ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಗೆಲುವಿನ ಸಂಭ್ರಮದ ಬಳಿಕ ಹೃದಯಾಘಾತವಾಗಿ ಮಾಜಿ ಅಧ್ಯಕ್ಷ ಸಾವು

ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ನಿನ್ನೆ ಪ್ರಕಟಗೊಂಡಿದ್ದು ಜಾರಕಿಹೊಳಿ ಸಹೋದರರಿಗೆ ಪೂರ್ಣ ಪ್ರಮಾಣದ ಗೆಲುವು ಸಿಕ್ಕಿದೆ.
ಗಿರಿಯಪ್ಪ ಗಂಟೋಟಿ
ಗಿರಿಯಪ್ಪ ಗಂಟೋಟಿ
Updated on

ಬೆಳಗಾವಿ: ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ನಿನ್ನೆ ಪ್ರಕಟಗೊಂಡಿದ್ದು ಜಾರಕಿಹೊಳಿ ಸಹೋದರರಿಗೆ ಪೂರ್ಣ ಪ್ರಮಾಣದ ಗೆಲುವು ಸಿಕ್ಕಿದೆ. ಇನ್ನು ರಾಮದುರ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧೆ ಮಾಡಿದ್ದ ಶಾಸಕ ಅಶೋಕ ಪಟ್ಟಣ ಅವರ ಆಪ್ತ ಮಲ್ಲಣ್ಣ ಯಾದವಾಡ ಅವರು ಗೆಲುವು ಸಾಧಿಸಿದ್ದರು. ಈ ಗೆಲುವಿನ ಸಂಭ್ರಮಾಚರಣೆ ಬಳಿಕ ಪಿಕೆಪಿಎಸ್ ಮಾಜಿ ಅಧ್ಯಕ್ಷ 40 ವರ್ಷದ ಗಿರಿಯಪ್ಪ ಗಂಟೋಟಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ರಾಮದುರ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕ ಮಲ್ಲಣ್ಣ ಯಾದವಾಡ ಅವರ ಪರ ಪ್ರಚಾರ ಮಾಡಿದ್ದ ಗಿರಿಯಪ್ಪ ಗಂಟೋಟಿ ನಿನ್ನೆ ವಿಜಯೋತ್ಸವದಲ್ಲಿ ಭಾಗವಹಿಸಿದ್ದರು. ಆದರೆ, ರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com