winter ರೇಸ್'ಗೆ ಬೆಂಗಳೂರು ಟರ್ಫ್ ಕ್ಲಬ್ ಸಿದ್ಧತೆ: ಕುಣಿಗಲ್‌ಗೆ ಶೀಘ್ರದಲ್ಲೇ ಸ್ಥಳಾಂತರ..!

ಬಿಟಿಸಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಸುಮಾರು 80 ಎಕರೆ ಭೂಮಿಯಲ್ಲಿ ಆರು ಎಕರೆಗಳನ್ನು ಕ್ಲಬ್‌ನ ಆಡಳಿತಾತ್ಮಕ ಕಾರ್ಯಗಳನ್ನು ಮತ್ತು ಇತರ ಚಟುವಟಿಕೆಗಳನ್ನು ನಿರ್ವಹಣೆಗೆ ಬಿಟ್ಟುಕೊಡಲು ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ.
File photo
ಬೆಂಗಳೂರು ಟರ್ಫ್ ಕ್ಲಬ್‌ (ಸಂಗ್ರಹ ಚಿತ್ರ)
Updated on

ಬೆಂಗಳೂರು: ಚಳಿಗಾಲದ ರೇಸ್'ಗಾಗಿ ಬೆಂಗಳೂರು ಟರ್ಫ್ ಕ್ಲಬ್ ಸಿದ್ಧತೆ ನಡೆಸುತ್ತಿದ್ದು, ಕುಣಿಗಲ್'ಗೆ ಸ್ಥಳಾಂತರಗೊಳ್ಳಲು ರಾಜ್ಯ ಸರ್ಕಾರದ ಅಧಿಕೃತ ಆದೇಶಕ್ಕಾಗಿ ಕಾಯುತ್ತಿದ್ದಾರೆ.

ಬಿಟಿಸಿ ಅಧ್ಯಕ್ಷ ಮಂಜುನಾಥ ರಮೇಶ್ ಅವರು ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಿಂದ ಸ್ಥಳಾಂತರಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ಹೀಗಾಗಿ ಕುಣಿಗಲ್‌ಗೆ ಸ್ಥಳಾಂತರಗೊಳ್ಳುವುದನ್ನು ಬಿಟ್ಟು ನಮಗೆ ಬೇರೆ ದಾರಿಯಿಲ್ಲ ಎಂದು ಹೇಳಿದ್ದಾರೆ.

ನಾವು ಸರ್ಕಾರದ ಸೂಚನೆಗಳನ್ನು ಪಾಲನೆ ಮಾಡಬೇಕಿದೆ ಎಂದು ಪುಣೆಯ ಪೂನವಲ್ಲಾ ಸ್ಟಡ್ ಫಾರ್ಮ್ಸ್‌ನ ಜವರಾಯ್ ಎಸ್ ಪೂನವಲ್ಲಾ ಅವರು ಹೇಳಿದ್ದಾರೆ. ಇದೇ ವೇಳೆ 2 ವರ್ಷಗಳಲ್ಲಿ ಕುಣಿಗಲ್'ಗೆ ಸ್ಥಳಾಂತರಗೊಳ್ಳುತ್ತಿರುವ ಬಗ್ಗೆಯೂ ಮಾಹಿತಿ ನೀಡಿದರು.

ಬಿಟಿಸಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಸುಮಾರು 80 ಎಕರೆ ಭೂಮಿಯಲ್ಲಿ ಆರು ಎಕರೆಗಳನ್ನು ಕ್ಲಬ್‌ನ ಆಡಳಿತಾತ್ಮಕ ಕಾರ್ಯಗಳನ್ನು ಮತ್ತು ಇತರ ಚಟುವಟಿಕೆಗಳನ್ನು ನಿರ್ವಹಣೆಗೆ ಬಿಟ್ಟುಕೊಡಲು ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆಂದು ತಿಳಿಸಿದರು.

File photo
ರೇಸ್ ಆರಂಭವಾದ ನಂತರವೂ ನೀವು ಬಾಜಿ ಕಟ್ಟಬಹುದು: ಬೆಂಗಳೂರು ಟರ್ಫ್ ಕ್ಲಬ್‌ ಅಕ್ರಮಗಳ ಆಗರ!

ಇದೇ ವೇಳೆ ವಿಂಟರ್ ರೇಸ್ ಕುರಿತಂತೆಯೂ ಮಾಹಿತಿ ನೀಡಿದರು. "ಜಿಎಸ್‌ಟಿ 2.0 ಅನುಷ್ಠಾನದ ನಂತರ, ನಾವು ರೇಸ್‌ಗಳನ್ನು ನಡೆಸುವ ಸ್ಥಿತಿಯಲ್ಲಿ ಇರಲಿಲ್ಲ, ಈ ಬಾರಿ ಆಯೋಜಿಸಲಾಗುತ್ತಿದ್ದು, ರೇಸಿಂಗ್ ಒಟ್ಟು 24 ದಿನಗಳ ಕಾಲ ನಡೆಯಲಿದೆ ಎಂದು ಹೇಳಿದರು.

ಜಿಎಸ್'ಟಿ ಸಂಬಂಧ ಸುಪ್ರೀಂಕೋರ್ಟ್ ಮೆಟ್ಟಿಲೇರಲಾಗಿದೆ. ಸರಕುಗಳ' ಮೇಲೆ ವಿಧಿಸಲಾದ ಶೇಕಡಾ 40 ರಷ್ಟು ತೆರಿಗೆಯಿಂದ ಬೆಟ್ಟಿಂಗ್‌ಗೆ ವಿನಾಯಿತಿ ನೀಡುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com