ಕೋಮು ಘರ್ಷಣೆ: ಸೆಪ್ಟೆಂಬರ್ 9 ರಂದು ಮದ್ದೂರು ಬಂದ್‌ಗೆ ಬಿಜೆಪಿ ಕರೆ

ಬಿಜೆಪಿ ಮಂಡ್ಯ ಜಿಲ್ಲಾಧ್ಯಕ್ಷ ಇಂದ್ರೇಶ್ ಎನ್ ಎಸ್ ಈ ಕರೆ ನೀಡಿದ್ದಾರೆ. ಬಿಜೆಪಿಯ ಮಿತ್ರಪಕ್ಷ ಜೆಡಿಎಸ್ ಕೂಡ ಈ ಬಂದ್ ಕರೆಗೆ ಬೆಂಬಲ ನೀಡಿದೆ.
Representative Image
ಪ್ರಾತಿನಿಧಿಕ ಚಿತ್ರonline desk
Updated on

ಮಂಡ್ಯ: ಭಾನುವಾರ ಗಣೇಶ ವಿಸರ್ಜನೆ ಮೆರವಣಿಗೆಯ ಸಂದರ್ಭದಲ್ಲಿ ನಡೆದ ಕೋಮು ಘರ್ಷಣೆಗಳ ನಂತರ ಬಿಜೆಪಿ ಸೋಮವಾರ ಸೆಪ್ಟೆಂಬರ್ 9 ರಂದು ಮದ್ದೂರು ಬಂದ್‌ಗೆ ಕರೆ ನೀಡಿದೆ.

ಬಿಜೆಪಿ ಮಂಡ್ಯ ಜಿಲ್ಲಾಧ್ಯಕ್ಷ ಇಂದ್ರೇಶ್ ಎನ್ ಎಸ್ ಈ ಕರೆ ನೀಡಿದ್ದಾರೆ. ಬಿಜೆಪಿಯ ಮಿತ್ರಪಕ್ಷ ಜೆಡಿಎಸ್ ಕೂಡ ಈ ಬಂದ್ ಕರೆಗೆ ಬೆಂಬಲ ನೀಡಿದೆ.

"ನಾಳೆ ಬಂದ್‌ಗೆ ನಾವು ಸಂಪೂರ್ಣ ಬೆಂಬಲ ನೀಡುತ್ತೇವೆ" ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮದ್ದೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಜನರು ಮತ್ತು ವ್ಯಾಪಾರಿಗಳು ಬಂದ್‌ನಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಅವರು ಮನವಿ ಮಾಡಿದರು.

Representative Image
Delhi: ಸರ್ಕಾರದ ಅಧಿಕೃತ ಸಭೆಯಲ್ಲಿ ಸಿಎಂ ಪತಿ; ರೇಖಾ ಗುಪ್ತಾ ಮತ್ತೊಂದು ವಿವಾದ; ಬಿಜೆಪಿ ವಿರುದ್ಧ AAP, ಕಾಂಗ್ರೆಸ್ ಕಿಡಿ

ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮತ್ತು ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ ಸೇರಿದಂತೆ ರಾಜ್ಯದ ಹಿರಿಯ ಬಿಜೆಪಿ ಕಾರ್ಯಕರ್ತರು ಬುಧವಾರ ನಡೆಯುವ ಸಾಮೂಹಿಕ ಗಣೇಶ ವಿಸರ್ಜನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಇಂದ್ರೇಶ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com