ಬಿಹಾರ ಚುನಾವಣೆಗೆ ಹಣ ಒದಗಿಸಲು ಸಚಿವರಿಂದ ಸಿಎಂ ಸಿದ್ದರಾಮಯ್ಯ 300 ಕೋಟಿ ರೂ ಸಂಗ್ರಹ: ಶ್ರೀರಾಮುಲು

ಮುಖ್ಯಮಂತ್ರಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಇತ್ತೀಚೆಗೆ ಆಯೋಜಿಸಿದ್ದ ಭೋಜನ ಸಭೆಯಲ್ಲಿ ಈ ಮೊತ್ತವನ್ನು ಸಂಗ್ರಹಿಸಲಾಗಿದೆ ಎಂದು ಶ್ರೀರಾಮುಲು ಹೇಳಿದ್ದಾರೆ.
shreeramulu- Siddaramaiah
ಶ್ರೀರಾಮುಲು-ಸಿದ್ದರಾಮಯ್ಯonline desk
Updated on

ಬೆಂಗಳೂರು: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರಕ್ಕೆ ಹಣಕಾಸು ಒದಗಿಸಲು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸಚಿವರಿಂದ 300 ಕೋಟಿ ರೂ.ಗಳನ್ನು ಸಂಗ್ರಹಿಸಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಬಿ. ಶ್ರೀರಾಮುಲು ಗಂಭೀರ ಆರೋಪ ಮಾಡಿದ್ದಾರೆ.

ಬುಧವಾರ (ಅ.29) ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಶ್ರೀರಾಮುಲು, ಈ ಹಣ "ಸಿದ್ದರಾಮಯ್ಯ ಕುರ್ಚಿಯನ್ನು ಉಳಿಸಿಕೊಳ್ಳಲು" ಕಾಂಗ್ರೆಸ್ ಹೈಕಮಾಂಡ್ ಗೆ ಸಂದಾಯವಾಗಿದೆ ಎಂದು ಆರೋಪಿಸಿದ್ದಾರೆ

ಮುಖ್ಯಮಂತ್ರಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಇತ್ತೀಚೆಗೆ ಆಯೋಜಿಸಿದ್ದ ಭೋಜನ ಸಭೆಯಲ್ಲಿ ಈ ಮೊತ್ತವನ್ನು ಸಂಗ್ರಹಿಸಲಾಗಿದೆ ಎಂದು ಶ್ರೀರಾಮುಲು ಹೇಳಿದ್ದಾರೆ.

"ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರ್ಚಿ ಬಹುಶಃ ಅಲುಗಾಡುತ್ತಿದೆ. ಅವರು ನವೆಂಬರ್ 15 ರಂದು ದೆಹಲಿಗೆ ಹೋಗಲಿದ್ದಾರೆ. ಅವರು ತಮ್ಮ ಕುರ್ಚಿಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ನವೆಂಬರ್ 15 ರ ನಂತರ ಯಾವ ಕ್ರಾಂತಿ ಸಂಭವಿಸುತ್ತದೆ ಎಂದು ನಾವು ನೋಡಬೇಕು" ಎಂದು ಅವರು ಚಿತ್ರದುರ್ಗದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಮುಂದಿನ ತಿಂಗಳು ಕಾಂಗ್ರೆಸ್ ಸರ್ಕಾರ ತನ್ನ ಐದು ವರ್ಷಗಳ ಅವಧಿಯ ಅರ್ಧವನ್ನು ಪೂರ್ಣಗೊಳಿಸಲಿದ್ದು ನಾಯಕತ್ವ ಬದಲಾವಣೆಯ ಬಗ್ಗೆ ಊಹಾಪೋಹಗಳಿವೆ, ಇದನ್ನು ಕೆಲವರು 'ನವೆಂಬರ್ ಕ್ರಾಂತಿ' ಎಂದು ಕರೆಯುತ್ತಿದ್ದಾರೆ. "ಬಿಹಾರ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಸಚಿವರಿಂದ ಹಣ ಸಂಗ್ರಹ ಪ್ರಾರಂಭವಾಗಿವೆ. ತಮ್ಮ ಕುರ್ಚಿಯನ್ನು ಉಳಿಸಿಕೊಳ್ಳಲು ಸಿಎಂ ಈ ಸಂಗ್ರಹದ ಮೂಲಕ ಬಿಹಾರ ಚುನಾವಣೆಗೆ (ಪಕ್ಷಕ್ಕೆ) ಉತ್ತಮ ಪ್ರಮಾಣದ ಹಣವನ್ನು ಕಳುಹಿಸಲು ಬಯಸುತ್ತಾರೆ" ಎಂದು ರಾಮುಲು ಹೇಳಿದ್ದಾರೆ.

"ಬಿಹಾರ ಚುನಾವಣೆಗಾಗಿ, ಸಚಿವರನ್ನು ಭೋಜನಕ್ಕೆ ಕರೆದು, ಸಿದ್ದರಾಮಯ್ಯ ಅವರಿಂದ 300 ಕೋಟಿ ರೂ. ಸಂಗ್ರಹಿಸಿದ್ದಾರೆ. ಹೆಚ್ಚಿನ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿಲ್ಲ, ಆದ್ದರಿಂದ ಕರ್ನಾಟಕದಿಂದ 300 ಕೋಟಿ ರೂ. ಸಂಗ್ರಹಿಸುವ ಮೂಲಕ, ಸಿದ್ದರಾಮಯ್ಯ ಕಾಂಗ್ರೆಸ್‌ಗೆ 'ಕಲ್ಪವೃಕ್ಷ' ಮತ್ತು 'ಕಾಮಧೇನು' (ಆಸೆಗಳನ್ನು ಪೂರೈಸುವ ದೈವಿಕ ಮರ ಮತ್ತು ಹಸು) ಆಗಿ ಮಾರ್ಪಟ್ಟಿದ್ದಾರೆ" ಎಂದು ರಾಮುಲು ಟೀಕಾ ಪ್ರಹಾರ ನಡೆಸಿದ್ದಾರೆ.

shreeramulu- Siddaramaiah
ಬಿಜೆಪಿಯಿಂದಲೇ ಹಣ ಕಲೆಕ್ಷನ್: ಬಿಹಾರ ಚುನಾವಣೆಗೆ ರಾಜ್ಯದಿಂದ ಹಣ ಪೂರೈಕೆ ಆರೋಪಕ್ಕೆ ಸಿಎಂ ತಿರುಗೇಟು

ಬಿಹಾರ ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ಮತದಾನ ನಡೆಸಲಿದ್ದು, ನವೆಂಬರ್ 14 ರಂದು ಮತ ಎಣಿಕೆ ನಡೆಯಲಿದೆ. ಇದಕ್ಕೆ ಪ್ರತಿಯಾಗಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಬಿಜೆಪಿ ನಾಯಕರು ಕಾಂಗ್ರೆಸ್‌ಗೆ ನೀಡಿದ್ದ ಹಣವನ್ನು ಬಿಹಾರ ಚುನಾವಣೆಗೆ ಕಳುಹಿಸಲಾಗುತ್ತಿದೆ ಎಂದು ಶ್ರೀರಾಮುಲು ಅವರನ್ನು ಟೀಕಿಸಿದರು.

"ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಹಣವನ್ನು ನೀಡಿದ್ದಾರೆ; ನಾವು ಅದೇ ಹಣವನ್ನು (ಬಿಹಾರ ಚುನಾವಣೆಗೆ) ಕಳುಹಿಸಿದ್ದೇವೆ" ಎಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com