'ಸ್ವಾತಂತ್ರ್ಯ ಹೋರಾಟದಲ್ಲಿ ಯಾರ ಮನೆ ನಾಯಿ ಭಾಗವಹಿಸಿತ್ತೆಂದು ಬಹಿರಂಗ ಪಡಿಸಲಿ: ರಾಜ್ಯ ಸರ್ಕಾರದಲ್ಲಿ ಬಚ್ಚಲುಬಾಯಿ ಮಂತ್ರಿಗಳು!'

ಸಂಘ ಶುರುವಾಗಿದ್ದು 1951ರಲ್ಲಿ. ಬಿಜೆಪಿ ಹುಟ್ಟಿದ್ದೇ 1980ರ ದಶಕದಲ್ಲಿ. ಹೀಗಿದ್ದಾಗ ನಾವೆಲ್ಲಿ ಹೋರಾಡಲು ಸಾಧ್ಯ? ಆದರೆ ಹೆಗಡೇವಾರ್ ಅಂತಹವರು ಹೋರಾಟದ ಹಾದಿಯಿಂದಲೇ ಬಂದವರು ಎಂದರು.
B L santhosh
ಬಿ.ಎಲ್ ಸಂತೋಷ್
Updated on

ಮೈಸೂರು: ಬಿಜೆಪಿ ನಾಯಿ ಕೂಡಾ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿರಲಿಲ್ಲ ಎನ್ನುವ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಮನೆಯ ಯಾವ ನಾಯಿ ಹೋರಾಡಿತ್ತು ಎಂದು ಬಹಿರಂಗಪಡಿಸಲಿ ಎಂದು ಬಿ.ಎಲ್. ಸಂತೋಷ್ ಸವಾಲು ಹಾಕಿದರು.

ಸಾವರ್ಕರ್ ಪ್ರತಿಷ್ಠಾನ ಮೈಸೂರು ಸಂಘಟನೆಯು ಕಲಾಮಂದಿರದಲ್ಲಿ ಆಯೋಜಿಸಿದ್ದ ‘ಸಾವರ್ಕರ್ ಕಲ್ಪನೆಯ ಭಾರತೀಯ ಸೇನೆ ಮತ್ತು ಆಪರೇಷನ್‌ ಸಿಂಧೂರ್‌’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂಘ ಶುರುವಾಗಿದ್ದು 1951ರಲ್ಲಿ. ಬಿಜೆಪಿ ಹುಟ್ಟಿದ್ದೇ 1980ರ ದಶಕದಲ್ಲಿ. ಹೀಗಿದ್ದಾಗ ನಾವೆಲ್ಲಿ ಹೋರಾಡಲು ಸಾಧ್ಯ? ಆದರೆ ಹೆಗಡೇವಾರ್ ಅಂತಹವರು ಹೋರಾಟದ ಹಾದಿಯಿಂದಲೇ ಬಂದವರು ಎಂದರು.

ರಾಜ್ಯ ಸರ್ಕಾರದಲ್ಲಿ ಮೂವರು ಬಚ್ಚಲುಬಾಯಿ ಮಂತ್ರಿಗಳಿದ್ದಾರೆ. ದೇಶದಲ್ಲಿ ಎಲ್ಲಿ ಹೋದರೂ ಇಂದಿರಾ- ರಾಜೀವ್ ಹೆಸರಿದೆ. ಆದರೆ ಬೆಂಗಳೂರಿನಲ್ಲಿ ಒಂದು ಫ್ಲೈ ಓವರ್ ಗೆ ಸಾವರ್ಕರ್ ಹೆಸರು ಇಡಲು ವಿರೋಧವೇಕೆ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ತನಗೆ ಅನುಕೂಲಕರವಲ್ಲದ ಸತ್ಯದ ವಿರುದ್ಧ ಅಪಪ್ರಚಾರ ಮಾಡುತ್ತಲೇ ಇದೆ. ಸ್ವಾತಂತ್ರ್ಯ ಗಳಿಸುವಲ್ಲಿ ಅಸಹಕಾರ ಆಂದೋಲನದ ಬಹುದೊಡ್ಡ ಪಾತ್ರವಿರುವುದು ನಿಜ. ಕಾಂಗ್ರೆಸ್ ಹೋರಾಟವೂ ನಿಜ. ಅಂದು ಇದ್ದದ್ದೇ ಒಂದು ಪಕ್ಷ. ಅದನ್ನು ನಾವು ಅಲ್ಲಗೆಳೆಯುತ್ತಿಲ್ಲ, ಕಾಂಗ್ರೆಸ್ ಕಾರ್ಯವೈಖರಿಯಿಂದ ಭ್ರಮನಿರಸನಗೊಂಡು ಮುಖರ್ಜಿ ಜನಸಂಘವನ್ನು ರಚಿಸಿದರು ಎಂದು ಹೇಳಿದರು.

B L santhosh
ಬಿ.ಎಲ್ ಸಂತೋಷ್ ವಿರುದ್ಧ ಹೇಳಿಕೆ: ಮಹೇಶ್ ತಿಮರೋಡಿಗೆ ಷರತ್ತು ಬದ್ಧ ಜಾಮೀನು; ಧರ್ಮಸ್ಥಳ ಪ್ರಕರಣದಲ್ಲಿ ಮತ್ತೆ ಬಂಧನದ ಭೀತಿ?

ವಿನಾಯಕ ದಾಮೋದರ್ ಸಾವರ್ಕರ್ ಅವರಂತಹ ಸ್ವಾತಂತ್ರ್ಯ ಹೋರಾಟಗಾರರು ಮಾಡಿದ ತ್ಯಾಗಗಳನ್ನು ಜೀರ್ಣಿಸಿಕೊಳ್ಳುವ ಸಾಮರ್ಥ್ಯವೂ ಇಲ್ಲದ ಕಾರಣ, ಕಾಂಗ್ರೆಸ್ ಮತ್ತು ಎಡ ಪಕ್ಷಗಳು ಅಹಿತಕರ ಸತ್ಯಗಳನ್ನು ಮುಚ್ಚಿಹಾಕಿವೆ. ಆದರೆ, ಕಾಲಕಾಲಕ್ಕೆ ಅಂತಹ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗದ ಕಥೆಗಳು ಹೊರಹೊಮ್ಮುತ್ತವೆ, ಏಕೆಂದರೆ ಸತ್ಯವನ್ನು ಶಾಶ್ವತವಾಗಿ ಮರೆಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗಗಳನ್ನು ಗುರುತಿಸುವ ಮತ್ತು ಮೆಚ್ಚುವವರಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಂತಹ ಕೆಲವು ಜನರ 'ವಿರೋಧ ಭಕ್ತಿ' (ದ್ವೇಷ) ಅವರ ಬಗ್ಗೆ ಕುತೂಹಲವನ್ನು ಮೂಡಿಸಲು ಸಹಾಯ ಮಾಡುತ್ತದೆ, ಇದು ಅಜ್ಞಾನಿಗಳಲ್ಲಿ ಅಧ್ಯಯನ ಮತ್ತು ಸಂಶೋಧನೆಯ ಮೂಲಕ ಸತ್ಯದ ಸಾಕ್ಷಾತ್ಕಾರಕ್ಕೆ ಕಾರಣವಾಗುತ್ತದೆ. ಆದ್ದರಿಂದ, ನಾವು ಸಿದ್ದರಾಮಯ್ಯ ಅವರಂತಹ ವಿರೋಧಿಗಳಿಗೂ ಧನ್ಯವಾದ ಹೇಳಬೇಕು" ಎಂದು ಸಂತೋಷ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com