ಬಿಲ್​ ಕ್ಲಿಯರ್'ಗೆ ಗುತ್ತಿಗೆದಾರರ ಆಗ್ರಹ: DCM ಡಿಕೆ.ಶಿವಕುಮಾರ್ ಮಧ್ಯಪ್ರವೇಶ, ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸುವ ಭರವಸೆ

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಜೆಟ್ ನಲ್ಲಿ ಅನುದಾನ ನಿಗದಿ ಮಾಡದೇ ಸಾವಿರಾರು ಕೋಟಿ ರೂ. ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು. ಜಲಸಂಪನ್ಮೂಲ ಇಲಾಖೆಯಲ್ಲಿಯೇ 17 ಸಾವಿರ ಕೋಟಿ ರೂ. ಬಾಕಿ ಬಿಲ್ ಉಳಿಸಲಾಗಿತ್ತು.
Deputy Chief Minister DK Shivakumar held a meeting with the members of the association on Saturday.
ಗುತ್ತಿಗೆದಾರರೊಂದಿಗೆ ಮಾತುಕತೆ ನಡೆಸುತ್ತಿರುವ ಡಿಸಿಎಂ
Updated on

ಬೆಂಗಳೂರು: ಡಿಸೆಂಬರ್ ಅಂತ್ಯದೊಳಗೆ ರಾಜ್ಯ ಗುತ್ತಿಗೆದಾರರ ಬಾಕಿ ಬಿಲ್ ಗಳನ್ನು ಹಂತ ಹಂತವಾಗಿ ಪಾವತಿಸಲು ಕ್ರಮ ಕೈಗೊಳ್ಳುವುದಾಗಿ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಶನಿವಾರ ಭರವಸೆ ನೀಡಿದ್ದಾರೆ.

ಕುಮಾರಪಾರ್ಕ್ ನಲ್ಲಿನ ಸರ್ಕಾರಿ ವಸತಿ ಗೃಹದಲ್ಲಿ ಶನಿವಾರ ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಸಣ್ಣ ನೀರಾವರಿ ಮತ್ತು ನಗರಾಭಿವೃದ್ಧಿ ಇಲಾಖೆಯಿಂದ ಬಾಕಿ ಹಣವನ್ನು ತೆರವುಗೊಳಿಸುವಂತೆ ತಮ್ಮ ಕಾರ್ಯದರ್ಶಿಗೆ ಸೂಚಿಸಿದರು.

ಸಭೆ ಬಳಿಕ ಮಾತನಾಡಿದ ಸಂಘದ ಅಧ್ಯಕ್ಷ ಆರ್. ಮಂಜುನಾಥ್ ಅವರು, ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಒಂದು ಗಂಟೆ ಸಮಯ ನೀಡಿ ಗುತ್ತಿಗೆದಾರರು ಎದುರಿಸುತ್ತಿರುವ ಎಲ್ಲಾ ಸಮಸ್ಯೆಗಳನ್ನು ಆಲಿಸಿದರು. ಚರ್ಚೆಗಳ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡುವುದಾಗಿ ಹೇಳಿದರು.

ನೀರಾವರಿ ಇಲಾಖೆ, ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಲಿಮಿಟೆಡ್ (ಕೆಆರ್‌ಐಡಿಎಲ್) ಕಾಮಗಾರಿಗಳು ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಗೆ ಸಂಬಂಧಿಸಿದ ಕಾಮಗಾರಿಗಳ ಫೈಲ್‌ಗಳನ್ನು ತೆರವುಗೊಳಿಸಲು ತಮ್ಮ ಆಪ್ತ ಕಾರ್ಯದರ್ಶಿ ರಾಜೇಂದ್ರ ಪ್ರಸಾದ್ ಅವರಿಗೆ ನಿರ್ದೇಶನ ನೀಡಿದರು ಎಂದು ತಿಳಿಸಿದರು.

