ಮೋದಿ ಸರ್ಕಾರದ ರಾಜಕೀಯದಿಂದಾಗಿ ರಾಜ್ಯಕ್ಕೆ ಉದ್ಯಮಗಳು ಕೈ ತಪ್ಪುತ್ತಿವೆ: ಸಚಿವ ಎಂ.ಬಿ.ಪಾಟೀಲ್ ಆರೋಪ

ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು, ಬಿಜೆಪಿಯನ್ನು ಬೆಂಬಲಿಸುತ್ತಿರುವುದರಿಂದ, ಕೇಂದ್ರವು 22,000 ಕೋಟಿ ರೂ.ಗಳ ಪ್ರೋತ್ಸಾಹ ಧನವನ್ನು ನೀಡಿದೆ. ಇದರಿಂದಾಗಿ ಗೂಗಲ್ ಅಲ್ಲಿ ಹೂಡಿಕೆ ಮಾಡಿದೆ.
ಸಚಿವ ಎಂ.ಬಿ.ಪಾಟೀಲ್
ಸಚಿವ ಎಂ.ಬಿ.ಪಾಟೀಲ್
Updated on

ಬೆಂಗಳೂರು: ಕರ್ನಾಟಕದಿಂದ ಆಂಧ್ರಪ್ರದೇಶಕ್ಕೆ ಉದ್ಯಮಗಳು ಸ್ಥಳಾಂತರವಾಗುತ್ತಿರುವುದಕ್ಕೆ ಕೇಂದ್ರ ಸರ್ಕಾರ ರಾಜಕೀಯ ಆಟವೇ ಕಾರಣ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರವು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿರುವ ರಾಜ್ಯಗಳಿಗೆ ಒಲವು ತೋರುತ್ತಿದೆ. ಕರ್ನಾಟಕದಿಂದ ಆಂಧ್ರಪ್ರದೇಶಕ್ಕೆ ಉದ್ಯಮಗಳು ಸ್ಥಳಾಂತರವಾಗುತ್ತಿರುವದಕ್ಕೆ ಕೇಂದ್ರದ ರಾಜಕೀಯ ಆಟವೇ ಕಾರಣ ಎಂದು ಆರೋಪಿಸಿದ್ದಾರೆ.

ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು, ಬಿಜೆಪಿಯನ್ನು ಬೆಂಬಲಿಸುತ್ತಿರುವುದರಿಂದ, ಕೇಂದ್ರವು 22,000 ಕೋಟಿ ರೂ.ಗಳ ಪ್ರೋತ್ಸಾಹ ಧನವನ್ನು ನೀಡಿದೆ. ಇದರಿಂದಾಗಿ ಗೂಗಲ್ ಅಲ್ಲಿ ಹೂಡಿಕೆ ಮಾಡಿದೆ. ಬಿಜೆಪಿಯನ್ನು ಬೆಂಬಲಿಸಿದ್ದಕ್ಕಾಗಿ ಪ್ರಧಾನಿ ಮೋದಿ ಅವರು ನಾಯ್ಡು ಅವರಿಗೆ ನೀಡಿದ ಉಡುಗೊರೆ ಇದು ಎಂಬುದು ಸ್ಪಷ್ಟವಾಗಿದೆ ಎಂದು ಹೇಳಿದರು.

ಅದೇ ರೀತಿ, ಸೆಮಿ-ಕಂಡಕ್ಟರ್‌ ಸೇರಿದಂತೆ ಹಲವು ಹೈಟೆಕ್ ಉದ್ಯಮಗಳು ಕೈ ತಪ್ಪಲು ಬೇರೆ ಬೇರೆ ಕಾರಣಗಳಿದ್ದರೂ, ಕೇಂದ್ರ ಸರ್ಕಾರವು ತಮಗೆ ಬೇಕಾದ ರಾಜ್ಯಗಳಿಗೆ ಕಂಪನಿಗಳನ್ನು ಕಳುಹಿಸುತ್ತಿದೆ. ನಾವು ಕಂಪನಿಗಳೊಂದಿಗೆ ಎಲ್ಲಾ ಮಾತುಕತೆಗಳನ್ನು ಪೂರ್ಣಗೊಳಿಸಿದ್ದರೂ, ದೆಹಲಿಗೆ ಹೋದ ನಂತರ ನಿರ್ಧಾರ ಬದಲಾಗುತ್ತದೆ. ಗೂಗಲ್ ಕಂಪನಿ ಆಂಧ್ರಪ್ರದೇಶಕ್ಕೆ ತೆರಳಲು ಕೇಂದ್ರ ಸರ್ಕಾರವೇ ಕಾರಣವಾಗಿದ್ದು, ಅದು ಚಂದ್ರಬಾಬು ನಾಯ್ಡು ಅವರಿಗೆ ನೀಡಿದ ಉಡುಗೊರೆ ಎಂದು ವಾಗ್ದಾಳಿ ನಡೆಸಿದರು.

