ಕೋರ್ಟ್ ಆವರಣದಲ್ಲಿ ಮಹಿಳೆ ಮೇಲೆ ನಾಯಿ ದಾಳಿ; ತೀವ್ರ ರಕ್ತಸ್ರಾವ!

ಸಂತ್ರಸ್ತೆಯನ್ನು ತಿಪಟೂರು ತಾಲ್ಲೂಕಿನ ಬೀರಸಂದ್ರ ಗ್ರಾಮದ ನಿವಾಸಿ ಗಂಗೂಬಾಯಿ (35) ಎಂದು ಗುರುತಿಸಲಾಗಿದೆ
The victim, Gangubai, being rescued after a stray dog attacked her
ಕೋರ್ಟ್ ಆವರಣದಲ್ಲಿ ಮಹಿಳೆ ಮೇಲೆ ನಾಯಿ ದಾಳಿonline desk
Updated on

ನ್ಯಾಯಾಲಯದ ಆವರಣದಲ್ಲಿ ಬೀದಿ ನಾಯಿಯೊಂದು ಮಹಿಳೆಯ ಮೇಲೆ ಭೀಕರವಾಗಿ ದಾಳಿ ನಡೆಸಿದ್ದು, ತೀವ್ರ ರಕ್ತಸ್ರಾವವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ತುಮಕೂರು ಜಿಲ್ಲೆಯ ಗುಬ್ಬಿ ನ್ಯಾಯಾಲಯದ ಆವರಣದಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತೆಯನ್ನು ತಿಪಟೂರು ತಾಲ್ಲೂಕಿನ ಬೀರಸಂದ್ರ ಗ್ರಾಮದ ನಿವಾಸಿ ಗಂಗೂಬಾಯಿ (35) ಎಂದು ಗುರುತಿಸಲಾಗಿದ್ದು, ಕೌಟುಂಬಿಕ ಕಲಹ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ನ್ಯಾಯಾಲಯಕ್ಕೆ ಬಂದಿದ್ದರು.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಗಂಗೂಬಾಯಿ ಶೌಚಾಲಯದಿಂದ ಹೊರಬಂದಾಗ ನಾಯಿ ಆಕೆಯ ಮೇಲೆ ಎರಗಿದೆ. ಆಕೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ, ಆ ಪ್ರಾಣಿ ಪದೇ ಪದೇ ದಾಳಿ ಮಾಡಿ, ಆಕೆಯ ಮುಖವನ್ನು ಕಚ್ಚಿದೆ. ಆಕೆಯ ಕಿರುಚಾಟ ಕೇಳಿ ಸ್ಥಳೀಯರು ಧಾವಿಸಿ ಆಕೆಯನ್ನು ರಕ್ಷಿಸಲು ಹೋಗಿ ನಾಯಿಯ ಹಿಡಿತದಿಂದ ಬಿಡಿಸುವಲ್ಲಿ ಯಶಸ್ವಿಯಾದರು. ಘಟನೆಯಿಂದ ಆಘಾತಕ್ಕೊಳಗಾದ ಮತ್ತು ಕೋಪಗೊಂಡ ಅವರು ನಂತರ ನಾಯಿಯನ್ನು ಬೆನ್ನಟ್ಟಿ ಕೊಂದಿದ್ದಾರೆ.

ಗಾಯಾಳು ಮಹಿಳೆಯನ್ನು ಮೊದಲು ಚಿಕಿತ್ಸೆಗಾಗಿ ಗುಬ್ಬಿ ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ನಂತರ ಉನ್ನತ ವೈದ್ಯಕೀಯ ಚಿಕಿತ್ಸೆಗಾಗಿ ಬೆಂಗಳೂರಿಗೆ ಸ್ಥಳಾಂತರಿಸಲಾಯಿತು.

The victim, Gangubai, being rescued after a stray dog attacked her
'ನನ್ನನ್ನು ಪ್ರಪಂಚದಾದ್ಯಂತ ಪ್ರಸಿದ್ಧರನ್ನಾಗಿ ಮಾಡಿದೆ': ಬೀದಿ ನಾಯಿ ಪ್ರಕರಣದ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶ

ಹೊನ್ನಾಳಿ ತಾಲ್ಲೂಕಿನ ಮಾವಿನ ಕೋಟೆ ಮತ್ತು ಸಾಸ್ವೆಹಳ್ಳಿ ಗ್ರಾಮಗಳಲ್ಲಿ ಬೀದಿ ನಾಯಿಗಳ ದಾಳಿಯಿಂದ ನಾಲ್ವರು ಮಕ್ಕಳು ಮತ್ತು ಒಬ್ಬ ವೃದ್ಧ ಗಾಯಗೊಂಡಿದ್ದಾರೆ. ಸಂತ್ರಸ್ತರಿಗೆ ಶಿವಮೊಗ್ಗ ಮೆಕ್‌ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com