ಧರ್ಮಸ್ಥಳ ಪ್ರಕರಣ: ತಾರ್ಕಿಕ ಅಂತ್ಯದವರೆಗೂ SIT ತನಿಖೆ ಮುಂದುವರೆಸಬೇಕು, ಮಹಿಳಾ ಹೋರಾಟಗಾರರ ಒತ್ತಾಯ

ಎಸ್ ಐಟಿ ತನಿಖೆಯನ್ನು ಸಮಗ್ರವಾಗಿ ನಡೆಸಬೇಕು. ತಾರ್ಕಿಕ ಅಂತ್ಯದವರೆಗೂ ಸ್ಥಗಿತಗೊಳಿಸಬಾರದು ಎಂದು ಮನವಿ ಮಾಡಿತು.
women activists met CM Siddaramaiah
ಸಿಎಂ ಭೇಟಿಯಾದ ಮಹಿಳಾ ನಿಯೋಗ
Updated on

ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಮಹಿಳೆಯರ ಮೇಲಿನ ಎಲ್ಲ ದೌರ್ಜನ್ಯ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಗುವವರೆಗೂ ಎಸ್ ಐಟಿ ತನಿಖೆ ಮುಂದುವರೆಸಬೇಕು ಎಂದು ಮಹಿಳಾ ಹೋರಾಟಗಾರರು, ಲೇಖಕಿಯರ ನಿಯೋಗವೊಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಮಹಿಳಾ ನಿಯೋಗ, ಧರ್ಮಸ್ಥಳ ಪ್ರಕರಣಗಳಲ್ಲಿ ತಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸಿಬಿಐ ಕೋರ್ಟ್ ಹೇಳಿದೆ. ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿತು.

ಎಸ್ ಐಟಿ ತನಿಖೆಯನ್ನು ಸಮಗ್ರವಾಗಿ ನಡೆಸಬೇಕು. ತಾರ್ಕಿಕ ಅಂತ್ಯದವರೆಗೂ ಸ್ಥಗಿತಗೊಳಿಸಬಾರದು ಎಂದು ಮನವಿ ಮಾಡಿತು.

ಮಹಿಳೆಯರು ಹಾಗೂ ಸಮಾನ ಮನಸ್ಕರು ಸೇರಿ ಕೊಂದವರು ಯಾರು ಆಂದೋಲನ ರಚಿಸಿದ್ದೇವೆ. ಧರ್ಮಸ್ಥಳ ದೌರ್ಜನ್ಯ ಪ್ರಕರಣಗಳಲ್ಲಿ ನೊಂದ ಮಹಿಳೆಯರ ಪರವಾಗಿ ಆಂದೋಲನ ಧ್ವನಿ ಎತ್ತುತ್ತಿದೆ. ಸರ್ಕಾರ ನೊಂದವರಿಗೆ ನ್ಯಾಯ ಸಿಗುವಂತೆ ನೋಡಿಕೊಳ್ಳಬೇಕು ಎಂದು ಕೋರಿದರು.

ಆಂದೋಲನದ ಪ್ರಮುಖರಾದ ಚಂಪಾವತಿ, ಮಧು ಭೂಷಣ್, ಶಕುನ್, ಮಾಯಾರಾವ್ ಮತ್ತಿತರರು ನಿಯೋಗದಲ್ಲಿದ್ದರು.

women activists met CM Siddaramaiah
ಧರ್ಮಸ್ಥಳ ಪ್ರಕರಣ: ತಪ್ಪು ಮಾಡದಿದ್ದರೂ, ನಮ್ಮ ಮೇಲೆ ಯಾಕಿಷ್ಟು ದ್ವೇಷ-ಆರೋಪ- ಡಾ. ವೀರೇಂದ್ರ ಹೆಗ್ಗಡೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com