ನಗರದಲ್ಲಿ ಕಾಮಾಂಧರ ಅಟ್ಟಹಾಸ: "ಗೊತ್ತಿಲ್ಲದ"ಗೃಹ ಸಚಿವ ಪರಮೇಶ್ವರ್ ಅವರೇ, ಕೇಳುತ್ತಿಲ್ಲವೇ ನಾರಿಯರ ನರಳಾಟ..!

ಭ್ರಷ್ಟ ಕಾಂಗ್ರೆಸ್ ಸರ್ಕಾರದ ದುರಾಡಳಿತದಲ್ಲಿ ಕಾನೂನು ಸುವ್ಯವಸ್ಥೆ ಪಾತಾಳಕ್ಕೆ ಕುಸಿದಿದೆ. ರಾಜಧಾನಿ ಬೆಂಗಳೂರು ರೇಪ್‌ ಸಿಟಿ ಆಗುತ್ತಿದೆ. ಕರುನಾಡು ಗೂಂಡಾ ರಾಜ್ಯವಾಗುತ್ತಿದೆ.
File photo
ಸಂಗ್ರಹ ಚಿತ್ರ
Updated on

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕಾಮಾಂಧರ ಅಟ್ಟಹಾಸ ಹೆಚ್ಚಾಗುತ್ತಿದ್ದು, ಈ ನಡುವಲ್ಲೇ ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ನಗರದಲ್ಲಿ ಮಂಗಳವಾರ ಪಶ್ಚಿಮ ಬಂಗಾಳ ಮೂಲದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಘಟನೆಯ ವರದಿ ಹಿಡಿದು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಭ್ರಷ್ಟ ಕಾಂಗ್ರೆಸ್ ಸರ್ಕಾರದ ದುರಾಡಳಿತದಲ್ಲಿ ಕಾನೂನು ಸುವ್ಯವಸ್ಥೆ ಪಾತಾಳಕ್ಕೆ ಕುಸಿದಿದೆ. ರಾಜಧಾನಿ ಬೆಂಗಳೂರು ರೇಪ್‌ ಸಿಟಿ ಆಗುತ್ತಿದೆ. ಕರುನಾಡು ಗೂಂಡಾ ರಾಜ್ಯವಾಗುತ್ತಿದೆ ಎಂದು ವಾಗ್ದಾಳಿ ನಡೆಸಿದೆ.

"ಗೊತ್ತಿಲ್ಲದ"ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರೆ, ಕೇಳುತ್ತಿಲ್ಲವೇ ನಾರಿಯರ ನರಳಾಟ. ಕೀಚಕರ ಹೆಡೆಮುರಿ ಕಟ್ಟಿ, ಮಹಿಳೆಯರಲ್ಲಿ ಸುರಕ್ಷತೆಯ ಭಾವನೆ ಮೂಡಿಸುವುದು ಯಾವಾಗ ಗೃಹ ಸಚಿವರೇ? ಎಂದು ಪ್ರಶ್ನಿಸಿದೆ.

File photo
Bengaluru: ಶಿಕ್ಷಕಿಯ ಹೊಟ್ಟೆ ಕಿಚ್ಚು; ಪಶ್ಚಿಮ ಬಂಗಾಳದ ಮಹಿಳೆ ಮೇಲೆ ಮನೆಯಲ್ಲೇ ಸಾಮೂಹಿಕ ಅತ್ಯಾಚಾರ!

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com