ಚಾಮರಾಜನಗರ: 27 ತಿಂಗಳ ಸಂಬಳ ಬಾಕಿ; ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗದಲ್ಲೇ 'ವಾಟರ್ ಮ್ಯಾನ್' ಆತ್ಮಹತ್ಯೆ!

ಹಲವು ಬಾರಿ ಮನವಿ ಮಾಡಿದರೂ ಪಂಚಾಯಿತಿ ಅಧ್ಯಕ್ಷೆಯ ಪತಿ ಮೋಹನ್‌ಕುಮಾರ್‌, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ರಾಮೇಗೌಡ ಸೇರಿದಂತೆ ಪಂಚಾಯಿತಿ ಅಧಿಕಾರಿಗಳು 27 ತಿಂಗಳಿಂದ ವೇತನ ನೀಡಿಲ್ಲ ಎಂದು ಆರೋಪಿಸಲಾಗಿದೆ.
gram panchayat office
ಹೊಂಗನೂರು ಗ್ರಾಮ ಪಂಚಾಯಿತಿ ಕಾರ್ಯಾಲಯ
Updated on

ಚಾಮರಾಜನಗರ: ಗ್ರಾಮ ಪಂಚಾಯಿತಿ ಅಧಿಕಾರಿಗಳಿಂದ ಕಿರುಕುಳ ಹಾಗೂ 27 ತಿಂಗಳಿಂದ ಸಂಬಳ ಸಿಗದೆ ಮನನೊಂದ 'ವಾಟರ್ ಮ್ಯಾನ್' ಪಂಚಾಯಿತಿ ಕಚೇರಿಯ ಕಿಟಕಿ ಗ್ರಿಲ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹೊಂಗನೂರಿನಲ್ಲಿ ನಡೆದಿದೆ.

ಮೃತರನ್ನು ಚಿಕ್ಕೂಸಾ ನಾಯಕ್ ಎಂದು ಗುರುತಿಸಲಾಗಿದೆ. ಒಂಬತ್ತು ವರ್ಷಗಳಿಂದ ಗ್ರಾಮ ಪಂಚಾಯಿತಿಯಲ್ಲಿ ಕೆಲಸ ಮಾಡುತ್ತಿದ್ದ ಅವರಿಗೆ ಮೂವರು ಮಕ್ಕಳಿದ್ದಾರೆ.

ಹಲವು ಬಾರಿ ಮನವಿ ಮಾಡಿದರೂ ಪಂಚಾಯಿತಿ ಅಧ್ಯಕ್ಷೆಯ ಪತಿ ಮೋಹನ್‌ಕುಮಾರ್‌, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ರಾಮೇಗೌಡ ಸೇರಿದಂತೆ ಪಂಚಾಯಿತಿ ಅಧಿಕಾರಿಗಳು 27 ತಿಂಗಳಿಂದ ವೇತನ ನೀಡಿಲ್ಲ ಎಂದು ಆರೋಪಿಸಲಾಗಿದೆ.

ಮೋಹನ್ ಕುಮಾರ್ ಮತ್ತು ರಾಮೇಗೌಡ ಕಿರುಕುಳ ನೀಡಿದ್ದಾರೆ. ವೇತನವಿಲ್ಲದೆ ಕೆಲಸ ಮಾಡಲು ಒತ್ತಾಯಿಸಿದ್ದಾರೆ ಎಂದು ಚಿಕ್ಕೂಸಾ ನಾಯಕ್ ತಮ್ಮ ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಸದ್ಯ ತಲೆಮರೆಸಿಕೊಂಡಿರುವ ಮೋಹಕುಮಾರ್ ಮತ್ತು ರಾಮೇಗೌಡ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪಿಡಿಒ ಅವರೇ ಎಲ್ಲ ಅಧಿಕಾರವನ್ನು ಹೊಂದಿದ್ದು, ಈ ಪರಿಸ್ಥಿತಿಗೆ ಅವರೇ ಕಾರಣರಾಗಿದ್ದಾರೆ ಎಂದು ಗ್ರಾಮ ಪಂಚಾಯಿತಿ ಸದಸ್ಯರು ಆರೋಪಿಸಿದ್ದಾರೆ.

gram panchayat office
ಕಲಬುರಗಿ: 3 ತಿಂಗಳಿಂದ ಸಿಗದ ವೇತನ; ಗ್ರಂಥಾಲಯ ಮೇಲ್ವಿಚಾರಕಿ ಆತ್ಮಹತ್ಯೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com