RSS ನಿಷೇಧ: ದೇವೇಗೌಡರು 25 ವರ್ಷಗಳ ಹಿಂದೆಯೇ ಹೇಳಿದ್ರಾ? ಕುತೂಹಲ ಕೆರಳಿಸಿದ ಪ್ರಿಯಾಂಕ್ ಖರ್ಗೆ ಟ್ವೀಟ್!

'ಆರ್ ಎಸ್ ಎಸ್ ನಿಷೇಧವಾಗಬೇಕು' ಇದು ಜೆಡಿಎಸ್ ನವರ ಮನ್ ಕಿ ಬಾತ್! ಈ ಮನದಾಳದ ಮಾತುಗಳನ್ನು ಇಂದು ಮರೆತಿದ್ದಾರೆಯೇ ಅಥವಾ ಮರೆಯಲು ಪ್ರಯತ್ನಿಸುತ್ತಿದ್ದಾರೆಯೇ?
Priyank Kharge, HD Devegowda
ಪ್ರಿಯಾಂಕ್ ಖರ್ಗೆ, ಎಚ್. ಡಿ. ದೇವೇಗೌಡರು ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ರಾಜ್ಯದಲ್ಲಿ '' ಆರ್ ಎಸ್ ಎಸ್ ನಿಷೇಧವಾಗಬೇಕು'' ಎಂದು ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರು 25 ವರ್ಷಗಳ ಹಿಂದೆಯೇ ಹೇಳಿರುವುದನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಈ ಕುರಿತ ಪತ್ರಿಕಾ ವರದಿಯೊಂದನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ.

ಆರ್ ಎಸ್ ಎಸ್, ವಿಹೆಚ್ ಪಿ, ಬಜರಂಗದಳ ಮತ್ತು ಶಿವಸೇನೆಯಂಥ ಕೋಮು ಸಂಘಟನೆಗಳನ್ನು ನಿಷೇಧಿಸಬೇಕು. ದಕ್ಷಿಣ ಗುಜರಾತ್ ನಲ್ಲಿ ಕ್ರೈಸ್ತರ ಮೇಲೆ ನಡೆದ ದಾಳಿಗೆ ಈ ಸಂಘಟನೆಗಳು ಕಾರಣ ಎಂದು ದೇವೇಗೌಡರು ಆರೋಪಿಸಿರುವುದು ವರದಿಯಲ್ಲಿದೆ.

'ಆರ್ ಎಸ್ ಎಸ್ ನಿಷೇಧವಾಗಬೇಕು' ಇದು ಜೆಡಿಎಸ್ ನವರ ಮನ್ ಕಿ ಬಾತ್! ಈ ಮನದಾಳದ ಮಾತುಗಳನ್ನು ಇಂದು ಮರೆತಿದ್ದಾರೆಯೇ ಅಥವಾ ಮರೆಯಲು ಪ್ರಯತ್ನಿಸುತ್ತಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.

ಈ ಹಳೆಯ ಪಾಳೆಯುಳಿಕೆಯಂತಹ ಮಾತುಗಳನ್ನು ಈ ಸಂದರ್ಭದಲ್ಲಿ ಬಿಜೆಪಿಯವರಿಗೆ ನೆನಪು ಮಾಡಲು ಬಯಸುತ್ತೇನೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

Priyank Kharge, HD Devegowda
ಟಾರ್ಗೆಟ್ RSS ಅಲ್ಲವೇ ಅಲ್ಲ, ಬಿಜೆಪಿಯವರಿಗೆ ರಾಜಕಾರಣ ಮಾಡುವುದು ಬಿಟ್ಟರೆ ಬೇರೇನೂ ಗೊತ್ತಿಲ್ಲ: ಸಿದ್ದರಾಮಯ್ಯ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com