ಸಚಿವ ಎಂ.ಬಿ.ಪಾಟೀಲ್
ಉದ್ಯಮಿಗಳಿಗೆ ನಾವು ಕೇವಲ ಭೂಮಿ ಕೊಡುವುದಿಲ್ಲ: ಆಂಧ್ರ ಸಚಿವ ನಾರಾ ಲೋಕೇಶ್ ಗೆ ಎಂಬಿ ಪಾಟೀಲ್ ತಿರುಗೇಟು

ಕರ್ನಾಟಕವು ಅತ್ಯುತ್ತಮ ಕೈಗಾರಿಕಾ ಪರಿಸರ ವ್ಯವಸ್ಥೆ, ಕೌಶಲ್ಯಪೂರ್ಣ ಮಾನವ ಸಂಪನ್ಮೂಲಗಳು ಮತ್ತು ಬೆಂಬಲಿತ ಸರ್ಕಾರಿ ನೀತಿಗಳನ್ನು ಒದಗಿಸುತ್ತದೆ. ಕೈಗಾರಿಕೆಗಳು ರಾಜ್ಯವನ್ನು ತೊರೆಯುತ್ತಿವೆ ಎಂಬ ತಪ್ಪು ಕಲ್ಪನೆ ಹರಡಲಾಗುತ್ತಿದೆ, ಆದರೆ ಅದು ನಿಜವಲ್ಲ. ಯಾವುದೇ ಉದ್ಯಮವು ಕರ್ನಾಟಕದಿಂದ ನೆರೆಯ ರಾಜ್ಯಗಳಿಗೆ ಸ್ಥಳಾಂತರಗೊಂಡಿಲ್ಲ. ಜಾಗತಿಕ ಹೂಡಿಕೆದಾರರ ಸಭೆಯ ನಂತರ, ಕರ್ನಾಟಕವು 10.27 ಲಕ್ಷ ಕೋಟಿ ರೂ. ಮೌಲ್ಯದ ಹೂಡಿಕೆಗಳನ್ನು ಪಡೆದುಕೊಂಡಿದೆ. ಜಪಾನ್ ಮತ್ತು ಕೊರಿಯನ್ ಕಂಪನಿಗಳು ಮಾತ್ರ 6,500 ಕೋಟಿ ರೂ. ಹೂಡಿಕೆ ಮಾಡುತ್ತಿವೆ. ಹೋಂಡಾ ತನ್ನ ಕಾರ್ಯಾಚರಣೆಯನ್ನು ವಿಸ್ತರಿಸಲು ಆಸಕ್ತಿ ತೋರಿಸಿದೆ ಮತ್ತು ಫಾಕ್ಸ್‌ಕಾನ್ ಚೀನಾದ ನಂತರ ಕರ್ನಾಟಕದಲ್ಲಿ ತನ್ನ ಎರಡನೇ ಅತಿದೊಡ್ಡ ಉತ್ಪಾದನಾ ಘಟಕವನ್ನು ಸ್ಥಾಪಿಸುತ್ತಿದೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಫೆಬ್ರವರಿಯಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮ್ಮೇಳನವು ಈಗಾಗಲೇ ಗಮನಾರ್ಹ ಬಂಡವಾಳ ಒಳಹರಿವು ಆಗಿ ಪರಿವರ್ತನೆಗೊಂಡಿದೆ. 10.27 ಲಕ್ಷ ಕೋಟಿ ರೂ. ಹೂಡಿಕೆಯಲ್ಲಿ ಶೇ.60 ಕ್ಕಿಂತ ಹೆಚ್ಚು ಕೈಗಾರಿಕೆಗಳು ಈಗಾಗಲೇ ಕಾರ್ಯರೂಪಕ್ಕೆ ಬಂದಿದೆ, ಇದು ಸಾವಿರಾರು ಹೊಸ ಉದ್ಯೋಗಗಳನ್ನು ಸೃಷ್ಟಿಸಿದೆ. ಕರ್ನಾಟಕದ ಕೈಗಾರಿಕಾ ನೀತಿಯು ವ್ಯವಹಾರ ಸ್ನೇಹಿಯಾಗಿದೆ. ಸುಸ್ಥಿರ, ದೀರ್ಘಕಾಲೀನ ಹೂಡಿಕೆಗಳನ್ನು ಆಕರ್ಷಿಸಲು ವಿನ್ಯಾಸಗೊಳಿಸಲಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com