ತೀವ್ರ ವಿರೋಧದ ನಡುವೆಯೂ ಬಾನು ಮುಷ್ತಾಕ್ ಗೆ ದಸರಾ ಉದ್ಘಾಟನೆಗೆ ಜಿಲ್ಲಾಡಳಿತ ಅಧಿಕೃತ ಆಹ್ವಾನ! Video

ತೀವ್ರ ವಿರೋಧದ ನಡುವೆಯೂ ಸೆಪ್ಟೆಂಬರ್ 22ರಂದು ನಡೆಯಲಿರುವ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಬಾನು ಮುಷ್ತಾಕ್ ಅವರಿಗೆ ಮೈಸೂರು ಜಿಲ್ಲಾಡಳಿತ ಅಧಿಕೃತ ಆಹ್ವಾನ ನೀಡಿದೆ.
Banu Mushtaq
ಬಾನು ಮುಷ್ತಾಕ್
Updated on

ಹಾಸನ: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಇದರ ಮಧ್ಯೆ ಸೆಪ್ಟೆಂಬರ್ 22ರಂದು ನಡೆಯಲಿರುವ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಬಾನು ಮುಷ್ತಾಕ್ ಅವರಿಗೆ ಮೈಸೂರು ಜಿಲ್ಲಾಡಳಿತ ಅಧಿಕೃತ ಆಹ್ವಾನ ನೀಡಿದೆ. ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಹಾಸನದಲ್ಲಿರುವ ಬಾನು ಮುಷ್ತಾಕ್ ಅವರ ಮನೆಗೆ ತೆರಳಿ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಕುಟುಂಬ ಸಮೇತರಾಗಿ ದಸರಾಗೆ ಬರುವಂತೆ ಅಧಿಕೃತ ಆಹ್ವಾನ ನೀಡಿದ್ದಾರೆ. ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ ಆನೆ ವಿಗ್ರಹ ನೀಡಿ ಆಹ್ವಾನ ಪತ್ರಿಕೆಯನ್ನು ನೀಡಿದರು. ದಸರಾ ಆಹ್ವಾನವನ್ನು ಪ್ರೀತಿಯಿಂದ ಸ್ವೀಕರಿಸಿದ ಬಾನು ಮುಷ್ತಾಕ್ ತಾವು ಕಾರ್ಯಕ್ರಮಕ್ಕೆ ಬರುವುದಾಗಿ ತಿಳಿಸಿದ್ದಾರೆ.

Banu Mushtaq
ಮೈಸೂರು ಅರಮನೆಗೆ ದ್ರೌಪದಿ ಮುರ್ಮು ಭೇಟಿ: ರಾಜವಂಶಸ್ಥರಿಂದ ರಾಷ್ಟ್ರಪತಿಗಳಿಗೆ ರಾಜಾತಿಥ್ಯ..!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com