RSS ಕಾರ್ಯಕರ್ತನಿಗೆ ಮಹತ್ವದ ಹುದ್ದೆ: ಸಿಎಂ ಸಿದ್ದರಾಮಯ್ಯ ವಿರುದ್ಧ Congress ಕಾರ್ಯಕರ್ತರ ಆಕ್ರೋಶ

ಸಾರ್ವಜನಿಕ ಸ್ಥಳಗಳಲ್ಲಿ RSS ಕಾರ್ಯಚಟುವಟಿಕೆಗಳನ್ನು ನಿಷೇಧಿಸಿದ್ದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಆರೋಪ ಪ್ರತ್ಯಾರೋಪಗಳು ಜೋರಾಗಿದೆ.
RSS ಕಾರ್ಯಕರ್ತನಿಗೆ ಮಹತ್ವದ ಹುದ್ದೆ: ಸಿಎಂ ಸಿದ್ದರಾಮಯ್ಯ ವಿರುದ್ಧ Congress ಕಾರ್ಯಕರ್ತರ ಆಕ್ರೋಶ
Updated on

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂಸೇವಾ ಸಂಘ (RSS) ಕಾರ್ಯಚಟುವಟಿಕೆಗಳನ್ನು ನಿಷೇಧಿಸಿದ್ದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಆರೋಪ ಪ್ರತ್ಯಾರೋಪಗಳು ಜೋರಾಗಿದೆ. ಇದರ ನಡುವೆ ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಟ್ರಸ್ಟ್​​​ಗೆ RSS​ ಕಾರ್ಯಕರ್ತರೊಬ್ಬರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದ್ದು ಇದು ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ತಿಪಟೂರಿನ RSS ಸದಸ್ಯ ಡಾ. ಶ್ರೀಧರ್ ಕುಮಾರ್‌ ಅವರನ್ನು ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಟ್ರಸ್ಟ್ ಸದಸ್ಯರನ್ನಾಗಿ ಸರ್ಕಾರ ನೇಮಕ ಮಾಡಿದೆ. ಕೆಎನ್ ರಾಜಣ್ಣ ರಾಜೀನಾಮೆ ಬಳಿಕ ಸಹಕಾರ ಇಲಾಖೆ ಸಿಎಂ ಸಿದ್ದರಾಮಯ್ಯ ಬಳಿಯೇ ಇದ್ದು ಇದೀಗ ಅವರೇ ನೇಮಕ ಮಾಡಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೆ ಟ್ರಸ್ಟ್​​ನ ಮುಖ್ಯಸ್ಥರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ಶ್ರೀಧರ್ ಅವರ ಟ್ರಸ್ಟ್ ಸದಸ್ಯತ್ವ ವಾಪಸ್ ಪಡೆಯುಂತೆ ಆಗ್ರಹಿಸಿದ್ದಾರೆ.

RSS ಕಾರ್ಯಕರ್ತನಿಗೆ ಮಹತ್ವದ ಹುದ್ದೆ: ಸಿಎಂ ಸಿದ್ದರಾಮಯ್ಯ ವಿರುದ್ಧ Congress ಕಾರ್ಯಕರ್ತರ ಆಕ್ರೋಶ
RSS ಸಂಘಟನೆ ಕಾನೂನಿಗಿಂತ ದೊಡ್ಡದಲ್ಲ, ಈ ಪರಿಸ್ಥಿತಿ ಎಷ್ಟು ದಿನ ಮುಂದುವರಿಯುತ್ತದೆ?: ಪ್ರಿಯಾಂಕ್ ಖರ್ಗೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com