ಡಿಕೆ ಶಿವಕುಮಾರ್ ಬೆಂಬಲಿಗರ ಪ್ರಕರಣಗಳು ಸೇರಿ 60 ಕ್ರಿಮಿನಲ್ ಕೇಸ್‌ ವಾಪಸ್‌ ಪಡೆಯಲು ರಾಜ್ಯ ಸರ್ಕಾರ ನಿರ್ಧಾರ!

2019ರಲ್ಲಿ ಚಿತ್ತಾಪುರದಲ್ಲಿ ನಡೆದ ಕಲ್ಲು ತೂರಾಟ ನಡೆಸಿದವರ ವಿರುದ್ಧ ದಾಖಲಾಗಿರುವ ಪ್ರಕರಣ ಮತ್ತು ಅದೇ ವರ್ಷ ಡಿಕೆ ಶಿವಕುಮಾರ್ ಅವರು ಬೆಂಬಲಿಗರ ವಿರುದ್ಧ ದಾಖಲಾಗಿದ್ದ ಪ್ರಕರಣಗಳು ಸೇರಿವೆ.
Karnataka Cabinet meeting (Representative Image)
ಸಚಿವ ಸಂಪುಟ ಸಭೆ (ಪ್ರಾತಿನಿಧಿಕ ಚಿತ್ರ)
Updated on

ಬೆಂಗಳೂರು: ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿಗರ ಮೇಲಿನ ಕೇಸ್‌ಗಳು ಸೇರಿದಂತೆ ರಾಜ್ಯದ ವಿವಿಧ ಭಾಗಗಳ 60 ಪ್ರಕರಣಗಳನ್ನು ಹಿಂಪಡೆಯಲು ನಿರ್ಧರಿಸಲಾಗಿದೆ.

ರೈತ ಮುಖಂಡರು, ವಿದ್ಯಾರ್ಥಿಗಳು ಮತ್ತು ವಿವಿಧ ಸಂಘಟನೆಯ ಕನ್ನಡ ಕಾರ್ಯಕರ್ತರು ಸೇರಿದಂತೆ ಇತರರಿಗೆ ಸಂಬಂಧಿಸಿದ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 60 ಪ್ರಕರಣಗಳನ್ನು ಹಿಂಪಡೆಯಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಸಂಪುಟ ಸಭೆಯ ನಂತರ ತಿಳಿಸಿದ್ದಾರೆ.

2019ರಲ್ಲಿ ಚಿತ್ತಾಪುರದಲ್ಲಿ ನಡೆದ ಕಲ್ಲು ತೂರಾಟ ನಡೆಸಿದವರ ವಿರುದ್ಧ ದಾಖಲಾಗಿರುವ ಪ್ರಕರಣ ಮತ್ತು ಅದೇ ವರ್ಷ ಡಿಕೆ ಶಿವಕುಮಾರ್ ಅವರು ಬೆಂಬಲಿಗರ ವಿರುದ್ಧ ದಾಖಲಾಗಿದ್ದ ಪ್ರಕರಣಗಳು ಸೇರಿವೆ. ಅಲ್ಲದೆ, ಕಾಂಗ್ರೆಸ್ ಶಾಸಕರು ಮತ್ತು ಮುಖಂಡರ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳೂ ಸೇರಿವೆ.

ಆದಾಗ್ಯೂ, ಪ್ರಕರಣಗಳ ಕುರಿತು ಹೆಚ್ಚಿನ ವಿವರಗಳನ್ನು ಸಚಿವರು ಹಂಚಿಕೊಂಡಿಲ್ಲ.

ಅಧಿಕೃತ ಮೂಲಗಳ ಪ್ರಕಾರ, ಸಂಪುಟವು ಹಿಂತೆಗೆದುಕೊಳ್ಳಲು ನಿರ್ಧರಿಸಿರುವ ಪ್ರಕರಣಗಳಲ್ಲಿ 2019ರ ಚಿತ್ತಾಪುರ ಕಲ್ಲು ತೂರಾಟ ಪ್ರಕರಣ ಮತ್ತು 2019ರಲ್ಲಿ ಜಾರಿ ನಿರ್ದೇಶನಾಲಯ (ED) ಬಂಧಿಸಿದ ನಂತರ ಕನಕಪುರದಲ್ಲಿ ಬಸ್ಸುಗಳು ಮತ್ತು ಸರ್ಕಾರಿ ಕಚೇರಿಗಳ ಮೇಲೆ ಕಲ್ಲು ತೂರಾಟ ನಡೆಸಿದ ಆರೋಪದ ಮೇಲೆ ಡಿಕೆ ಶಿವಕುಮಾರ್ ಅವರ ಬೆಂಬಲಿಗರ ವಿರುದ್ಧ ದಾಖಲಾಗಿರುವ ಪ್ರಕರಣಗಳು ಸೇರಿವೆ. ಆಗ ಶಿವಕುಮಾರ್ ಶಾಸಕರಾಗಿದ್ದರು.

