ಧರ್ಮಸ್ಥಳ ಪ್ರಕರಣ: ದೂರುದಾರ 'ಬುರುಡೆ' ಚಿನ್ನಯ್ಯನ ಜಾಮೀನು ಅರ್ಜಿ ವಜಾ

ಶಿವಮೊಗ್ಗ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಚಿನ್ನಯ್ಯನನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.
Arrested witness-complainant in the Dharmasthala case.
ದೂರುದಾರ ಚಿನ್ನಯ್ಯ
Updated on

ಮಂಗಳೂರು: ಕಳೆದ ಎರಡು ದಶಕಗಳಲ್ಲಿ ಧರ್ಮಸ್ಥಳದಲ್ಲಿ ಹಲವಾರು ಕೊಲೆ ಮತ್ತು ಅತ್ಯಾಚಾರಗಳು ನಡೆದಿದ್ದು, ನಾನೇ ಆ ಶವಗಳನ್ನು ಹೂತು ಹಾಕಿರುವುದಾಗಿ ಹೇಳಿ, ಈಗ ಜೈಲು ಪಾಲಾಗಿರುವ ಸಿ ಎನ್ ಚಿನ್ನಯ್ಯನ ಜಾಮೀನು ಅರ್ಜಿಯನ್ನು ಬೆಳ್ತಂಗಡಿ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ.

ಶಿವಮೊಗ್ಗ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಚಿನ್ನಯ್ಯನನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.

"ಅನಾರೋಗ್ಯ" ಮತ್ತು "ಕೌಟುಂಬಿಕ ಜವಾಬ್ದಾರಿಗಳ" ಆಧಾರದ ಮೇಲೆ ಜಾಮೀನು ಕೋರಿ ಚಿನ್ನಯ್ಯ ಅರ್ಜಿ ಸಲ್ಲಿಸಿದ್ದರು. ಆದರೆ ಜಾಮೀನು ನೀಡದಂತೆ ಎಸ್​ಐಟಿ ಪರ ವಕೀಲರು ಆಕ್ಷೇಪಣೆ ಸಲ್ಲಿಕೆ ಮಾಡಿದ್ದರು. ಎರಡು ಕಡೆಯ ವಾದ-ಪ್ರತಿವಾದ ಆಲಿಸಿದ ಬೆಳ್ತಂಗಡಿ ನ್ಯಾಯಾಲಯದ ನ್ಯಾಯಾಧೀಶ ವಿಜಯೇಂದ್ರ ಅವರು ಚಿನ್ನಯ್ಯನ ಜಾಮೀನು ಅರ್ಜಿ ವಜಾ ಮಾಡಿ ಇಂದು ಆದೇಶ ಹೊರಡಿಸಿದ್ದಾರೆ.

Arrested witness-complainant in the Dharmasthala case.
ಧರ್ಮಸ್ಥಳ ಪ್ರಕರಣ: ಬುರುಡೆ Media? ಷಡ್ಯಂತ್ರ? ಹೊಸ ವಿಡಿಯೋ ಬಿಡುಗಡೆ ಮಾಡಿದ ಯು ಟ್ಯೂಬರ್ ಸಮೀರ್! Video

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಗಳ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ) ಚಿನ್ನಯ್ಯ ತೋರಿಸಿದ್ದ ಎಲ್ಲಾ ಜಾಗಗಳಲ್ಲಿ ಅಗೆದು ನೋಡಿದರೂ ಯಾವುದೇ ಶವದ ಕುರುಹುಗಳು ಪತ್ತೆಯಾಗಿಲ್ಲ. ಹೀಗಾಗಿ ಚಿನ್ನಯ್ಯನನ್ನು ಆಗಸ್ಟ್ 23 ರಂದು ಬಂಧಿಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com