South Kodagu: ಮೂರು ತಿಂಗಳಿಂದ ಪೌಷ್ಟಿಕ ಆಹಾರವಿಲ್ಲದೆ ಪರದಾಡುತ್ತಿರುವ ಬುಡುಕಟ್ಟು ಕುಟುಂಬಗಳು!

ಸರ್ಕಾರವು ಬುಡಕಟ್ಟು ಜನರಿಗೆ ಪೌಷ್ಠಿಕ ಆಹಾರವನ್ನು ನೀಡುತ್ತಿತ್ತು. ಹೆಚ್ಚಿನ ಸಂಖ್ಯೆಯ ಜನರು ನಿರುದ್ಯೋಗಿಗಳಾಗಿದ್ದು, ಬಡತನದಿಂದ ಬಳಲುತ್ತಿರುವ ಕಾರಣ ಜೀವನ ನಿರ್ವಹಣೆಗೆ ಈ ಆಹಾರ ಪದಾರ್ಥಗಳು ನೆರವಾಗಿವೆ
Tribal families in South Kodagu
ಬುಡಕಟ್ಟು ಜನರು
Updated on

ಮಡಿಕೇರಿ: ದಕ್ಷಿಣ ಕೊಡಗಿನ ವಿವಿಧ ಕಡೆಗಳಲ್ಲಿ ನೆಲೆಸಿರುವ ಬುಡಕಟ್ಟು ಜನರಿಗೆ ಕಳೆದ ಮೂರು ತಿಂಗಳಿಂದ ಐಟಿಡಿಪಿ (ITDP) ಇಲಾಖೆಯಿಂದ ಪೌಷ್ಠಿಕ ಆಹಾರ ವಿತರಿಸಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡು ಆಹಾರ ಪದಾರ್ಥಗಳ ಪೂರೈಕೆಗೆ ಮುಂದಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಮಾಲ್ದಾರೆ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಬುಡಕಟ್ಟು ಜನಾಂಗದ 150 ಕ್ಕೂ ಹೆಚ್ಚು ಕುಟುಂಬಗಳು ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿ ಜೀವನ ಸಾಗಿಸಲು ಪರದಾಡುವಂತಾಗಿದೆ. ಈ ಕುರಿತು ಮಾತನಾಡಿದ ನಿವಾಸಿ ಇಂದಿರಾ, ಸರ್ಕಾರವು ಬುಡಕಟ್ಟು ಜನರಿಗೆ ಪೌಷ್ಠಿಕ ಆಹಾರವನ್ನು ನೀಡುತ್ತಿತ್ತು. ಹೆಚ್ಚಿನ ಸಂಖ್ಯೆಯ ಜನರು ನಿರುದ್ಯೋಗಿಗಳಾಗಿದ್ದು, ಬಡತನದಿಂದ ಬಳಲುತ್ತಿರುವ ಕಾರಣ ಜೀವನ ನಿರ್ವಹಣೆಗೆ ಈ ಆಹಾರ ಪದಾರ್ಥಗಳು ನೆರವಾಗಿವೆ. ಆದರೆ ಕಳೆದ ಮೂರು ತಿಂಗಳಿಂದ ಯಾವುದೇ ವಸ್ತುಗಳು ಬಂದಿಲ್ಲ ಎಂದು ನೋವು ತೋಡಿಕೊಂಡರು.

ಕಾಡಿನಲ್ಲಿ ವಾಸಿಸುವ ಬುಡಕಟ್ಟು ಸಮುದಾಯ ಎಲ್ಲಾ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿದೆ. ಕನಿಷ್ಠ ಹಸಿವಿನಿಂದ ಬಳಲದಂತೆ ಖಾತ್ರಿಪಡಿಸಲಾಗಿತ್ತು. ಆದರೆ ಕಳೆದ ಮೂರು ತಿಂಗಳುಗಳಿಂದ ಆಹಾರ ಪದಾರ್ಥ ಪೂರೈಕೆಯಾಗದೆ ಹಸಿವು ನೀಗಿಸುವುದು ಕಷ್ಟಕರವಾಗಿದೆ.

