ಬೀದರ್: ಸಾಲ ಬಾಧೆ; ಕಾಲುವೆಗೆ ಹಾರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ!

ಮೃತರನ್ನು ಬೀದರ್ ನ ಮೈಲೂರಿನವರಾದ ಶಿವಮೂರ್ತಿ ಮಾರುತಿ ಬ್ಯಾನರ್ಜಿ (45) ಅವರ ಮೂವರು ಮಕ್ಕಳಾದ ಶ್ರೀಶಾಂತ (9) ರಿತಿಕ್ (7) ಹಾಗೂ ಏಳು ತಿಂಗಳ ರಾಕೇಶ ಎಂದು ಗುರುತಿಸಲಾಗಿದೆ.
Minister Eshwar Khandre Visited to spot
ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಚಿವ ಈಶ್ವರ್ ಖಂಡ್ರೆ
Updated on

ಭಾಲ್ಕಿ: ಒಂದೇ ಕುಟುಂಬದ ನಾಲ್ವರು ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನಲ್ಲಿ ಮಂಗಳವಾರ ನಡೆದಿದೆ. ಕಾರಂಜಾ ಜಲಾಶಯದ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಬೀದರ್ ನ ಮೈಲೂರಿನವರಾದ ಶಿವಮೂರ್ತಿ ಮಾರುತಿ ಬ್ಯಾನರ್ಜಿ (45) ಅವರ ಮೂವರು ಮಕ್ಕಳಾದ ಶ್ರೀಶಾಂತ (9) ರಿತಿಕ್ (7) ಹಾಗೂ ಏಳು ತಿಂಗಳ ರಾಕೇಶ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಶಿವಮೂರ್ತಿ ಅವರ ಪತ್ನಿ ರಮಾಬಾಯಿ, ಮಗ ಶ್ರೀಕಾಂತ ಬದುಕುಳಿದಿದ್ದಾರೆ.

ಸಾಲಬಾಧೆ ಆತ್ಮಹತ್ಯೆಗೆ ಕಾರಣ ಎಂಬುದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಭೇಟಿ ಪರಿಶೀಲನೆ ನಡೆಸಿದರು.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಭಾಲ್ಕಿ ತಾಲೂಕ್ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಧನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Minister Eshwar Khandre Visited to spot
ಟೊಮೊಟೊ ಬೆಳೆದು ನಷ್ಟ: ಸಾಲಬಾಧೆಯಿಂದ ಪಾವಗಡದಲ್ಲಿ ದಂಪತಿ ಆತ್ಮಹತ್ಯೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com