ಬೆಂಗಳೂರಿನ ಎಲ್ಲ ರಸ್ತೆ ಗುಂಡಿಗಳನ್ನು ಒಂದು ವಾರದೊಳಗೆ ಮುಚ್ಚಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ನಗರದ ವಿವಿಧ ಭಾಗಗಳಲ್ಲಿ ವೈಟ್ ಟಾಪಿಂಗ್ ಕೆಲಸ ನಡೆಯುತ್ತಿದ್ದು, ವೈಟ್ ಟಾಪಿಂಗ್ ರಸ್ತೆಗಳು 25 ರಿಂದ 30 ವರ್ಷ ಬಾಳಿಕೆ ಬರುವುದರಿಂದ ಗುಂಡಿಗಳ ಸಮಸ್ಯೆಯನ್ನು ಕಡಿಮೆ ಮಾಡಲು ಇದು ಸಹಾಯ ಮಾಡುತ್ತದೆ.
Karnataka CM Siddaramaiah
ಸಿದ್ದರಾಮಯ್ಯ
Updated on

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ನಗರದಲ್ಲಿನ ಎಲ್ಲ ಗುಂಡಿಗಳನ್ನು ಒಂದು ವಾರದೊಳಗೆ ಮುಚ್ಚುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಕಳೆದ ತಿಂಗಳು ಮುಖ್ಯಮಂತ್ರಿಗಳು ನಗರದ ಐದು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಅಕ್ಟೋಬರ್ 31 ರೊಳಗೆ ಗುಂಡಿಗಳನ್ನು ಮುಚ್ಚಲು ಗಡುವು ವಿಧಿಸಿತ್ತು.

'ನಾನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ ರಾವ್ ಮತ್ತು ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಸೇರಿದಂತೆ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಒಂದು ವಾರದೊಳಗೆ ಗುಂಡಿಗಳನ್ನು ಮುಚ್ಚಬೇಕು' ಎಂದು ಸಿದ್ದರಾಮಯ್ಯ ಹೇಳಿದರು.

ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ವೈಟ್ ಟಾಪಿಂಗ್ ಸೇರಿದಂತೆ ರಸ್ತೆಗಳ ಸಮಗ್ರ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, 'ಮಳೆಯಿಂದಾಗಿ ಗುಂಡಿಗಳನ್ನು ಮುಚ್ಚುವಲ್ಲಿ ವಿಳಂಬವಾಗಿದೆ; ಅದೇ ಸಮಸ್ಯೆ. ಈ ವರ್ಷ ಹೆಚ್ಚು ಮಳೆಯಾಗಿದೆ' ಎಂದು ಹೇಳಿದರು.

ನಗರದ ವಿವಿಧ ಭಾಗಗಳಲ್ಲಿ ವೈಟ್ ಟಾಪಿಂಗ್ ಕೆಲಸ ನಡೆಯುತ್ತಿದ್ದು, ವೈಟ್ ಟಾಪಿಂಗ್ ರಸ್ತೆಗಳು 25 ರಿಂದ 30 ವರ್ಷ ಬಾಳಿಕೆ ಬರುವುದರಿಂದ ಗುಂಡಿಗಳ ಸಮಸ್ಯೆಯನ್ನು ಕಡಿಮೆ ಮಾಡಲು ಇದು ಸಹಾಯ ಮಾಡುತ್ತದೆ. ನಗರದಲ್ಲಿನ ಗುಂಡಿಗಳನ್ನು ಮುಚ್ಚುತ್ತೇವೆ ಮತ್ತು ರಸ್ತೆಗಳಿಗೆ ವೈಟ್ ಟಾಪಿಂಗ್ ಕೂಡ ಮಾಡುತ್ತೇವೆ ಎಂದು ಅವರು ಹೇಳಿದರು.

Karnataka CM Siddaramaiah
Watch | ಟ್ವೀಟ್ ವಾರ್: ಡಿಕೆ ಶಿವಕುಮಾರ್ ಭೇಟಿ ಮಾಡಿದ ಉದ್ಯಮಿ ಕಿರಣ್ ಮಜುಂದಾರ್ ಶಾ

'ಎಲ್ಲ ಶಾಸಕರಿಗೆ ತಮ್ಮ ಕ್ಷೇತ್ರಗಳ ಅಭಿವೃದ್ಧಿಗಾಗಿ ಹಣವನ್ನು ಒದಗಿಸುತ್ತಿರುವುದಾಗಿಯೂ, ಈ ಉದ್ದೇಶಕ್ಕಾಗಿ ಬಜೆಟ್‌ನಲ್ಲಿ 8,000 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ನಗರ ಮತ್ತು ಗ್ರಾಮೀಣ ಪ್ರದೇಶದ ಶಾಸಕರಿಗೆ, ವಿರೋಧ ಪಕ್ಷದ ಶಾಸಕರಿಗೂ ಸಹ ಹಣವನ್ನು ನೀಡಲಾಗುತ್ತಿದೆ. ಏಕೆಂದರೆ, ನಾವು ಸರ್ವತೋಮುಖ ಅಭಿವೃದ್ಧಿಯನ್ನು ಬಯಸುತ್ತೇವೆ' ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com