ಮಹಾರಾಷ್ಟ್ರದಲ್ಲಿ ಅಪಘಾತ: ಕರ್ನಾಟಕದ ನಾಲ್ವರು ಸಾವು, ಇಬ್ಬರಿಗೆ ಗಾಯ

ಮೃತರು ವಿಜಯಪುರ ಸಮೀಪದ ಪ್ರಸಿದ್ಧ ದೇವಸ್ಥಾನ ಹುಲಜಂತಿಯ ಮಾಳಿಂಗರಾಯನ ಜಾತ್ರೆಗೆ ಹೋಗಿ ಬರುವಾಗ ಅಪಘಾತ ಸಂಭವಿಸಿದೆ.
Accident spot
ಅಪಘಾತಕ್ಕೀಡಾದ ಕಾರು
Updated on

ಮಹಾರಾಷ್ಟ್ರ: ನೆರೆಯ ಮಹಾರಾಷ್ಟ್ರದ ಧಾರಶಿವ್ ಜಿಲ್ಲೆಯ ಉಮರ್ಗಾ ತಾಲೂಕಿನಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಕರ್ನಾಟಕದ ನಾಲ್ವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ದುರ್ಘಟನೆ ನಡೆದಿದೆ.

ಮೃತರನ್ನು ಬೀದರ್ ತಾಲೂಕಿನ ಕಾಶೆಂಪುರ್ (ಪಿ) ಗ್ರಾಮದ ಕಾರು ಚಾಲಕ ರತಿಕಾಂತ ಮಾರುತಿ ಬಸಗೊಂಡ (30) ಸದಾನಂದ ಮಾರುತಿ ಬಸಗೊಂಡ (19) ಶಿವಕುಮಾರ್ ಚಿದಾನಂದ ವಗ್ಗೆ (26) ಸಂತೋಷ ಬಜರಂಗ ಬಸಗೊಂಡ ಎಂದು ಗುರುತಿಸಲಾಗಿದೆ.

ಮೃತರು ವಿಜಯಪುರ ಸಮೀಪದ ಪ್ರಸಿದ್ಧ ದೇವಸ್ಥಾನ ಹುಲಜಂತಿಯ ಮಾಳಿಂಗರಾಯನ ಜಾತ್ರೆಗೆ ಹೋಗಿ ಬರುವಾಗ ಅಪಘಾತ ಸಂಭವಿಸಿದೆ.

ಮುರುಮ್ ಠಾಣಾ ವ್ಯಾಪ್ತಿಯ ದಾಳಿಂಬ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಯಿಯೊಂದು ಇದಕ್ಕಎರಡು ಕಾರುಗಳ ನಡುವಿನ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನ ಒಳಗಿದ್ದವರನ್ನು ಜೆಸಿಬಿಯಿಂದ ಹೊರಗೆ ತೆಗೆಯಲಾಗಿದೆ. ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಉಮರ್ಗಾ ಆಸ್ಪತ್ರೆಗೆ ದಾಖಲಿಸಲಾಗಿದೆ.

Accident spot
ಬೆಂಗಳೂರಿನಲ್ಲಿ 2 ಪ್ರತ್ಯೇಕ ರಸ್ತೆ ಅಪಘಾತ; ಇಬ್ಬರು ಆಟೋ ಚಾಲಕರು ಸಾವು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com