
ಬೆಂಗಳೂರು: ರಾಜ್ಯದಲ್ಲಿ '' ಆರ್ ಎಸ್ ಎಸ್ ನಿಷೇಧವಾಗಬೇಕು'' ಎಂದು ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರು 25 ವರ್ಷಗಳ ಹಿಂದೆಯೇ ಹೇಳಿರುವುದನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಈ ಕುರಿತ ಪತ್ರಿಕಾ ವರದಿಯೊಂದನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ.
ಆರ್ ಎಸ್ ಎಸ್, ವಿಹೆಚ್ ಪಿ, ಬಜರಂಗದಳ ಮತ್ತು ಶಿವಸೇನೆಯಂಥ ಕೋಮು ಸಂಘಟನೆಗಳನ್ನು ನಿಷೇಧಿಸಬೇಕು. ದಕ್ಷಿಣ ಗುಜರಾತ್ ನಲ್ಲಿ ಕ್ರೈಸ್ತರ ಮೇಲೆ ನಡೆದ ದಾಳಿಗೆ ಈ ಸಂಘಟನೆಗಳು ಕಾರಣ ಎಂದು ದೇವೇಗೌಡರು ಆರೋಪಿಸಿರುವುದು ವರದಿಯಲ್ಲಿದೆ.
'ಆರ್ ಎಸ್ ಎಸ್ ನಿಷೇಧವಾಗಬೇಕು' ಇದು ಜೆಡಿಎಸ್ ನವರ ಮನ್ ಕಿ ಬಾತ್! ಈ ಮನದಾಳದ ಮಾತುಗಳನ್ನು ಇಂದು ಮರೆತಿದ್ದಾರೆಯೇ ಅಥವಾ ಮರೆಯಲು ಪ್ರಯತ್ನಿಸುತ್ತಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.
ಈ ಹಳೆಯ ಪಾಳೆಯುಳಿಕೆಯಂತಹ ಮಾತುಗಳನ್ನು ಈ ಸಂದರ್ಭದಲ್ಲಿ ಬಿಜೆಪಿಯವರಿಗೆ ನೆನಪು ಮಾಡಲು ಬಯಸುತ್ತೇನೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
Advertisement