Deputy Chief Minister DK Shivakumar held a meeting with the members of the association on Saturday.
ನೀವೊಬ್ಬರು ಸಚಿವರು...ಹೀಗೆ ಕೇಳಿದ್ರೆ ಹೇಗೆ; ಸಚಿವ ತಿಮ್ಮಾಪುರ ವಿರುದ್ಧ ಡಿಕೆ.ಶಿವಕುಮಾರ್ ಗರಂ

ನೀರಾವರಿ ಇಲಾಖೆಯಲ್ಲಿ ಕೆಲಸ ಮಾಡುವ ಗುತ್ತಿಗೆದಾರರಿಗೆ 50 ಲಕ್ಷ ರೂ.ಗಳವರೆಗೆ ತೆರವುಗೊಳಿಸಲು ಡಿಸಿಎಂ ನಿರ್ದೇಶನ ನೀಡಿದ್ದಾರೆ.

ಇದಲ್ಲದೆ, ಬಿಬಿಎಂಪಿಯಿಂದ ಶೇ.10ರಷ್ಟು ಮೊತ್ತ. ಕೆಆರ್‌ಐಡಿಎಲ್‌ನಲ್ಲಿ ಬಾಕಿ ಇರುವ ಕೆಲಸಗಳಿಗೆ ಮುಂಗಡ ಭದ್ರತಾ ಠೇವಣಿಯ ಶೇ.25 ಅನ್ನು ತೆರವುಗೊಳಿಸುವ ಮನವಿಯನ್ನು ಪರಿಗಣಿಸುವಂತೆ ಸದಸ್ಯರು ಡಿಸಿಎಂ ಬಳಿ ಮನವಿ ಮಾಡಿದ್ದಾರೆ.

ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮಾತನಾಡಿ, ಸರ್ಕಾರವು ಗುತ್ತಿಗೆದಾರರ ಸಂಕಷ್ಟ ಅರ್ಥ ಮಾಡಿಕೊಂಡಿದೆ. ಇದರರ್ಥ, ಅವರು ಸರ್ಕಾರವನ್ನು ಬೆದರಿಸಿದ್ದಾರೆಂದಲ್ಲ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಜೆಟ್ ನಲ್ಲಿ ಅನುದಾನ ನಿಗದಿ ಮಾಡದೇ ಸಾವಿರಾರು ಕೋಟಿ ರೂ. ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು. ಜಲಸಂಪನ್ಮೂಲ ಇಲಾಖೆಯಲ್ಲಿಯೇ 17 ಸಾವಿರ ಕೋಟಿ ರೂ. ಬಾಕಿ ಬಿಲ್ ಉಳಿಸಲಾಗಿತ್ತು.

ಸದ್ಯ ಇಲಾಖೆ ಅಡಿಯ ನಿಗಮಗಳಲ್ಲಿ 200 ಕೋಟಿ ರೂ ಅನುದಾನವಿದೆ. ಅದನ್ನು ಯಾವ ಗುತ್ತಿಗೆದಾರರಿಗೆ ಪಾವತಿಸಬೇಕು? ಕೆಲ ಇಲಾಖೆಗಳಲ್ಲಿ ಬಿಲ್ ಪಾವತಿಗೆ ಗೊಂದಲಗಳಾಗಿರಬಹುದು. ಹಂತಹಂತವಾಗಿ ಬಿಲ್ ಪಾವತಿಸುತ್ತೇವೆ. ಈ ಬಗ್ಗೆ ಗುತ್ತಿಗೆದಾರರಿಗೂ ತಿಳಿಸಲಾಗಿದೆ. ನಾನು ವಿರೋಧ ಪಕ್ಷದಲ್ಲಿದ್ದಾಗಲೇ ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಿದ್ದೆ. ಬಜೆಟ್ ನಲ್ಲಿ ಹಣ ಇಡದ ಕಾಮಗಾರಿ ನಡೆಸದಂತೆ ಹೇಳಿದ್ದೆ. ಅದನ್ನು ಕೇಳದೆ ಕೆಲಸ ಮಾಡಿದ್ದಾರೆ. ಈ ಎಲ್ಲಾ ಸವಾಲುಗಳನ್ನು ಎದುರಿಸಲು ಒಂದು ವ್ಯವಸ್ಥೆಯನ್ನು ತರಲಾಗುತ್ತಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com