ಬೆಂಗಳೂರು ಅವಳಿ ಸುರಂಗ ರಸ್ತೆ ಯೋಜನೆ: ರಾಜ್ಯ ಸರ್ಕಾರ-ಸಂಸ್ಥೆಗಳಿಗೆ NGT ನೊಟೀಸ್

ಸುರಂಗ ರಸ್ತೆ ಯೋಜನೆಯಲ್ಲಿನ ನ್ಯೂನತೆಗಳ ಬಗ್ಗೆ ಗಮನ ಸೆಳೆಯಲು ಬೆಂಗಳೂರು ಪ್ರಜಾ ವೇದಿಕೆ ಮತ್ತು ಇತರರು ಎರಡು ವಾರಗಳ ಹಿಂದೆ ಅರ್ಜಿ ಸಲ್ಲಿಸಿದ್ದರು. ಮುಂದಿನ ವಿಚಾರಣೆಯನ್ನು ನವೆಂಬರ್ 3 ಕ್ಕೆ ಮುಂದೂಡಲಾಗಿದೆ.
Representational image
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಬೆಂಗಳೂರಿನ ಅತ್ಯಂತ ಚರ್ಚಾಸ್ಪದ ಅವಳಿ ಸುರಂಗ ರಸ್ತೆ ಯೋಜನೆಯ ಕುರಿತು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ವಿಚಾರಣೆ ಆರಂಭಿಸಿದೆ.

ನಿನ್ನೆ ಬುಧವಾರ ನಡೆದ ಮೊದಲ ವಿಚಾರಣೆಯಲ್ಲಿ, ರಾಜ್ಯ ಸರ್ಕಾರ, ಬಿಬಿಎಂಪಿ (ಈಗ ಗ್ರೇಟರ್ ಬೆಂಗಳೂರು ಪ್ರಾಧಿಕಾರ), ಪರಿಸರ ಪರಿಣಾಮ ಮೌಲ್ಯಮಾಪನ ಪ್ರಾಧಿಕಾರ (SEIAA), B-SMILE, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಮತ್ತು ಯೋಜನಾ ಸಲಹೆಗಾರರಿಗೆ ನೋಟಿಸ್ ಜಾರಿ ಮಾಡುವಂತೆ ಎನ್ ಜಿಟಿ ತೀರ್ಪು ನೀಡಿದೆ.

ಸುರಂಗ ರಸ್ತೆ ಯೋಜನೆಯಲ್ಲಿನ ನ್ಯೂನತೆಗಳ ಬಗ್ಗೆ ಗಮನ ಸೆಳೆಯಲು ಬೆಂಗಳೂರು ಪ್ರಜಾ ವೇದಿಕೆ ಮತ್ತು ಇತರರು ಎರಡು ವಾರಗಳ ಹಿಂದೆ ಅರ್ಜಿ ಸಲ್ಲಿಸಿದ್ದರು. ಮುಂದಿನ ವಿಚಾರಣೆಯನ್ನು ನವೆಂಬರ್ 3 ಕ್ಕೆ ಮುಂದೂಡಲಾಗಿದೆ.

Representational image
ಬೆಂಗಳೂರು: ಅವಳಿ ಸುರಂಗ ಯೋಜನೆಗೆ 19,000 ಕೋಟಿ ರೂ ಸಾಲ ಪಡೆಯಲು ಬಿಬಿಎಂಪಿ ನಿರ್ಧಾರ