ಗಿರಿಜನ ಕಾಲೋನಿಗಳಿಗೆ ಆಹಾರ ಸರಬರಾಜು ಮಾಡುವ ಟೆಂಡರ್ ಅನ್ನು ಜಿಲ್ಲೆಯ ಹೊರಗಿನ ಗುತ್ತಿಗೆದಾರರಿಗೆ ನೀಡಲಾಗಿದೆ. ಜಿಲ್ಲೆಯ ಗುತ್ತಿಗೆದಾರರಿಗೆ ನೀಡಿದರೆ ಸಕಾಲದಲ್ಲಿ ಆಹಾರ ಪದಾರ್ಥಗಳು ಪೂರೈಕೆಯಾಗುತ್ತವೆ ಎಂದು ಅವರು ಹೇಳಿದರು.

ಈ ಮಧ್ಯೆ ಈಶಾನ್ಯ ರಾಜ್ಯಗಳಿಂದ ವಲಸೆ ಕಾರ್ಮಿಕರ ಸಂಖ್ಯೆ ಹೆಚ್ಚುತ್ತಿದ್ದು, ಎಸ್ಟೇಟ್ ಕಾರ್ಮಿಕರಾಗಿ ತಮ್ಮ ಉದ್ಯೋಗವನ್ನು ಕಸಿದುಕೊಳ್ಳುವ ಕಾರಣದಿಂದ ತಮ್ಮ ಜೀವನೋಪಾಯಕ್ಕೆ ತೀವ್ರ ತೊಂದರೆಯಾಗಿದೆ ಎಂದು ಬುಡಕಟ್ಟು ಜನಾಂಗದವರು ದೂರಿದ್ದಾರೆ. ವಲಸೆ ಕಾರ್ಮಿಕರು ಹೆಚ್ಚಾಗಿ ಕಾಫಿ ತೋಟಗಳಲ್ಲಿ ವಾಸಿಸುತ್ತಿದ್ದು, ಕಡಿಮೆ ವೇತನಕ್ಕೆ ಕೆಲಸ ಮಾಡುತ್ತಾರೆ. ಇದರಿಂದಾಗಿ ಹಲವು ಬುಡಕಟ್ಟು ಜನರು ನಿರುದ್ಯೋಗಿಗಳಾಗಿದ್ದಾರೆ. ನಿರುದ್ಯೋಗದ ಜೊತೆಗೆ ಪೌಷ್ಟಿಕ ಆಹಾರ ಪೂರೈಕೆಯ ಕೊರತೆ ನಮ್ಮನ್ನು ಬಾಧಿಸುತ್ತಿದೆ ಎಂದರು.

ಈ ಕುರಿತು ಐಟಿಡಿಪಿ ಇಲಾಖೆ ಜಿಲ್ಲಾ ನಿರ್ದೇಶಕ ಹೊನ್ನೇಗೌಡ ಅವರನ್ನು ಪ್ರಶ್ನಿಸಿದಾಗ, ‘ತಾಂತ್ರಿಕ ಸಮಸ್ಯೆಯಿಂದ ಪೌಷ್ಟಿಕ ಆಹಾರ ಪೂರೈಕೆಯಲ್ಲಿ ವಿಳಂಬವಾಗಿದೆ. ಗುಣಮಟ್ಟದ ಸಮಸ್ಯೆಯಿಂದ ಮೈಸೂರಿನಲ್ಲಿ ಎಫ್‌ಎಸ್‌ಎಸ್‌ಎಐ ಪರೀಕ್ಷೆಗೆ ಎಣ್ಣೆಯ ಮಾದರಿಯನ್ನು (ಪೌಷ್ಠಿಕ ಆಹಾರ ಯೋಜನೆಯಡಿ ಸರಬರಾಜು ಮಾಡಲಾದ) ಕಳುಹಿಸಿದ್ದೇವೆ. ಗುಣಮಟ್ಟ ಪರಿಶೀಲನಾ ವರದಿ ವಿಳಂಬವಾಗಿದೆ. ಪ್ರತಿ ತಿಂಗಳು 20ರೊಳಗೆ ಆಹಾರ ಪೂರೈಕೆ ಮಾಡುವಂತೆ ಗುತ್ತಿಗೆದಾರರಿಗೆ ಇಲಾಖೆ ಆದೇಶ ನೀಡಿದೆ ಎಂದು ತಿಳಿಸಿದರು.

Tribal families in South Kodagu
ಸ್ವಯಂಪ್ರೇರಿತ ಸ್ಥಳಾಂತರಕ್ಕೆ ಭೀಮಗಡ ವನ್ಯಜೀವಿ ಅಭಯಾರಣ್ಯದ ಬುಡಕಟ್ಟು ಜನಾಂಗ ಸಮ್ಮತಿ: ಖಂಡ್ರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com