ಬೆಂಗಳೂರು: Food delivery ಬಾಯ್​​ಗಳ ಮೊಬೈಲ್ ದೋಚುತ್ತಿದ್ದ ನಾಲ್ವರು ನೇಪಾಳಿ ಪ್ರಜೆಗಳ ಬಂಧನ

ನಗರದ ಖಾಸಗಿ ಕಂಪನಿಗಳಲ್ಲಿ ಭದ್ರತಾ ಸಿಬ್ಬಂದಿ ಮತ್ತು ಮನೆಗೆಲಸದ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ರಾತ್ರಿ ವೇಳೆ ಫುಡ್​ ಡೆಲಿವರಿ ಬಾಯ್​ಗಳನ್ನು ಗುರಿಯಾಗಿಸಿಕೊಂಡು ದರೋಡೆ ಮಾಡುತ್ತಿದ್ದರು.
File photo
ಸಂಗ್ರಹ ಚಿತ್ರ
Updated on

ಬೆಂಗಳೂರು: ಫುಡ್​ ಡೆಲಿವರಿ ಬಾಯ್​ಗಳನ್ನು ಗುರಿಯಾಗಿಸಿಕೊಂಡು ಅವರ ಮೊಬೈಲ್ ಫೋನ್‌ಗಳನ್ನು ದೋಚುತ್ತಿದ್ದ ನಾಲ್ವರು ನೇಪಾಳಿ ಪ್ರಜೆಗಳನ್ನು ಬೆಳ್ಳಂದೂರು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಆರೋಪಿಗಳನ್ನು ಪರಾಸ್ ಸಿಂಗ್ (25), ಮುಖೇಶ್ ಸಾಯಿ (19), ಬಿಪಿನ್ ಕರ್ಕಿ (20), ಮತ್ತು ಸಮೀರ್ ಲೋಹರ್ ಎಂದು ಗುರುತಿಸಲಾಗಿದೆ,

ಬಂಧಿತರನ್ನು ನೇಪಾಳ ಮೂಲದ ಪಾರಸ್ ಸಿಂಗ್ (25), ಮುಕೇಶ್ ಸಾಯಿ (19), ಬಿಪಿನ್ ಕರ್ಕಿ (20), ಸಮೀರ್ ಲೋಹಾರ್ ಎಂದು ಗುರ್ತಿಸಲಾಗಿದೆ. ಇವರೆಲ್ಲರೂ ನೇಪಾಳ ಮೂಲದವರಾಗಿದ್ದು, ಕುಡ್ಲು ಗೇಟ್ ನಿವಾಸಿಗಳಾಗಿದ್ದಾರೆ.

ನಗರದ ಖಾಸಗಿ ಕಂಪನಿಗಳಲ್ಲಿ ಭದ್ರತಾ ಸಿಬ್ಬಂದಿ ಮತ್ತು ಮನೆಗೆಲಸದ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ರಾತ್ರಿ ವೇಳೆ ಫುಡ್​ ಡೆಲಿವರಿ ಬಾಯ್​ಗಳನ್ನು ಗುರಿಯಾಗಿಸಿಕೊಂಡು ದರೋಡೆ ಮಾಡುತ್ತಿದ್ದರು.

File photo
ಬೆಂಗಳೂರು: ಪಶ್ಚಿಮ ಬಂಗಾಳದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ; ಮೂವರ ಬಂಧನ

ಫುಡ್​ ಡೆಲಿವರಿ ಬಾಯ್​ಗಳ ಬೈಕ್‌ಗಳನ್ನು ತಡೆದು, ಅವರ ಮೇಲೆ ಹಲ್ಲೆ ನಡೆಸಿ, ಅವರ ಮೊಬೈಲ್ ಫೋನ್‌ಗಳನ್ನು ಕದ್ದು ಪರಾರಿಯಾಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸೆಪ್ಟೆಂಬರ್ 13 ರಂದು ರಾತ್ರಿ 11.30 ರ ಸುಮಾರಿಗೆ ಆರು ಜನರು ಫುಡ್​ ಡೆಲಿವರಿ ಬಾಯ್ ಸುರೇಶ್ ಅವರನ್ನು ದರೋಡೆ ಮಾಡಿದ್ದರು. ಘಟನೆ ಸಂಬಂಧ ಸುರೇಶ್ ಅವರು ನೀಡಿದ ದೂರಿನ ಮೇರೆಗೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ಕದ್ದ ಫೋನ್ ಗಳನ್ನು ಮಾರಾಟ ಮಾಡುವ ಬದಲು ಅವುಗಳನ್ನು ಬಳಕೆ ಮಾಡುತ್ತಿದ್ದರು. ಈ ಗ್ಯಾಂಗ್ ಬೆಳ್ಳಂದೂರು, ಹೆಬ್ಬಗೋಡಿ, ಪರಪ್ಪನ ಅಗ್ರಹಾರ, ಬಂಡೆಪಾಳ್ಯ ಮತ್ತು ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಇದೇ ರೀತಿಯ ದರೋಡೆ ನಡೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com