಕ್ತರಾಗಿ ಪ್ರಮಾಣ ವಚನ ಸ್ವೀಕಾರ

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನವಾಗಿ ನೇಮಕವಾಗಿರುವ ರಾಜ್ಯ ಮಾಹಿತಿ ಆಯುಕ್ತರುಗಳಿಗೆ ಅಧಿಕಾರ ಪ್ರಮಾಣ ವಚನ ಬೋಧಿಸಿದರು.
Karnataka Govt appointed three State Information Commissioners
ಮಹೇಶ್ ವಾಳ್ವೇಕರ್
Updated on

ಬೆಂಗಳೂರು: ರಾಜ್ಯ ಮಾಹಿತಿ ಆಯುಕ್ತರಾಗಿ ನೇಮಕಗೊಂಡಿರುವ ಡಾ.ರಿಚರ್ಡ್ ವಿನ್ಸೆಂಟ್‌ ಡಿಸೋಜ, ಬಿ.ವೆಂಕಟ್ ಸಿಂಗ್ ಹಾಗೂ ಡಾ.ಮಹೇಶ್ ವಾಳ್ವೇಕರ್ ಅವರು ಗುರುವಾರ ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದರು.

ಇಂದು ರಾಜಭವನದ ಬ್ಯಾಂಕ್ವೆಟ್ ‌ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನವಾಗಿ ನೇಮಕವಾಗಿರುವ ರಾಜ್ಯ ಮಾಹಿತಿ ಆಯುಕ್ತರುಗಳಿಗೆ ಅಧಿಕಾರ ಪ್ರಮಾಣ ವಚನ ಬೋಧಿಸಿದರು.

ಬೆಂಗಳೂರು ಪೀಠಕ್ಕೆ ನೂತನವಾಗಿ ನೇಮಕವಾಗಿರುವ ರಾಜ್ಯ ಮಾಹಿತಿ ಅಯುಕ್ತರುಗಳಾದ ಡಾ.ರಿಚರ್ಡ್ ವಿನ್ಸೆಂಟ್‌ ಡಿಸೋಜ ಹಾಗೂ ಡಾ. ಮಹೇಶ್ ವಾಳ್ವೇಕರ್ ಅವರು ದೇವರ ಹೆಸರಿನಲ್ಲಿ ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದರು.

Karnataka Govt appointed three State Information Commissioners
ಕಲಬುರಗಿ: ಲಂಚ ಪಡೆಯುವಾಗ ಮಾಹಿತಿ ಹಕ್ಕು ಆಯೋಗದ ಆಯುಕ್ತ ಲೋಕಾಯುಕ್ತ ಬಲೆಗೆ

ಇನ್ನೂ ಕಲಬುರಗಿ ಪೀಠಕ್ಕೆ ನೇಮಕವಾಗಿರುವ ಬಿ. ವೆಂಕಟ್ ಸಿಂಗ್ ಅವರು ದೇವರು ಮತ್ತು ಸಂವಿಧಾನದ ಹೆಸರಿನಲ್ಲಿ ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com