ಅವಳಿ ಸುರಂಗ ರಸ್ತೆ ಯೋಜನೆಯನ್ನು ತರಾತುರಿಯಲ್ಲಿ 2020 ರ ಸಮಗ್ರ ಚಲನಶೀಲತಾ ಯೋಜನೆಯಲ್ಲಿ ಯಾವುದೇ ವಿಶ್ವಾಸಾರ್ಹ ತಾಂತ್ರಿಕ ಮೌಲ್ಯಮಾಪನ ಅಥವಾ ಬೆಂಬಲ ಇಲ್ಲದೆ ಕಳೆದ ಬಜೆಟ್ ನಲ್ಲಿ ಸರ್ಕಾರ ತರಾತುರಿಯಲ್ಲಿ ಘೋಷಿಸಿತು ಎಂದು ಅರ್ಜಿದಾರರು ಎನ್ ಜಿಟಿಗೆ ತಿಳಿಸಿತ್ತು. ಈ ಪ್ರಸ್ತಾವನೆಯು ರಾಜಕೀಯ ಪ್ರೇರಿತವಾಗಿದ್ದು, ಎರಡು ಬಾರಿ ವಿಫಲವಾದ ನಂತರ ಕಾರ್ಯವಿಧಾನದ ಕುಶಲತೆಯ ಮೂಲಕ ಕಾರ್ಯಸಾಧ್ಯತಾ ಅಧ್ಯಯನಕ್ಕೆ ಮರುಹೊಂದಿಸಲಾಯಿತು ಎಂದು ಅರ್ಜಿಯಲ್ಲಿ ವಿವರಿಸಿದ್ದಾರೆ.

ಅರ್ಜಿದಾರರು ಕಳೆದ ಮೇ ತಿಂಗಳಲ್ಲಿ, ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ವರೆಗೆ 16.74 ಕಿ.ಮೀ ಅವಳಿ-ಟ್ಯೂಬ್ ಸುರಂಗ ಮಾರ್ಗವನ್ನು ನಿರ್ಮಿಸಲು ಸಂಪುಟವು ಅನುಮೋದನೆ ನೀಡಿದೆ ಎಂದು ಸಲ್ಲಿಸಿದ್ದಾರೆ, ಇದನ್ನು ಬಿಲ್ಡ್-ಆಪರೇಟ್-ಟ್ರಾನ್ಸ್‌ಫರ್ ಮಾದರಿಯಡಿಯಲ್ಲಿ 19,000 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.

Representational image
ಬೆಂಗಳೂರು ಸುರಂಗ ರಸ್ತೆ ಯೋಜನೆ 'ಅವೈಜ್ಞಾನಿಕ'; ಬ್ರಹ್ಮಾಂಡ ಭ್ರಷ್ಟಾಚಾರ: ತೇಜಸ್ವಿ ಸೂರ್ಯ ಆರೋಪ

ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ (B-SMILE) ರಚಿಸಲಾಯಿತು. ರೋಡಿಕ್ ಕನ್ಸಲ್ಟೆಂಟ್ಸ್ ಮೂರು ತಿಂಗಳಲ್ಲಿ ವಿವರವಾದ ಯೋಜನಾ ವರದಿಯನ್ನು (DPR) ಸಿದ್ಧಪಡಿಸಿತು.

ಈ ಮಾರ್ಗವು ಪರಿಸರ ಸೂಕ್ಷ್ಮ ಮತ್ತು ಕಾನೂನುಬದ್ಧವಾಗಿ ಸಂರಕ್ಷಿತ ಪ್ರದೇಶಗಳ ಮೂಲಕ ಹಾದುಹೋಗುತ್ತದೆ, ಇದರಲ್ಲಿ ಲಾಲ್ ಬಾಗ್‌ನಲ್ಲಿರುವ ಪೆನಿನ್ಸುಲರ್ ಗ್ನೀಸ್, ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ವರೆಗೆ 16.74 ಕಿ.ಮೀ ಅವಳಿ- ಸುರಂಗ ಮಾರ್ಗ ಮತ್ತು ತೀವ್ರವಾಗಿ ಕಲುಷಿತಗೊಂಡ ಪೀಣ್ಯ ಕೈಗಾರಿಕಾ ಪ್ರದೇಶ ಸೇರಿವೆ. ಈ ವಲಯಗಳು ಅಂತರ್ಜಲ ಸವಕಳಿ, ಮಣ್ಣಿನ ಅಸ್ಥಿರತೆ ಮತ್ತು ಪ್ರವಾಹದ ಹೆಚ್ಚಿನ ಅಪಾಯವನ್ನು ಎದುರಿಸುತ್ತವೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com