UKP 3ನೇ ಹಂತ: ನೀರಾವರಿ ಭೂಮಿಗೆ 40 ಲಕ್ಷ ರೂ. ಪರಿಹಾರ ನೀಡಲು ಸಚಿವ ಸಂಪುಟ ನಿರ್ಧಾರ

ಈ ಸಂಬಂಧ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
CM Siddaramaiah (File photo)
ಸಿದ್ದರಾಮಯ್ಯ ಸಚಿವ ಸಂಪುಟ ಸಭೆ
Updated on

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆಯ(ಯುಕೆಪಿ) ಮೂರನೇ ಹಂತದ ಭೂ ಸ್ವಾಧೀನಕ್ಕೆ ರಾಜ್ಯ ಸರ್ಕಾರ ಮಂಗಳವಾರ ಪರಿಹಾರ ನಿಗದಿ ಮಾಡಿದ್ದು, ನೀರಾವರಿ ಭೂಮಿಗೆ ಎಕರೆಗೆ 40 ಲಕ್ಷ ರೂ. ಮತ್ತು ಒಣ ಭೂಮಿಗೆ ಎಕರೆಗೆ 30 ಲಕ್ಷ ರೂ. ಪರಿಹಾರವನ್ನು ನೀಡಲು ನಿರ್ಧರಿಸಿದೆ.

ಈ ಸಂಬಂಧ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಯುಕೆಪಿ ಮೂರನೇ ಹಂತವು ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 519 ರಿಂದ 524 ಮೀಟರ್‌ಗೆ ಹೆಚ್ಚಿಸುವುದನ್ನು ಒಳಗೊಂಡಿರುತ್ತದೆ. ಇದು ಶೇಖರಣಾ ಸಾಮರ್ಥ್ಯವನ್ನು 100 ಟಿಎಂಸಿ ಅಡಿ ಹೆಚ್ಚಿಸುತ್ತದೆ. ಇದಕ್ಕೆ 1.33 ಲಕ್ಷ ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳುವ ಅಗತ್ಯವಿದೆ. ಇದರಲ್ಲಿ ಮುಳುಗಡೆಯಾಗುವ 75,563 ಎಕರೆ ಭೂಮಿ ಸಹ ಸೇರಿದೆ.

CM Siddaramaiah (File photo)
ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ: ಜನರ ಪುನರ್ವಸತಿ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ- ಸಿಎಂ

"ಈ ಪ್ರದೇಶದ ರೈತರು, ಸಚಿವರು ಮತ್ತು ಶಾಸಕರು ನೀರಾವರಿ ಭೂಮಿಗೆ ಎಕರೆಗೆ ಕನಿಷ್ಠ 40 ಲಕ್ಷ ರೂ. ಮತ್ತು ಒಣ ಭೂಮಿಗೆ ಎಕರೆಗೆ 30 ಲಕ್ಷ ರೂ. ಪಾವತಿಸಬೇಕೆಂದು ಬೇಡಿಕೆ ಇಟ್ಟಿದ್ದರು. ಅದಕ್ಕೆ ಅನುಗುಣವಾಗಿ ನಾವು ಸಂಪುಟದಲ್ಲಿ ಅದೇ ಮೊತ್ತವನ್ನು ಪಾವತಿಸಲು ನಿರ್ಧರಿಸಿದ್ದೇವೆ" ಎಂದು ಸಿದ್ದರಾಮಯ್ಯ ಹೇಳಿದರು.

ವಿಶೇಷ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕಾಲುವೆ ಕಾಮಗಾರಿಗೆ 51,000 ಎಕರೆಗೂ ಹೆಚ್ಚು ಭೂಮಿಯ ಅಗತ್ಯವಿದೆ ಮತ್ತು 23,000 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಕೆಲಸ ಪೂರ್ಣಗೊಂಡಿದೆ. ಇದಕ್ಕಾಗಿ ನೀರಾವರಿ ಭೂಮಿಗೆ 30 ಲಕ್ಷ ರೂ. ಮತ್ತು ಒಣ ಭೂಮಿಗೆ 25 ಲಕ್ಷ ರೂ. ಪರಿಹಾರವನ್ನು ನಿಗದಿಪಡಿಸಲಾಗಿದೆ ಮತ್ತು ಬರಡು ಭೂಮಿಗೆ ನೀರು ಕೊಟ್ಟಂತೆ ಆಗುತ್ತೆ ಎಂದು ಹೇಳಿದರು.

"ಪರಿಹಾರವನ್ನು ಮೂರು ಹಣಕಾಸು ವರ್ಷಗಳಲ್ಲಿ ಪಾವತಿಸಲಾಗುವುದು. ಜನಪ್ರತಿನಿಧಿಗಳು ರೈತರ ಮನವೊಲಿಸುವ ಜವಾಬ್ದಾರಿಯನ್ನು ವಹಿಸಿಕೊಂಡಿರುವುದರಿಂದ ಒಪ್ಪಿಗೆ ಪ್ರಶಸ್ತಿಗಳನ್ನು ನೀಡಲಾಗುವುದು. ಅವರು ಸ್ವೀಕರಿಸುತ್ತಾರೆ ಎಂಬ ವಿಶ್ವಾಸ ನಮಗಿದೆ" ಎಂದು ಸಿಎಂ ತಿಳಿಸಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಿದ್ದರಾಮಯ್ಯ, ಪ್ರತಿ ವರ್ಷ ಸುಮಾರು 15,000-20,000 ಕೋಟಿ ರೂ. ಖರ್ಚು ಮಾಡಲಾಗುವುದು ಎಂದು ಹೇಳಿದರು.

ಒಟ್ಟಾರೆಯಾಗಿ, ಈ ಯೋಜನೆಗೆ 70,000 ಕೋಟಿ ರೂ.ಗಳಿಗೂ ಹೆಚ್ಚು ವೆಚ್ಚವಾಗಲಿದೆ.

ಸಂಪುಟದ ನಿರ್ಧಾರವನ್ನು "ಐತಿಹಾಸಿಕ" ಎಂದು ಬಣ್ಣಿಸಿದ ಮುಖ್ಯಮಂತ್ರಿ, 2023 ರಲ್ಲಿ ಹಿಂದಿನ ಬಿಜೆಪಿ ಸರ್ಕಾರ ನೀರಾವರಿ ಮತ್ತು ಒಣ ಭೂಮಿಗೆ ಎಕರೆಗೆ ಕ್ರಮವಾಗಿ 24 ಲಕ್ಷ ಮತ್ತು 20 ಲಕ್ಷ ರೂ.ಗಳನ್ನು ನೀಡಲು ನಿರ್ಧರಿಸಿತ್ತು. ಆದರೆ ರೈತರು ಅದನ್ನು ಒಪ್ಪಲಿಲ್ಲ ಮತ್ತು ಯೋಜನೆ ಕಾರ್ಯಗತಗೊಳಿಸಲಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com