ಗಗನಯಾತ್ರಿ ಶುಭಾಂಶು ಶುಕ್ಲಾ ಜೊತೆ ಸರ್ಕಾರಿ ಶಾಲಾ ಮಕ್ಕಳ ಸಂವಾದ: ಸಚಿವ ಎನ್.ಎಸ್ ಭೋಸರಾಜು

ಆಕ್ಸಿಯಂ-4 ಮಿಷನ್‍ನ ಅಂತರಿಕ್ಷ ಯಾತ್ರಿಕರಾದ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ ವಿದ್ಯಾರ್ಥಿಗಳಿಗೆ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಇಸ್ರೋ ಒಪ್ಪಿಗೆ ನೀಡಿದೆ.
Shubhanshu Shukla
ಶುಭಾಂಶು ಶುಕ್ಲಾ
Updated on

ಬೆಂಗಳೂರು: ವಿದ್ಯಾರ್ಥಿಗಳಿಗಾಗಿ ಜವಾಹರಲಾಲ್ ನೆಹರು ಪ್ಲಾನೆಟೇರಿಯಂನ ಯು.ಆರ್.ರಾವ್ ಭವನದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಅಂತರಿಕ್ಷ ಯಾತ್ರಿಕ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ ಶೀಘ್ರದಲ್ಲೇ ಸಂವಾದ ಕಾರ್ಯಕ್ರಮ ಆಯೋಜಿಸಲಿದೆ ಎಂದು ಕರ್ನಾಟಕದ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಬೋಸರಾಜು ಅವರು ಸೋಮವಾರ ಹೇಳಿದ್ದಾರೆ.

ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಇಸ್ರೋ ಮತ್ತು ಜವಾಹರಲಾಲ್ ನೆಹರು ತಾರಾಲಯದ ಸಹಯೋಗದೊಂದಿಗೆ ಶೀಘ್ರದಲ್ಲೇ ಶುಭಾಂಶು ಶುಕ್ಲಾ ಅವರೊಂದಿಗೆ ವಿದ್ಯಾರ್ಥಿಗಳ ಸಂವಾದವನ್ನು ಆಯೋಜಿಸಲಿದೆ ಎಂದು ಹೇಳಿದ್ದಾರೆ.

ಶುಭಾಂಶು ಶುಕ್ಲಾ ಅವರೊಂದಿಗೆ ಸಂವಾದ ಕಾರ್ಯಕ್ರಮಕ್ಕೆ ಇಸ್ರೋ ಅಧ್ಯಕ್ಷ ಡಾ.ವಿ.ನಾರಾಯಣ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಹಿನ್ನಲೆಯಲ್ಲಿ ಇಸ್ರೋ ಹಾಗೂ ಜವಾಹರಲಾಲ್ ನೆಹರು ಪ್ಲಾನೆಟೇರಿಯಂ(ಜೆಎನ್‍ಪಿ) ಸಹಯೋಗದಲ್ಲಿ ಈ ಸಂವಾದ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ.

ನಮ್ಮ ಮನವಿಯಂತೆ, ಆಕ್ಸಿಯಂ-4 ಮಿಷನ್‍ನ ಅಂತರಿಕ್ಷ ಯಾತ್ರಿಕರಾದ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ ವಿದ್ಯಾರ್ಥಿಗಳಿಗೆ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಇಸ್ರೋ ಒಪ್ಪಿಗೆ ನೀಡಿದೆ. ಬೆಂಗಳೂರಿನ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ನೇರವಾಗಿ ಅಂತರಿಕ್ಷ ಯಾತ್ರಿಕರೊಂದಿಗೆ ಸಂವಾದಿಸಲು ಇದು ಅವಕಾಶ ಕಲ್ಪಿಸಲಿದೆ.

Shubhanshu Shukla
ಸ್ವಂತ ಬಾಹ್ಯಾಕಾಶ ಕೇಂದ್ರ ಸ್ಥಾಪನೆಗೆ ಭಾರತ ಚಿಂತನೆ: ಗಗನಯಾತ್ರಿ ಕ್ಯಾಪ್ಟನ್ ಶುಭಾಂಶು ಶುಕ್ಲಾ

ರಾಜ್ಯದ ಇನ್ನಿತರೆ ಭಾಗಗಳ ವಿದ್ಯಾರ್ಥಿಗಳು ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಾದೇಶಿಕ ವಿಜ್ಞಾನ ಕೇಂದ್ರಗಳಲ್ಲಿ ಲೈವ್ ಸ್ಟ್ರೀಮಿಂಗ್ ಮೂಲಕ ವ್ಯವಸ್ಥೆ ಮಾಡಲಾಗುವುದು. ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ವಿಜ್ಞಾನ, ಸಂಶೋಧನೆ ಹಾಗೂ ಬಾಹ್ಯಾಕಾಶ ಅನ್ವೇಷಣೆಯತ್ತ ಪ್ರೇರೇಪಿಸುತ್ತವೆ. ಕರ್ನಾಟಕವು ಸದಾ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಪ್ರಗತಿಯಲ್ಲಿ ಮುಂಚೂಣಿಯಲ್ಲಿದ್ದು, ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ಕುತೂಹಲ ಮತ್ತು ಹೊಸ ಆಲೋಚನೆಯನ್ನು ಬೆಳೆಸಲು ನೆರವಾಗುತ್ತವೆ ಎಂದು ಹೇಳಿದ್ದಾರೆ.

ಕರ್ನಾಟಕದ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸುವ ನಿಟ್ಟಿನಲ್ಲಿ ನಮ್ಮ ಸರಕಾರ ಬದ್ಧವಾಗಿದೆ. ಇಸ್ರೋ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗುತ್ತಿರುವ ಈ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಅಂತರಿಕ್ಷ ಯಾತ್ರಿಕರೊಂದಿಗೆ ಸಂವಾದಿಸಲು ಅಪರೂಪದ ಅವಕಾಶ ಒದಗಿಸುತ್ತದೆ. ಇದು ಅವರಲ್ಲಿ ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂದುವರಿಯುವ ಉತ್ಸಾಹವನ್ನು ಇನ್ನಷ್ಟು ಪೋಷಿಸಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್) ಪ್ರಯಾಣಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಶುಭಾಂಶು ಶುಕ್ಲಾ, ಜೂನ್​ 25ರಂದು ಫ್ಲೋರಿಡಾದಿಂದ ಉಡಾವಣೆಗೊಂಡು, ಜೂನ್​ 26ರಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಡಾಕ್​ ಮಾಡಲಾದ ಆಕ್ಸಿಯಮ್​-4 ಖಾಸಗಿ ಬಾಹ್ಯಾಕಾಶ ಕಾರ್ಯಾಚರಣೆಯ ಭಾಗವಾಗಿದ್ದರು. ಜುಲೈ 15ರಂದು ಮಿಷನ್​ ಮುಗಿಸಿ, ಭೂಮಿಗೆ ವಾಪಸ್​ ಆಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com