ಭೀಮಾತೀರದಲ್ಲಿ ಹರಿದ ನೆತ್ತರು: ಗ್ರಾಮ ಪಂಚಾಯ್ತಿ ಅಧ್ಯಕ್ಷನಿಗೆ ಗುಂಡಿಕ್ಕಿ ಹತ್ಯೆ

ಮೃತರನ್ನು ನಿಂಬರಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಭೀಮನಗೌಡ ಬಿರಾದಾರ ಎಂದು ಗುರುತಿಸಲಾಗಿದ್ದು, ಭೀಮಾತೀರದ ಮಹಾದೇವ ಸಾಹುಕಾರ್‌ ಭೈರಗೊಂಡ ಅವರ ಪರಮಾಪ್ತರಾಗಿದ್ದರು ಎಂದು ತಿಳಿದುಬಂದಿದೆ.
Bhimana Gowda Biradara
ಗ್ರಾಮ ಪಂಚಾಯಿತಿ ಅಧ್ಯಕ್ಷ ಭೀಮನಗೌಡ ಬಿರಾದಾರ
Updated on

ವಿಜಯಪುರ: ಭೀಮಾತೀರದಲ್ಲಿ ಮತ್ತೆ ನೆತ್ತರು ಹರಿದಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷನ ಮೇಲೆ ಗುಂಡು ಹಾರಿಸಿ, ತಲವಾರ್‌ನಿಂದ ಹಲ್ಲೆ ಮಾಡಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರನಿಂಬರಗಿ ಗ್ರಾಮದಲ್ಲಿ ಇಂದು ಬೆಳಗಿನ ಜಾವ ನಡೆದಿದೆ.

ಮೃತರನ್ನು ನಿಂಬರಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಭೀಮನಗೌಡ ಬಿರಾದಾರ ಎಂದು ಗುರುತಿಸಲಾಗಿದ್ದು, ಭೀಮಾತೀರದ ಮಹಾದೇವ ಸಾಹುಕಾರ್‌ ಭೈರಗೊಂಡ ಅವರ ಪರಮಾಪ್ತರಾಗಿದ್ದರು ಎಂದು ತಿಳಿದುಬಂದಿದೆ.

Bhimana Gowda Biradara
ಭೀಮಾ ತೀರದಲ್ಲಿ ಮತ್ತೆ ಗುಂಡಿನ ದಾಳಿ; ರೌಡಿಶೀಟರ್‌ ಸ್ಥಳದಲ್ಲೇ ಸಾವು

ಇಂದು ಬೆಳಗ್ಗೆ ಮೃತ ಭೀಮನಗೌಡ ಅವರು ದೇವರ ನಿಂಬರಗಿ ಗ್ರಾಮದ ಕಟಿಂಗ್ ಶಾಪ್‌ಗೆ ಆಗಮಿಸಿದ್ದರು. ಈ ವೇಳೆ ಮೂರರಿಂದ ನಾಲ್ಕು ಜನ ಮುಸುಕುಧಾರಿಗಳು ಬಂದು ಕಟಿಂಗ್ ಮಾಡುವವರ ಕಣ್ಣಿಗೆ ಖಾರದ ಪುಡಿ ಎರಚಿದ್ದಾರೆ. ಬಳಿಕ ಭೀಮನಗೌಡ ಅವರ ಮೇಲೆ ಫೈರಿಂಗ್ ನಡೆಸಿ, ತಲವಾರ್‌ನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.

ಸದ್ಯ ಭೀಮನಗೌಡ ಅವರ ಮೃತದೇಹವನ್ನು ವಿಜಯಪುರ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಹಳೆಯ ವೈಷಮ್ಯದ ಹಿನ್ನೆಲೆ ಗುಂಡು ಹಾರಿಸಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com