2 Men Rob Bengaluru Women, Chop Fingers With Machete
ಬಂಧಿತ ಆರೋಪಿಗಳು

ಬೆಂಗಳೂರು: ಮಹಿಳೆಯ ಬೆರಳು ಕತ್ತರಿಸಿ ಚಿನ್ನಾಭರಣ ದರೋಡೆ ಮಾಡಿದ್ದ ಇಬ್ಬರ ಬಂಧನ

ಸೆ.13ರಂದು ದೂರುದಾರ ಮಹಿಳೆ ಉಷಾ ಹಾಗೂ ಸ್ನೇಹಿತೆ ವರಲಕ್ಷ್ಮೀ ಎಂಬವರು ಗಣೇಶ ಹಬ್ಬದ ಆರ್ಕೆಸ್ಟ್ರಾ ಮುಗಿಸಿ ಮನೆಗೆ ವಾಪಸ್ ಆಗುವಾಗ ಪಲ್ಸರ್ ಬೈಕ್​ನಲ್ಲಿ ಬಂದ ದುರುಳರು ಮಚ್ಚು ತೋರಿಸಿದ್ಧಾರೆ.
Published on

ಬೆಂಗಳೂರು: ಆರ್ಕೆಸ್ಟ್ರಾ ನೋಡಿಕೊಂಡು ಮನೆಗೆ ಹೋಗುತ್ತಿದ್ದ ಮಹಿಳೆಯರನ್ನು ಗುರಿಯಾಗಿಸಿ, ಲಾಂಗ್‌ನಿಂದ ಹಲ್ಲೆ ಮಾಡಿ, ಸರಗಳ್ಳತನ ಮಾಡಿ ಪರಾರಿಯಾಗಿದ್ದ ಇಬ್ಬರು ಖದೀಮರನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಯೋಗಾನಂದ (35) ಹಾಗೂ ಈತನ ಸಹಚರ ಪ್ರವೀಣ್ ಬಂಧಿತರು. ಇವರಿಂದ 80 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಬಿ.ಜಗಲಾಸರ್ ಅವರು ಪ್ರಕರಣದ ಕುರಿತು ಮಾಹಿತಿ ನೀಡಿದರು.

ಸೆ.13ರಂದು ದೂರುದಾರ ಮಹಿಳೆ ಉಷಾ ಹಾಗೂ ಸ್ನೇಹಿತೆ ವರಲಕ್ಷ್ಮೀ ಎಂಬವರು ಗಣೇಶ ಹಬ್ಬದ ಆರ್ಕೆಸ್ಟ್ರಾ ಮುಗಿಸಿ ಮನೆಗೆ ವಾಪಸ್ ಆಗುವಾಗ ಪಲ್ಸರ್ ಬೈಕ್​ನಲ್ಲಿ ಬಂದ ದುರುಳರು ಮಚ್ಚು ತೋರಿಸಿದ್ಧಾರೆ. ಗಾಬರಿಗೊಂಡ ಉಷಾ ಸರ ನೀಡಿದರೆ, ವರಲಕ್ಷ್ಮಿ ಅವರು ಪ್ರತಿರೋಧ ತೋರಿಸಿದ್ದು ಮಚ್ಚಿನಿಂದ ಹಲ್ಲೆ ಮಾಡಿದ್ದರು. ಈ ವೇಳೆ ಅವರ, ಕೈ ಬೆರಳು ತುಂಡಾಗಿತ್ತು.

ಅದೇ ದಿನ ಕುಮಾರಸ್ವಾಮಿ ಲೇಔಟ್ ಹಾಗೂ ಕೋಣನಕುಂಟೆ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ಮಾಡಿದ್ದರು. ಪ್ರಕರಣ ದಾಖಲಿಸಿ ತನಿಖೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

2 Men Rob Bengaluru Women, Chop Fingers With Machete
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ದರೋಡೆ: ತಮಿಳುನಾಡು ಪೊಲೀಸ್ ಕುಟುಂಬ ಲೂಟಿ ಮಾಡಿದ ದುಷ್ಕರ್ಮಿಗಳು!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com