Karnataka Cabinet meeting (Representative Image)
ಕನ್ನಡ ಹೋರಾಟಗಾರರು, ರೈತರ ವಿರುದ್ಧದ ಪ್ರಕರಣ ಹಿಂಪಡೆಯಲು ಸಂಪುಟ ಉಪ ಸಮಿತಿ ರಚನೆ: ಎಚ್.ಕೆ ಪಾಟೀಲ್

ಹಿಂದೂ ಕಾರ್ಯಕರ್ತರ ಸುಳಿವಿನ ಮೇರೆಗೆ ಸಾಗಿಸುತ್ತಿದ್ದ ದನಗಳ ತಲೆಗಳನ್ನು ಪೊಲೀಸರು ವಶಪಡಿಸಿಕೊಂಡ ನಂತರ ಚಿತ್ತಾಪುರ ಘಟನೆ ನಡೆದಿದೆ ಎನ್ನಲಾಗಿದೆ.

2012ರಲ್ಲಿ ಡಾ. ಬಿಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಕಾರ್ಯಕ್ರಮದಿಂದ ತಮ್ಮ ನಾಯಕರನ್ನು (ಆಗ ಸಂಸದರಾಗಿದ್ದ) ಹೊರಗಿಟ್ಟಿದ್ದನ್ನು ಪ್ರತಿಭಟಿಸಿ, ಬೆಂಗಳೂರು ಗ್ರಾಮಾಂತರದ ಮಾಜಿ ಸಂಸದ ಡಿಕೆ ಸುರೇಶ್ ಅವರ ಬೆಂಬಲಿಗರ ವಿರುದ್ಧದ ಪ್ರಕರಣಗಳನ್ನು ಸಹ ಹಿಂಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಹಿಂತೆಗೆದುಕೊಳ್ಳಲಾದ ಪ್ರಕರಣಗಳಲ್ಲಿ ರೈತ ಪರ, ದಲಿತ ಪರ, ಕನ್ನಡ ಪರ ಸಂಘಟನೆಗಳು, ರಾಜಕೀಯ ಪಕ್ಷದ ಕಾರ್ಯಕರ್ತರು ಸೇರಿದಂತೆ ವಿವಿಧ ಗುಂಪುಗಳು ಮತ್ತು ವ್ಯಕ್ತಿಗಳ ವಿರುದ್ಧದ ಪ್ರಕರಣಗಳು ಮತ್ತು ವಿವಿಧ ಸ್ಥಳಗಳಲ್ಲಿ ಗಣೇಶ ಮೆರವಣಿಗೆಗೆ ಸಂಬಂಧಿಸಿದ ಗಲಭೆಗಳಿಗೆ ಸಂಬಂಧಿಸಿದಂತೆ ಪ್ರಕರಣಗಳು ಸೇರಿವೆ.

ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ವಿವಿಧ ಸಾರ್ವಜನಿಕ ಪ್ರತಿನಿಧಿಗಳು ಮತ್ತು ಸಾರ್ವಜನಿಕರಿಂದ ಬಂದ ಮನವಿಗಳ ಆಧಾರದ ಮೇಲೆ, ಗೃಹ ಇಲಾಖೆಯು ಅನುಮೋದನೆಗಾಗಿ ಸಚಿವ ಸಂಪುಟದ ಮುಂದೆ ಇಟ್ಟಿತ್ತು.

ಪ್ರತಿಯೊಂದು ಪ್ರಕರಣದಲ್ಲಿಯೂ ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರೀಕ್ಷಕರು, ಪ್ರಾಸಿಕ್ಯೂಷನ್‌ಗಳು ಮತ್ತು ಸರ್ಕಾರಿ ಮೊಕದ್ದಮೆಗಳ ನಿರ್ದೇಶಕರು ಮತ್ತು ಕಾನೂನು ಇಲಾಖೆಯ ಅಭಿಪ್ರಾಯಗಳನ್ನು ಪ್ರತ್ಯೇಕವಾಗಿ ಪಡೆಯಲಾಗುತ್ತದೆ. ನಂತರ, ಸರ್ಕಾರ ರಚಿಸಿದ ಸಚಿವ ಸಂಪುಟ ಉಪಸಮಿತಿಯ ಮುಂದೆ ಇದನ್ನು ಇಡಲಾಗುತ್ತದೆ. ಸಂಪುಟ ಉಪಸಮಿತಿಯಲ್ಲಿ ಸೂಕ್ತವೆಂದು ನಿರ್ಧರಿಸಲಾದ ಪ್ರಕರಣಗಳನ್ನು ಅಂತಿಮವಾಗಿ ಸಂಪುಟದ ಮುಂದೆ ಇಡಲಾಗುತ್ತದೆ ಎಂದು ಅಧಿಕಾರಿಯೊಬ್ಬರು ಪ್ರಕ್ರಿಯೆಯನ್ನು ವಿವರಿಸುತ್ತಾ ಹೇಳಿದರು.

ಮೂಲಗಳ ಪ್ರಕಾರ, ಗೃಹ ಇಲಾಖೆ, ಡಿಜಿಪಿ ಮತ್ತು ಐಜಿಪಿ, ಪ್ರಾಸಿಕ್ಯೂಷನ್ ಮತ್ತು ಸರ್ಕಾರಿ ಮೊಕದ್ದಮೆಗಳ ನಿರ್ದೇಶಕರು ಮತ್ತು ಕಾನೂನು ಇಲಾಖೆ ಈ ಎಲ್ಲಾ ಪ್ರಕರಣಗಳನ್ನು ಹಿಂಪಡೆಯದಂತೆ ಸಲಹೆ ನೀಡಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com